ಆಕ್ಸಿಜನ್ ಸಿಲಿಂಡರ್ ಸಾಗಿಸುತ್ತಿರುವ ಕಾರ್ಮಿಕರು 
ದೇಶ

ವೈದ್ಯಕೀಯೇತರ ಉದ್ದೇಶಗಳಿಗೆ ಆಕ್ಸಿಜನ್ ಬಳಕೆ ನಿಷೇಧ, ಉತ್ಪಾದನೆ ಗರಿಷ್ಠಗೊಳಿಸಲು ಕಂಪನಿಗಳಿಗೆ ಕೇಂದ್ರ ಸೂಚನೆ

ಹೆಚ್ಚಿನ ಜನರಿಗೆ ಆಮ್ಲಜನಕ ಲಭ್ಯವಾಗುವಂತೆ ಮಾಡುವ ಪ್ರಯತ್ನದ ಭಾಗವಾಗಿ ಕೇಂದ್ರ ಸರ್ಕಾರ ಯಾವುದೇ ವೈದ್ಯಕೀಯೇತರ ಉದ್ದೇಶಕ್ಕಾಗಿ ಲಿಕ್ವಿಡ್ ಆಕ್ಸಿಜನ್ ಬಳಸುವುದನ್ನು..

ನವದೆಹಲಿ: ಹೆಚ್ಚಿನ ಜನರಿಗೆ ಆಮ್ಲಜನಕ ಲಭ್ಯವಾಗುವಂತೆ ಮಾಡುವ ಪ್ರಯತ್ನದ ಭಾಗವಾಗಿ ಕೇಂದ್ರ ಸರ್ಕಾರ ಯಾವುದೇ ವೈದ್ಯಕೀಯೇತರ ಉದ್ದೇಶಕ್ಕಾಗಿ ಲಿಕ್ವಿಡ್ ಆಕ್ಸಿಜನ್ ಬಳಸುವುದನ್ನು ಭಾನುವಾರ ನಿಷೇಧಿಸಿದೆ ಮತ್ತು ಉತ್ಪಾದನೆಯನ್ನು ಗರಿಷ್ಠಗೊಳಿಸುವಂತೆ ಆಕ್ಸಿಜನ್ ಉತ್ಪಾದನಾ ಘಟಕಗಳಿಗೆ ಸೂಚಿಸಿದೆ.

ಕೊರೋನಾ ವೈರಸ್ ಸಾಂಕ್ರಾಮಿಕದ ಹೊಸ ಅಲೆಯಿಂದ ದೇಶ ತತ್ತರಿಸಿದ್ದು, ಅನೇಕ ಭಾಗಗಳಲ್ಲಿ, ವಿಶೇಷವಾಗಿ ದೆಹಲಿಯಲ್ಲಿ ವೈದ್ಯಕೀಯ ಆಮ್ಲಜನಕದ ತೀವ್ರ ಕೊರತೆ ಕಂಡು ಬಂದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರ ಈ ಆದೇಶ ಹೊರಡಿಸಿದ್ದಾರೆ.

ಕೇಂದ್ರ ಸರ್ಕಾರ ದೇಶದ ವಿವಿಧ ಭಾಗಗಳಲ್ಲಿ ಆಮ್ಲಜನಕ ಉತ್ಪಾದಿಸಲು ಪ್ರಯತ್ನಿಸುತ್ತಿದೆ ಮತ್ತು ಆಕ್ಸಿಜನ್ ಸಾಗಾಣೆಗೆ ವಿಶೇಷ ರೈಲುಗಳನ್ನು ಓಡಿಸುವ ಮೂಲಕ ಹೆಚ್ಚು ಹಾನಿಗೊಳಗಾದ ರಾಜ್ಯಗಳಲ್ಲಿ ಆಮ್ಲಜನಕ ಲಭ್ಯವಾಗುವಂತೆ ಮಾಡುತ್ತಿದೆ.

ಇನ್ನು ಕೇಂದ್ರ ಸರ್ಕಾರ ದೇಶದಲ್ಲಿ ಆಕ್ಸಿಜನ್ ಕೊರತೆ ನೀಗಿಸಲು ಯುನೈಟೆಡ್ ಸ್ಟೇಟ್ಸ್‌ನಿಂದ ಆಮ್ಲಜನಕ ಮತ್ತು ಆಮ್ಲಜನಕ ಸಾಂದ್ರಕಗಳನ್ನು ಸಾಗಿಸಲು ಸಿಂಗಾಪುರ ಮತ್ತು ಯುಎಇಯಂತಹ ದೇಶಗಳಿಂದ ಕ್ರಯೋಜೆನಿಕ್ ಟ್ಯಾಂಕ್‌ಗಳನ್ನು ಪಡೆಯುತ್ತಿದೆ.

ವಿಪತ್ತು ನಿರ್ವಹಣಾ ಕಾಯ್ದೆಯಡಿ ನೀಡಲಾಗಿರುವ ಅಧಿಕಾರವನ್ನು ಚಲಾಯಿಸಿ, "ಯಾವುದೇ ವೈದ್ಯಕೀಯೇತರ ಉದ್ದೇಶಕ್ಕಾಗಿ ದ್ರವ ಆಮ್ಲಜನಕದ ಬಳಕೆಯನ್ನು ಅನುಮತಿಸಲಾಗುವುದಿಲ್ಲ ಮತ್ತು ಎಲ್ಲಾ ಉತ್ಪಾದನಾ ಘಟಕಗಳು ತಮ್ಮ ದ್ರವ ಆಮ್ಲಜನಕದ ಉತ್ಪಾದನೆಯನ್ನು ಗರಿಷ್ಠಗೊಳಿಸಬೇಕು" ಎಂದು ಆಕ್ಸಿಜನ್ ಘಟಕಗಳಿಗೆ ಸೂಚಿಸುವಂತೆ ಕೇಂದ್ರ ಗೃಹ ಕಾರ್ಯದರ್ಶಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ ಸರ್ಕಾರಗಳಿಗೆ ನಿರ್ದೇಶನ ನೀಡಿದ್ದಾರೆ. 

ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಆಕ್ಸಿಜನ್ ವೈದ್ಯಕೀಯ ಉದ್ದೇಶಗಳಿಗಾಗಿ ಮಾತ್ರ ಸರ್ಕಾರಕ್ಕೆ ಲಭ್ಯವಾಗುವಂತೆ ಮಾಡಿ ಎಂದು ಕೇಂದ್ರ ಆದೇಶಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT