ಬಂಧನ (ಸಾಂದರ್ಭಿಕ ಚಿತ್ರ) 
ದೇಶ

ಒಎನ್ ಜಿಸಿ ಉದ್ಯೋಗಿಗಳ ಅಪಹರಣ ಪ್ರಕರಣ: ಪೊಲೀಸ್ ಪೇದೆ ಸೇರಿ ಮೂವರ ಬಂಧನ

ಅಸ್ಸಾಂ ನಲ್ಲಿ ಒಎನ್ ಜಿಸಿ ಉದ್ಯೋಗಿಗಳ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಪೇದೆ ಸೇರಿ ಮೂವರನ್ನು ಬಂಧಿಸಲಾಗಿದೆ.

ಗುವಾಹಟಿ: ಅಸ್ಸಾಂ ನಲ್ಲಿ ಒಎನ್ ಜಿಸಿ ಉದ್ಯೋಗಿಗಳ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಪೇದೆ ಸೇರಿ ಮೂವರನ್ನು ಬಂಧಿಸಲಾಗಿದೆ.

ತೈಲ ಹಾಗೂ ನೈಸರ್ಗಿಕ ಅನಿಲ ಕಾರ್ಪೊರೇಷನ್ (ಒಎನ್ ಜಿಸಿ)ಯ ಮೂವರು ಉದ್ಯೋಗಿಗಳನ್ನು ಉಲ್ಫಾ ಉಗ್ರರು ಅಪಹರಣ ಮಾಡಿದ್ದರು. ಶಿವಸಾಗರ್ ಜಿಲ್ಲೆಯಲ್ಲಿ ಒಎನ್ ಜಿಸಿಯ ವರ್ಕ್ ಓವರ್ ರಿಗ್ ಕಾಮಗಾರಿಯ ಸ್ಥಳದಲ್ಲಿ ನಿಯೋಜಿಸಲಾಗಿದ್ದ ಪೊಲೀಸರನ್ನು ಪ್ರಕರಣದಲ್ಲಿ ಬಂಧಿಸಲಾಗಿದೆ. 

ಬಂಧಿತ ಪೇದೆಯನ್ನು ಒಎನ್ ಜಿಸಿ ಬೆಟಾಲಿಯನ್ ನ 25ನೇ ಎಪಿಯ ಬಸಂತ್ ಬುರಗೋಹೈನ್ ಎಂದು ಗುರುತಿಸಲಾಗಿದೆ.

ಇನ್ನಿಬ್ಬರನ್ನು ದಿಬ್ರುಘರ್ ಜಿಲ್ಲೆಯ ಬಿರಾಜ್ ಚೇತಿಯಾ ಹಾಗೂ ಶಿವಸಾಗರ್ ಜಿಲ್ಲೆಯ ರಾಹುಲ್ ಮೋಹನ್ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಶಾಮೀಲಾಗಿದ್ದ ಇನ್ನಿಬ್ಬರು ಪೊಲೀಸರು ತಲೆಮರೆಸಿಕೊಂಡಿದ್ದಾರೆ. ಈ ಮೂವರೂ ಒಎನ್ ಜಿಸಿ ಕಾಮಗಾರಿ ಸ್ಥಳದಲ್ಲೇ ನಿಯೋಜಿಸಲ್ಪಟ್ಟಿದ್ದರು.

ಘಟನೆಗೆ ಸಂಬಂಧಿಸಿದಂತೆ ಶಾಮೀಲಾಗಿರುವ ಯಾರನ್ನೂ ಪೊಲೀಸರು ಬಿಡುವುದಿಲ್ಲ ಎಂದು ಡಿಜಿಪಿ ಭಾಸ್ಕರ್ ಜ್ಯೋತಿ ಮಹಾಂತ ಹೇಳಿದ್ದಾರೆ. ಕಳೆದ ಬುಧವಾರ ಕಾಮಗಾರಿ ನಡೆಯುತ್ತಿದ್ದ ಸ್ಥಳದಿಂದಲೇ ಮೂವರು ಉದ್ಯೋಗಿಗಳನ್ನು ಉಲ್ಫಾ ಉಗ್ರರು ಅಪಹರಣ ಮಾಡಿದ್ದರು.ಈ ಪೈಕಿ ಕಿರಿಯ ಇಂಜಿನಿಯರಿಂಗ್ ಸಹಾಯಕ ಅಲಕೇಶ್ ಸೈಕಿಯಾ ಹಾಗೂ ಕಿರಿಯ ತಂತ್ರಜ್ಞ ಮೋಹಿನಿ ಮೋಹನ್ ಗೊಗೋಯ್ ಅವರನ್ನು ಭದ್ರತಾ ಪಡೆಗಳು ರಕ್ಷಿಸಿದ್ದವು. ಆದರೆ ಅಪಹರಣಕ್ಕೊಳಗಾದ ಮೂರನೇ ಉದ್ಯೋಗಿಯ ಬಗ್ಗೆ ಈ ವರೆಗೂ ಸುಳಿವು ದೊರೆತಿಲ್ಲ. ಉಲ್ಫಾ ಉಗ್ರರಿಗಾಗಿ ಭದ್ರತಾ ಪಡೆಗಳು ಶೋಧಕಾರ್ಯ ಮುಂದುವರೆಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

SCROLL FOR NEXT