ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು 
ದೇಶ

ಸೋಮವಾರ ರಾತ್ರಿ ದೆಹಲಿ ತಲುಪಲಿರುವ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು!

ರಾಷ್ಟ್ರ ರಾಜಧಾನಿಗೆ ಸುಮಾರು 70 ಟನ್ ಜೀವ ರಕ್ಷಕ ಅನಿಲವನ್ನು ಸಾಗಿಸುತ್ತಿರುವ  ಮೊದಲ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು ಭಾನುವಾರ ರಾತ್ರಿ ರಾಯಘಡದ ಜಿಂದಾಲ್ ಸ್ಟೀಲ್ ವರ್ಕ್ಸ್ ಪ್ಲಾಂಟ್ ನಿಂದ ನಿರ್ಗಮಿಸಲಿದೆ ಎಂದು ರೈಲ್ವೆ ಮಂಡಲಿ ಅಧ್ಯಕ್ಷ ಸುನೀಶ್ ಶರ್ಮಾ ತಿಳಿಸಿದ್ದಾರೆ.

ನವದೆಹಲಿ: ರಾಷ್ಟ್ರ ರಾಜಧಾನಿಗೆ ಸುಮಾರು 70 ಟನ್ ಜೀವ ರಕ್ಷಕ ಅನಿಲವನ್ನು ಸಾಗಿಸುತ್ತಿರುವ  ಮೊದಲ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು ಭಾನುವಾರ ರಾತ್ರಿ ರಾಯಘಡದ ಜಿಂದಾಲ್ ಸ್ಟೀಲ್ ವರ್ಕ್ಸ್ ಪ್ಲಾಂಟ್ ನಿಂದ ನಿರ್ಗಮಿಸಲಿದೆ ಎಂದು ರೈಲ್ವೆ ಮಂಡಲಿ ಅಧ್ಯಕ್ಷ ಸುನೀಶ್ ಶರ್ಮಾ ತಿಳಿಸಿದ್ದಾರೆ.

ನಾಲ್ಕು ಅಕ್ಸಿಜನ್ ಟ್ಯಾಂಕರ್ ಗಳನ್ನು ಸಾಗಿಸುತ್ತಿರುವ ಈ ರೈಲು ಸೋಮವಾರ ರಾತ್ರಿ ದೆಹಲಿಗೆ ತಲುಪಲಿದೆ. ಅಂಗುಲ್, ಕಾಳಿಂಗ ನಗರ, ರೂರ್ಕೆಲಾ ಮತ್ತು ರಾಯಘಡದಿಂದ ದೆಹಲಿ ಮತ್ತು ಎನ್ ಸಿಆರ್ ವಲಯಕ್ಕೆ ಮೆಡಿಕಲ್ ಆಕ್ಸಿಜನ್  ಸಾಗಿಸಲು 
ರೈಲ್ವೆ ಯೋಜನೆ ಮಾಡಿಕೊಂಡಿರುವುದಾಗಿ ಅವರು ಹೇಳಿದ್ದಾರೆ.

ರಾಷ್ಟ್ರ ರಾಜಧಾನಿ ಹಾಗೂ ಅದರ ಸುತ್ತಮುತ್ತ ಆಕ್ಸಿಜನ್ ಕೊರತೆಯಿಂದ ಜನ ಪಡುತ್ತಿರುವ ಕಷ್ಟದ ಬಗ್ಗೆ ಸಾಮಾಜಿಕ ಜಾಲತಾಣ ಮತ್ತು ವೇದಿಕೆಗಳಲ್ಲಿ ಹತಾಶ ಸಂದೇಶಗಳು  ಹರಿದಾಡುತ್ತಿದ್ದು, ದೇಶದಲ್ಲಿ ಆಕ್ಸಿಜನ್ ಗೆ ತೀವ್ರ ಬೇಡಿಕೆ ಇರುವ ಕಾರಣದಿಂದ ಅಕ್ಸಿಜನ್  ಎಕ್ಸ್ ಪ್ರೆಸ್ ರೈಲನ್ನು ಓಡಿಸಲು ರೈಲ್ವೆ ನಿರ್ಧರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT