ಲವ್ ಅಗರ್ವಾಲ್ 
ದೇಶ

ಪ್ರಸ್ತುತ ಕೋವಿಡ್ ಪರಿಸ್ಥಿತಿ ಬಗ್ಗೆ ಆತಂಕ ಬೇಡ; ಮನೆಯಲ್ಲೂ ಮಾಸ್ಕ್ ಧರಿಸುವುದು ಒಳ್ಳೆಯದು: ಕೇಂದ್ರ ಆರೋಗ್ಯ ಸಚಿವಾಲಯ

ಪ್ರಸ್ತುತದಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆ ಜನರು ಆತಂಕಪಡಬೇಕಾಗಿಲ್ಲ, ಅಗತ್ಯವಿದ್ದಾಗ ಮಾತ್ರ ಆಸ್ಪತ್ರೆಗೆ ದಾಖಲಾಗಿ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿ ಲವ್ ಅಗರ್ವಾಲ್ ಹೇಳಿದ್ದಾರೆ.

ನವದೆಹಲಿ: ಪ್ರಸ್ತುತದಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆ ಜನರು ಆತಂಕಪಡಬೇಕಾಗಿಲ್ಲ, ಅಗತ್ಯವಿದ್ದಾಗ ಮಾತ್ರ ಆಸ್ಪತ್ರೆಗೆ ದಾಖಲಾಗಿ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿ ಲವ್ ಅಗರ್ವಾಲ್ ಹೇಳಿದ್ದಾರೆ.

ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು ಮತ್ತು ಕೈಗಳನ್ನು ಸ್ಯಾನಿಟೈಸರ್ಸ್ ಗಳಿಂದ ಆಗಾಗ್ಗೆ ಶುದ್ದೀಕರಿಸುವುದು ಜೀವನದ ಭಾಗವಾಗಿರಲಿ ಎಂದು ಅವರು ಸಲಹೆ ನೀಡಿದ್ದಾರೆ.

ನೀತಿ ಆಯೋಗದ ಸದಸ್ಯ ವಿ. ಕೆ. ಪೌಲ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಆಕ್ಸಿಜನ್ ಲಭ್ಯವಿದ್ದು, ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸಲಾಗಿದೆ. ಅನಿಲ ಟ್ಯಾಂಕ್ ಗಳನ್ನು ಸಾಗಿಸಲು ವಾಯುಪಡೆ, ರೈಲ್ವೆ ನೆರವು ನೀಡುತ್ತಿವೆ. ಕೈಗಾರಿಕೆಗಳಿಗೆ ಮೆಡಿಕಲ್ ಆಕ್ಸಿಜನ್ ನೀಡದಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ಬಾಡಿಗೆ ಆಧಾರದ ಮೇಲೆ ಹೊರಗಡೆಯಿಂದ ಆಮ್ಲಜನಕ ಟ್ಯಾಂಕರ್ ಗಳನ್ನು ಪಡೆಯಲಾಗುತ್ತಿದೆ ಎಂದು  ತಿಳಿಸಿದರು.

ನೀತಿ ಆಯೋಗದ ಸದಸ್ಯ ವಿ. ಕೆ. ಪೌಲ್ ಮಾತನಾಡಿ, ಮನೆಯಲ್ಲಿ ಇರುವಾಗಲೂ ಮಾಸ್ಕ್ ಧರಿಸುವಂತೆ ಜನರಿಗೆ ಸಲಹೆ ನೀಡಿದರು.

ಈವರೆಗೂ 14.19 ಕೋಟಿ ಜನರಿಗೆ ಕೊರೋನಾವೈರಸ್ ಲಸಿಕೆ ಹಾಕಲಾಗಿದೆ. ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ, ಆರೋಗ್ಯ ಸಚಿವಾಲಯವು ಸೋಮವಾರ ಎಲ್ಲಾ ರಾಜ್ಯಗಳು ಮತ್ತು ಜಿಲ್ಲೆಗಳಲ್ಲಿ  ಕಂಟೈನ್‌ಮೆಂಟ್, ಕ್ಲಿನಿಕಲ್ ಮ್ಯಾನೇಜ್‌ಮೆಂಟ್ ಮತ್ತು ಕಮ್ಯುನಿಟಿ ಎಂಗೇಜ್‌ಮೆಂಟ್ ಅನ್ನು ಒಳಗೊಂಡಿರುವ 3-ತತ್ವಗಳ ಕಾರ್ಯತಂತ್ರವನ್ನು ವಿವರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT