ಸಂಗ್ರಹ ಚಿತ್ರ 
ದೇಶ

ದಾರುಣ ಘಟನೆ: ಕೋವಿಡ್ ಸೋಂಕಿತ ಪತ್ನಿಯ ಕತ್ತು ಸೀಳಿದ ರೈಲ್ವೆ ಉದ್ಯೋಗಿ, ನಂತರ ತಾನೂ ಆತ್ಮಹತ್ಯೆಗೆ ಶರಣು!

ಪೂರ್ವ ಸೆಂಟ್ರಲ್ ರೈಲ್ವೆ(ಇಸಿಆರ್) ಉದ್ಯೋಗಿಯೊಬ್ಬರು ತಮ್ಮ ಕೋವಿಡ್ ಸೋಂಕಿತ ಹೆಂಡತಿಯನ್ನು ಕೊಂದು ನಂತರ ತಾನು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಾಟ್ನಾದಲ್ಲಿ ವರದಿಯಾಗಿದೆ.

ಪಾಟ್ನಾ: ಪೂರ್ವ ಸೆಂಟ್ರಲ್ ರೈಲ್ವೆ(ಇಸಿಆರ್) ಉದ್ಯೋಗಿಯೊಬ್ಬರು ತಮ್ಮ ಕೋವಿಡ್ ಸೋಂಕಿತ ಹೆಂಡತಿಯನ್ನು ಕೊಂದು ನಂತರ ತಾನು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಾಟ್ನಾದಲ್ಲಿ ವರದಿಯಾಗಿದೆ. 

ಉದ್ಯೋಗಿ ಅತುಲ್ ಲಾಲ್, ಮೊದಲು ತಮ್ಮ ಪತ್ನಿ ತುಲಿಕಾ ಕುಮಾರಿಯವರ ಕತ್ತು ಸೀಳಿ ನಂತರ ಮನೆಯ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದು ಈ ಹೃದಯ ಕದಡುವ ಘಟನೆ ಚಿತ್ರಗುಪ್ತನಗರದಲ್ಲಿ ನಡೆದಿದೆ.

ಕೆಲ ಕುಟುಂಬ ಸಮಸ್ಯೆಗಳ ಬಗ್ಗೆ ಗಂಡ ಮತ್ತು ಹೆಂಡತಿ ಜಗಳವಾಡಿದ್ದರು. ಮಹಿಳೆಗೆ ಕೋವಿಡ್ ಸೋಂಕು ತಗುಲಿರುವುದರಿಂದ ತಮಗೂ ಬರಬಹುದು ಎಂಬ ಆತಂಕದಿಂದ ನೆರೆಹೊರೆಯವರು ಸಮಾಧಾನಪಡಿಸಲು ಪ್ರಯತ್ನಿಸಲಿಲ್ಲ ಎಂದು ಪೊಲೀಸ್ ಇಲಾಖೆಯ ಮೂಲಗಳು ತಿಳಿಸಿವೆ.

ಜಗಳದಿಂದ ಕೋಪಗೊಂಡಿದ್ದ ಅತುಲ್ ಲಾಲ್ ತನ್ನ ಹೆಂಡತಿಯ ಗಂಟಲನ್ನು ಬ್ಲೇಡ್‌ನಿಂದ ಸೀಳಿದ್ದಾನೆ. ಇದನ್ನು ಕಂಡ ಸುಮಾರು 6 ಮತ್ತು 9 ವರ್ಷ ವಯಸ್ಸಿನ ಮಕ್ಕಳು ಕೂಗಾಡಿದ್ದು ಇದರಿಂದ ಹೆದರಿದ ಅತುಲ್ ಲಾಲ್ ಐದನೇ ಮಹಡಿಯಿಂದ ಹಾರಿ  ಸಾವನ್ನಪ್ಪಿದರು. ದಂಪತಿಗಳು ಅರಾ ಜಿಲ್ಲೆಗೆ ಸೇರಿದವರು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT