ಲವ್ ಅಗರ್ವಾಲ್ 
ದೇಶ

ಪ್ರಸ್ತುತ ಕೋವಿಡ್ ಪರಿಸ್ಥಿತಿ ಬಗ್ಗೆ ಆತಂಕ ಬೇಡ; ಮನೆಯಲ್ಲೂ ಮಾಸ್ಕ್ ಧರಿಸುವುದು ಒಳ್ಳೆಯದು: ಕೇಂದ್ರ ಆರೋಗ್ಯ ಸಚಿವಾಲಯ

ಪ್ರಸ್ತುತದಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆ ಜನರು ಆತಂಕಪಡಬೇಕಾಗಿಲ್ಲ, ಅಗತ್ಯವಿದ್ದಾಗ ಮಾತ್ರ ಆಸ್ಪತ್ರೆಗೆ ದಾಖಲಾಗಿ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿ ಲವ್ ಅಗರ್ವಾಲ್ ಹೇಳಿದ್ದಾರೆ.

ನವದೆಹಲಿ: ಪ್ರಸ್ತುತದಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆ ಜನರು ಆತಂಕಪಡಬೇಕಾಗಿಲ್ಲ, ಅಗತ್ಯವಿದ್ದಾಗ ಮಾತ್ರ ಆಸ್ಪತ್ರೆಗೆ ದಾಖಲಾಗಿ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿ ಲವ್ ಅಗರ್ವಾಲ್ ಹೇಳಿದ್ದಾರೆ.

ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು ಮತ್ತು ಕೈಗಳನ್ನು ಸ್ಯಾನಿಟೈಸರ್ಸ್ ಗಳಿಂದ ಆಗಾಗ್ಗೆ ಶುದ್ದೀಕರಿಸುವುದು ಜೀವನದ ಭಾಗವಾಗಿರಲಿ ಎಂದು ಅವರು ಸಲಹೆ ನೀಡಿದ್ದಾರೆ.

ನೀತಿ ಆಯೋಗದ ಸದಸ್ಯ ವಿ. ಕೆ. ಪೌಲ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಆಕ್ಸಿಜನ್ ಲಭ್ಯವಿದ್ದು, ಸಂಗ್ರಹ ಸಾಮರ್ಥ್ಯವನ್ನು ಹೆಚ್ಚಿಸಲಾಗಿದೆ. ಅನಿಲ ಟ್ಯಾಂಕ್ ಗಳನ್ನು ಸಾಗಿಸಲು ವಾಯುಪಡೆ, ರೈಲ್ವೆ ನೆರವು ನೀಡುತ್ತಿವೆ. ಕೈಗಾರಿಕೆಗಳಿಗೆ ಮೆಡಿಕಲ್ ಆಕ್ಸಿಜನ್ ನೀಡದಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ಬಾಡಿಗೆ ಆಧಾರದ ಮೇಲೆ ಹೊರಗಡೆಯಿಂದ ಆಮ್ಲಜನಕ ಟ್ಯಾಂಕರ್ ಗಳನ್ನು ಪಡೆಯಲಾಗುತ್ತಿದೆ ಎಂದು  ತಿಳಿಸಿದರು.

ನೀತಿ ಆಯೋಗದ ಸದಸ್ಯ ವಿ. ಕೆ. ಪೌಲ್ ಮಾತನಾಡಿ, ಮನೆಯಲ್ಲಿ ಇರುವಾಗಲೂ ಮಾಸ್ಕ್ ಧರಿಸುವಂತೆ ಜನರಿಗೆ ಸಲಹೆ ನೀಡಿದರು.

ಈವರೆಗೂ 14.19 ಕೋಟಿ ಜನರಿಗೆ ಕೊರೋನಾವೈರಸ್ ಲಸಿಕೆ ಹಾಕಲಾಗಿದೆ. ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ, ಆರೋಗ್ಯ ಸಚಿವಾಲಯವು ಸೋಮವಾರ ಎಲ್ಲಾ ರಾಜ್ಯಗಳು ಮತ್ತು ಜಿಲ್ಲೆಗಳಲ್ಲಿ  ಕಂಟೈನ್‌ಮೆಂಟ್, ಕ್ಲಿನಿಕಲ್ ಮ್ಯಾನೇಜ್‌ಮೆಂಟ್ ಮತ್ತು ಕಮ್ಯುನಿಟಿ ಎಂಗೇಜ್‌ಮೆಂಟ್ ಅನ್ನು ಒಳಗೊಂಡಿರುವ 3-ತತ್ವಗಳ ಕಾರ್ಯತಂತ್ರವನ್ನು ವಿವರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

ಮೊದಲು ಪರಮೇಶ್ವರ್ ಕೂಲಿ ಚುಕ್ತಾ ಮಾಡಲಿ: ನಂತರ ವಿಧಾನಸಭೆ ವಿಸರ್ಜಿಸಿ ಡಿಕೆಶಿ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ!

ನಾವು ಬಿಟ್ಟರು ಧರ್ಮ, ಜಾತಿ ನಮ್ಮನ್ನು ಬಿಡುವುದಿಲ್ಲ: ಒಕ್ಕಲಿಗನಾಗಿ ಹುಟ್ಟಿದ್ದೇನೆ; ಅಶೋಕಣ್ಣನಿಗೆ ಬ್ಯಾಡ್ಜ್ ಕಳಿಸುತ್ತೇನೆ ಹಾಕಿಕೊಳ್ಳಲಿ; DKS

ಅಮೆರಿಕ ಶಕ್ತಿ ಕೇಂದ್ರ ಶ್ವೇತಭವನ ಬಳಿ ಇಬ್ಬರು ಯುಎಸ್ ರಾಷ್ಟ್ರೀಯ ಗಾರ್ಡ್ ಗಳ ಮೇಲೆ ಗುಂಡಿನ ದಾಳಿ: ಶಂಕಿತನ ಗುರುತು ಪತ್ತೆ

SCROLL FOR NEXT