ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 
ದೇಶ

ಮದ್ರಾಸ್ ಹೈಕೋರ್ಟ್ ಆದೇಶವನ್ನು ಸ್ವಾಗತಿಸಿದ ಮಮತಾ, ಕೇಂದ್ರಿಯ ಪಡೆ ಹಿಂಪಡೆಯಲು ಒತ್ತಾಯ!

ಮದ್ರಾಸ್ ಹೈಕೋರ್ಟ್ ಆದೇಶವನ್ನು ಸ್ವಾಗತಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮುಂದಿನ ಹಂತದ ಚುನಾವಣೆಯಲ್ಲಿ ಕೋವಿಡ್-19 ತಡೆಗಟ್ಟಲು ಕೇಂದ್ರಿಯ ಪಡೆಗಳನ್ನು ಹಿಂಪಡೆಯಬೇಕೆಂದು ಸೋಮವಾರ ಒತ್ತಾಯಿಸಿದ್ದಾರೆ.

ಕೊಲ್ಕತ್ತಾ: ಮದ್ರಾಸ್ ಹೈಕೋರ್ಟ್ ಆದೇಶವನ್ನು ಸ್ವಾಗತಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮುಂದಿನ ಹಂತದ ಚುನಾವಣೆಯಲ್ಲಿ ಕೋವಿಡ್-19 ತಡೆಗಟ್ಟಲು ಕೇಂದ್ರಿಯ ಪಡೆಗಳನ್ನು ಹಿಂಪಡೆಯಬೇಕೆಂದು ಸೋಮವಾರ ಒತ್ತಾಯಿಸಿದ್ದಾರೆ.

ಉತ್ತರ ಕೊಲ್ಕತ್ತಾದಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮದ್ರಾಸ್ ಹೈಕೋರ್ಟ್ ಆದೇಶವನ್ನು  ಸ್ವಾಗತಿಸುತ್ತೇನೆ. ಚುನಾವಣಾ ಆಯೋಗ ತನ್ನ ಜವಾಬ್ದಾರಿಯಿಂದ ಪಲಾಯನವಾಗದಂತೆ ಸ್ಪಷ್ಟವಾಗಿ ಆದೇಶದಲ್ಲಿ ಹೇಳಲಾಗಿದೆ. ಪಶ್ಚಿಮ ಬಂಗಾಳದಲ್ಲಿನ ಪ್ರಸ್ತುತ ಕೋವಿಡ್ ಪರಿಸ್ಥಿತಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಚುನಾವಣಾ ಆಯೋಗ ಕಾರಣ ಎಂದು ಆರೋಪಿಸಿದರು.

ಇದಕ್ಕೂ ಮುನ್ನ ಕೋವಿಡ್-19 ಸಾಂಕ್ರಾಮಿಕದ ನಡುವೆ ವಿಧಾನಸಭಾ ಚುನಾವಣೆ ನಡೆಸುತ್ತಿರುವ ಚುನಾವಣಾ ಆಯೋಗದ ವಿರುದ್ಧ ಮದ್ರಾಸ್ ಹೈಕೋರ್ಟ್ ಕಿಡಿಕಾರಿತ್ತು.

ಮೇ 2 ರಂದು ಕರೂರಿನಲ್ಲಿ ನಡೆಯುವ ಮತ ಎಣಕೆ ವೇಳೆ ಕೋವಿಡ್-19 ಶಿಷ್ಟಚಾರದೊಂದಿಗೆ ಪ್ರಾಮಾಣಿಕವಾಗಿ ಕೌಂಟಿಂಗ್ ನಡೆಸಲು ನಿರ್ದೇಶನ ನೀಡಬೇಕೆಂದು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಚುನಾವಣಾ ಆಯೋಗದ ನಿಲುವು ಅತ್ಯಂತ ಬೇಜಬ್ದಾರಿಯುತದಿಂದ ಕೂಡಿದೆ ಎಂದು ಮುಖ್ಯ ನ್ಯಾಯಾಧೀಶ್ ಸಂಜೀಬ್ ಬ್ಯಾನರ್ಜಿ ಮತ್ತು ನ್ಯಾಯಾಧೀಶ ಎಸ್ ರಾಮಮೂರ್ತಿ ಅವರನ್ನೊಳಗೊಂಡ ಪೀಠ ಹೇಳಿತ್ತು.

ಕೋವಿಡ್ ಪೀಡಿತ ರಾಜ್ಯಗಳಿಂದ ಸುಮಾರು 2 ಲಕ್ಷ ಕೇಂದ್ರಿಯ ಪಡೆಗಳನ್ನು ಹಿಂಪಡೆಯುವಂತೆ ಮನವಿ ಮಾಡುತ್ತೇನೆ. ಶಾಲಾ- ಕಾಲೇಜುಗಳು ಮತ್ತು ಸುರಕ್ಷಿತ ಮನೆಗಳಲ್ಲಿ ಬಿಡಾರ ಹೂಡಿರುವ ಕೇಂದ್ರೀಯ ಪಡೆಗಳು ಕೋವಿಡ್ ನಿರ್ವಹಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದ್ದಾರೆ, ಅವರಲ್ಲಿ ಶೇಕಡಾ 75 ರಷ್ಟು ಜನರು ವೈರಸ್ ಸೋಂಕಿಗೆ ಒಳಗಾಗಬಹುದು. ದಯವಿಟ್ಟು ಅವರನ್ನು ಕೊನೆಯ ಹಂತದಿಂದ ಮತದಾನದಿಂದ ಹಿಂಪಡೆಯಿರಿ ಎಂದು ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT