ಬಂಧನ (ಸಾಂದರ್ಭಿಕ ಚಿತ್ರ) 
ದೇಶ

ಒಎನ್ ಜಿಸಿ ಉದ್ಯೋಗಿಗಳ ಅಪಹರಣ ಪ್ರಕರಣ: ಪೊಲೀಸ್ ಪೇದೆ ಸೇರಿ ಮೂವರ ಬಂಧನ

ಅಸ್ಸಾಂ ನಲ್ಲಿ ಒಎನ್ ಜಿಸಿ ಉದ್ಯೋಗಿಗಳ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಪೇದೆ ಸೇರಿ ಮೂವರನ್ನು ಬಂಧಿಸಲಾಗಿದೆ.

ಗುವಾಹಟಿ: ಅಸ್ಸಾಂ ನಲ್ಲಿ ಒಎನ್ ಜಿಸಿ ಉದ್ಯೋಗಿಗಳ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಪೇದೆ ಸೇರಿ ಮೂವರನ್ನು ಬಂಧಿಸಲಾಗಿದೆ.

ತೈಲ ಹಾಗೂ ನೈಸರ್ಗಿಕ ಅನಿಲ ಕಾರ್ಪೊರೇಷನ್ (ಒಎನ್ ಜಿಸಿ)ಯ ಮೂವರು ಉದ್ಯೋಗಿಗಳನ್ನು ಉಲ್ಫಾ ಉಗ್ರರು ಅಪಹರಣ ಮಾಡಿದ್ದರು. ಶಿವಸಾಗರ್ ಜಿಲ್ಲೆಯಲ್ಲಿ ಒಎನ್ ಜಿಸಿಯ ವರ್ಕ್ ಓವರ್ ರಿಗ್ ಕಾಮಗಾರಿಯ ಸ್ಥಳದಲ್ಲಿ ನಿಯೋಜಿಸಲಾಗಿದ್ದ ಪೊಲೀಸರನ್ನು ಪ್ರಕರಣದಲ್ಲಿ ಬಂಧಿಸಲಾಗಿದೆ. 

ಬಂಧಿತ ಪೇದೆಯನ್ನು ಒಎನ್ ಜಿಸಿ ಬೆಟಾಲಿಯನ್ ನ 25ನೇ ಎಪಿಯ ಬಸಂತ್ ಬುರಗೋಹೈನ್ ಎಂದು ಗುರುತಿಸಲಾಗಿದೆ.

ಇನ್ನಿಬ್ಬರನ್ನು ದಿಬ್ರುಘರ್ ಜಿಲ್ಲೆಯ ಬಿರಾಜ್ ಚೇತಿಯಾ ಹಾಗೂ ಶಿವಸಾಗರ್ ಜಿಲ್ಲೆಯ ರಾಹುಲ್ ಮೋಹನ್ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಶಾಮೀಲಾಗಿದ್ದ ಇನ್ನಿಬ್ಬರು ಪೊಲೀಸರು ತಲೆಮರೆಸಿಕೊಂಡಿದ್ದಾರೆ. ಈ ಮೂವರೂ ಒಎನ್ ಜಿಸಿ ಕಾಮಗಾರಿ ಸ್ಥಳದಲ್ಲೇ ನಿಯೋಜಿಸಲ್ಪಟ್ಟಿದ್ದರು.

ಘಟನೆಗೆ ಸಂಬಂಧಿಸಿದಂತೆ ಶಾಮೀಲಾಗಿರುವ ಯಾರನ್ನೂ ಪೊಲೀಸರು ಬಿಡುವುದಿಲ್ಲ ಎಂದು ಡಿಜಿಪಿ ಭಾಸ್ಕರ್ ಜ್ಯೋತಿ ಮಹಾಂತ ಹೇಳಿದ್ದಾರೆ. ಕಳೆದ ಬುಧವಾರ ಕಾಮಗಾರಿ ನಡೆಯುತ್ತಿದ್ದ ಸ್ಥಳದಿಂದಲೇ ಮೂವರು ಉದ್ಯೋಗಿಗಳನ್ನು ಉಲ್ಫಾ ಉಗ್ರರು ಅಪಹರಣ ಮಾಡಿದ್ದರು.ಈ ಪೈಕಿ ಕಿರಿಯ ಇಂಜಿನಿಯರಿಂಗ್ ಸಹಾಯಕ ಅಲಕೇಶ್ ಸೈಕಿಯಾ ಹಾಗೂ ಕಿರಿಯ ತಂತ್ರಜ್ಞ ಮೋಹಿನಿ ಮೋಹನ್ ಗೊಗೋಯ್ ಅವರನ್ನು ಭದ್ರತಾ ಪಡೆಗಳು ರಕ್ಷಿಸಿದ್ದವು. ಆದರೆ ಅಪಹರಣಕ್ಕೊಳಗಾದ ಮೂರನೇ ಉದ್ಯೋಗಿಯ ಬಗ್ಗೆ ಈ ವರೆಗೂ ಸುಳಿವು ದೊರೆತಿಲ್ಲ. ಉಲ್ಫಾ ಉಗ್ರರಿಗಾಗಿ ಭದ್ರತಾ ಪಡೆಗಳು ಶೋಧಕಾರ್ಯ ಮುಂದುವರೆಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್