ಜಸ್ಟೀಸ್ ಮೋಹನ್ ಎಂ ಶಾಂತನಗೌಡರ್(ಸಂಗ್ರಹ ಚಿತ್ರ) 
ದೇಶ

ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾ.ಮೋಹನ್ ಎಂ.ಶಾಂತನಗೌಡರ್ ನಿಧನ: ಮುಖ್ಯಮಂತ್ರಿ ಸಂತಾಪ 

ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾ. ಮೋಹನ್ ಎಂ ಶಾಂತನಗೌಡರ್ ಗುರ್ ಗಾಂವ್ ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 62 ವರ್ಷವಾಗಿತ್ತು.

ನವದೆಹಲಿ/ಬೆಂಗಳೂರು: ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾ.ಮೋಹನ್ ಎಂ ಶಾಂತನಗೌಡರ್ ಗುರ್ ಗಾಂವ್ ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 62 ವರ್ಷವಾಗಿತ್ತು.

ಶ್ವಾಸಕೋಶದ ಸೋಂಕಿನಿಂದ ಗುರಂಗಾವ್ ನ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದ ಜಸ್ಟೀಸ್ ಶಾಂತನಗೌಡರ್ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ನಿನ್ನೆಯವರೆಗೆ ಅವರ ಆರೋಗ್ಯ ಸ್ಥಿರವಾಗಿತ್ತು, ಆದರೆ ಮಧ್ಯರಾತ್ರಿ 12.30ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ನ್ಯಾಯಮೂರ್ತಿಗಳು ಕೋವಿಡ್ ಸೋಂಕಿಗೆ ತುತ್ತಾಗಿದ್ದರೇ ಎಂಬ ಬಗ್ಗೆ ಸ್ಪಷ್ಟ ಮಾಹಿತಿಯಿಲ್ಲ. ಕರ್ನಾಟಕ ಹಾವೇರಿ ಜಿಲ್ಲೆಯವರಾದ ಮೋಹನ್ ಶಾಂತನಗೌಡರ್ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ, ಕೇರಳ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳಾಗಿಯೂ ಸೇವೆ ಸಲ್ಲಿಸಿದ್ದರು. 2017ರ ಫೆಬ್ರವರಿ 17ರಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಬಡ್ತಿ ಪಡೆದಿದ್ದರು.

ಮೇ 5, 1958ರಲ್ಲಿ ಜನಿಸಿದ್ದ ಅವರು ವಿದ್ಯಾಭ್ಯಾಸ ಮುಗಿಸಿ 1980ರ ಸೆಪ್ಟೆಂಬರ್ 5ರಂದು ಅಡ್ವೊಕೇಟ್ ಆದರು. ಮೇ 12, 2003 ರಂದು ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡರು ನಂತರ, ಸೆಪ್ಟೆಂಬರ್, 2004 ರಲ್ಲಿ ನ್ಯಾಯಾಲಯದಲ್ಲಿ ಖಾಯಂ ನ್ಯಾಯಾಧೀಶರಾದರು.

ನಂತರ ಅವರನ್ನು ಕೇರಳ ಹೈಕೋರ್ಟ್‌ಗೆ ವರ್ಗಾಯಿಸಲಾಯಿತು, ಅಲ್ಲಿ ಅವರು ಆಗಸ್ಟ್ 1, 2016 ರಂದು ಕಾರ್ಯಕಾರಿ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಂಡರು. ಅವರು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಉನ್ನತೀಕರಣಗೊಳ್ಳುವ ಮೊದಲು 2016 ರ ಸೆಪ್ಟೆಂಬರ್ 22 ರಂದು ಕೇರಳ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾಗಿದ್ದರು.

ಜಸ್ಟೀಸ್ ಅವರ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT