ಸಾಂದರ್ಭಿಕ ಚಿತ್ರ 
ದೇಶ

ಉತ್ತರಾಖಂಡ: ಚಮೋಲಿಯಲ್ಲಿ ಹಿಮಪಾತ, ಮೃತರ ಸಂಖ್ಯೆ 15ಕ್ಕೆ ಏರಿಕೆ 

ಉತ್ತರಾಖಂಡ್ ರಾಜ್ಯದ ಚಮೋಲಿ ಜಿಲ್ಲೆಯಲ್ಲಿನ ಭಾರತ- ಚೀನಾ ಗಡಿ ಬಳಿಯ ಸುಮ್ನಾ ಬಳಿ ಸಂಭವಿಸಿದ ಹಿಮಪಾತದಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಸೋಮವಾರ ಮೂವರು ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಗೊಪೇಶ್ವರ್: ಉತ್ತರಾಖಂಡ್ ರಾಜ್ಯದ ಚಮೋಲಿ ಜಿಲ್ಲೆಯಲ್ಲಿನ ಭಾರತ- ಚೀನಾ ಗಡಿ ಬಳಿಯ ಸುಮ್ನಾ ಬಳಿ ಸಂಭವಿಸಿದ ಹಿಮಪಾತದಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಸೋಮವಾರ ಮೂವರು ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮೂವರು ನಾಪತ್ತೆಯಾಗಿದ್ದು, ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಚಮೋಲಿ ವಿಪತ್ತು ನಿರ್ವಹಣಾಧಿಕಾರಿ ಎನ್. ಕೆ. ಜೋಶಿ ತಿಳಿಸಿದ್ದಾರೆ. ಧೌಲಿ ಗಂಗಾ ನದಿಯಿಂದ ಹುಟ್ಟುವ ಎರಡು ತೊರೆಗಳಾದ ಗಿರ್ತಿಗಡ್ ಮತ್ತು ಕಿಯೋಗಾದ್ ಸಂಗಮದ ಬಳಿ ಇರುವ ಸುಮ್ನಾ ಗ್ರಾಮದಲ್ಲಿ ಶುಕ್ರವಾರ ಹಿಮಪಾತ ಸಂಭವಿಸಿತ್ತು.  ಕೆಳೆದ ಫೆಬ್ರವರಿಯಲ್ಲಿ ಇಲ್ಲಿಯೇ ಸಂಭವಿಸಿದ್ದ ಹಿಮಪಾತದಿಂದ 80 ಮಂದಿ ಸಾವನ್ನಪ್ಪಿದ್ದು, 126 ಜನರು ನಾಪತ್ತೆಯಾಗಿದ್ದರು.

ಶನಿವಾರ ಹಿಮಪಾತ ಸಂಭವಿಸಿದ್ದ ಸ್ಥಳದಿಂದ ಹತ್ತು, ಭಾನುವಾರ ಎರಡು ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿತ್ತು. ಇಂದು ಮೂರು ಮೃತದೇಹ ಸೇರಿದಂತೆ ಒಟ್ಟಾರೇ ಈವರೆಗೆ 15 ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಅವುಗಳನ್ನು ಜೋಶಿಮಠಕ್ಕೆ ರವಾನಿಸಲಾಗಿದೆ ಎಂದು ಜೋಶಿ ತಿಳಿಸಿದ್ದಾರೆ.

ಮೃತರ ಪೈಕಿ 11 ಮಂದಿ ಜಾರ್ಖಂಡ್ ನಿವಾಸಿಗಳೆದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡಿರುವ ಏಳು ಮಂದಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT