ಕೋವಿಡ್ ಪರಿಸ್ಥಿತಿ ನಿರ್ವಹಣೆ: ನಿವೃತ್ತ ಸೇನಾ ವೈದ್ಯಕೀಯ ಸಿಬ್ಬಂದಿಗಳ ಬಳಕೆ 
ದೇಶ

ಕೋವಿಡ್ ಪರಿಸ್ಥಿತಿ ನಿರ್ವಹಣೆ: ನಿವೃತ್ತ ಸೇನಾ ವೈದ್ಯಕೀಯ ಸಿಬ್ಬಂದಿಗಳ ಬಳಕೆಗೆ ಕೇಂದ್ರ ಮುಂದು

ಕೇಂದ್ರ ಸರ್ಕಾರ ಕೋವಿಡ್-19 ಪರಿಸ್ಥಿತಿ ನಿರ್ವಹಣೆಗಾಗಿ ಸೇನಾ ಪಡೆಯ ನಿವೃತ್ತ ವೈದ್ಯಕೀಯ ಸಿಬ್ಬಂದಿಗಳ ಸಹಾಯ ತೆಗೆದುಕೊಳ್ಳಲು ಮುಂದಾಗಿದೆ. 

ನವದೆಹಲಿ: ಕೇಂದ್ರ ಸರ್ಕಾರ ಕೋವಿಡ್-19 ಪರಿಸ್ಥಿತಿ ನಿರ್ವಹಣೆಗಾಗಿ ಸೇನಾ ಪಡೆಯ ನಿವೃತ್ತ ವೈದ್ಯಕೀಯ ಸಿಬ್ಬಂದಿಗಳ ಸಹಾಯ ತೆಗೆದುಕೊಳ್ಳಲು ಮುಂದಾಗಿದೆ. 

ನಿವೃತ್ತರಾಗಿರುವ ಹಾಗೂ ಕಳೆದ 2 ವರ್ಷಗಳಲ್ಲಿ ಅವಧಿಗೂ ಮುನ್ನವೇ ನಿವೃತ್ತಿ ಪಡೆದಿರುವ ವೈದ್ಯಕೀಯ ಸಿಬ್ಬಂದಿಗಳು ತಮ್ಮ ನಿವಾಸ ಇರುವ ಪ್ರದೇಶಗಳಲ್ಲಿಯೇ ಕೋವಿಡ್ ಸೌಲಭ್ಯಗಳಲ್ಲಿ ಸೇವೆ ಸಲ್ಲಿಸಲಿದ್ದಾರೆ ಎಂದು ಕೇಂದ್ರ ಸರ್ಕಾರ ಏ.26 ರಂದು ತಿಳಿಸಿದೆ. 

ಕೋವಿಡ್-19 ನ ಎರಡನೇ ಅಲೆಯನ್ನು ನಿರ್ವಹಣೆ ಮಾಡುವುದಕ್ಕೆ ಸೇನಾ ಪಡೆಗಳಿಂದ ಕೈಗೊಳ್ಳಲಾದ ಕ್ರಮಗಳು ಹಾಗೂ ತಯಾರಿಗಳ ಬಗ್ಗೆ ಸಿಡಿಎಸ್ ಬಿಪಿನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಹಿತಿ ನೀಡಿದ್ದು, ಈ ನಿರ್ಧಾರದ ಬಗ್ಗೆ ತಿಳಿಸಿದ್ದಾರೆ. 
    
ವೈದ್ಯಕೀಯ ತುರ್ತು ಹೆಲ್ಪ್ ಲೈನ್ ಮೂಲಕ ಸಮಾಲೋಚನೆ ನಡೆಸಿ ಚಿಕಿತ್ಸೆ ನೀಡುವಂತೆ ನಿವೃತ್ತ ಸೇನಾ ವೈದ್ಯಕೀಯ ಸಿಬ್ಬಂದಿಗಳಿಗೆ ಮನವಿ ಮಾಡಲಾಗಿದೆ, ಕಳೆದ 2 ವರ್ಷಗಳಲ್ಲಿ ಅವಧಿಗೂ ಮುನ್ನವೇ ನಿವೃತ್ತಿ ಪಡೆದಿರುವ ವೈದ್ಯಕೀಯ ಸಿಬ್ಬಂದಿಗಳಿಗೂ ಮನವಿ ಮಾಡಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. 

ಇದೇ ವೇಳೆ ಸೇನೆಯ ಬಳಿ ಇರುವ ಆಕ್ಸಿಜನ್ ಸಿಲಿಂಡರ್ ಗಳನ್ನು ಆಸ್ಪತ್ರೆಗಳಿಗೆ ತಲುಪಿಸಲಾಗುವುದು ಎಂದೂ ರಾವತ್ ಪ್ರಧಾನಿ ಮೋದಿ ಅವರಿಗೆ ಮಾಹಿತಿ ನೀಡಿದ್ದಾರೆ. ಇನ್ನು ಎಲ್ಲಾ ವೈದ್ಯಕೀಯ ಅಧಿಕಾರಿಗಳನ್ನು ನರ್ಸ್ ಗಳನ್ನು ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುವುದಕ್ಕೆ ನಿಯೋಜನೆ ಮಾಡಲಾಗುವುದು ಎಂದು ಹೇಳಿದ್ದಾರೆ. 

ಕೋವಿಡ್-19 ವಿರುದ್ಧದ ಹೋರಾಟಕ್ಕೆ ಬೃಹತ್ ಪ್ರಮಾಣದಲ್ಲಿ ವೈದ್ಯಕೀಯ ಸೌಕರ್ಯಗಳನ್ನು ಸೃಷ್ಟಿಸಲಾಗುತ್ತಿದೆ ಹಾಗೂ ಸೇನಾ ವೈದ್ಯಕೀಯ ಮೂಲಸೌಕರ್ಯಗಳನ್ನು ಸಾರ್ವಜನಿಕರಿಗೆ ಒದಗಿಸಲಾಗುತ್ತದೆ ಎಂದು ರಾವತ್ ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT