ಕೇಂದ್ರ ಸರ್ಕಾರ ಜನರು ಸಾವನ್ನು ಬಯಸುತ್ತಿರುವಂತಿದೆ: ದೆಹಲಿ ಕೋರ್ಟ್ ತರಾಟೆ 
ದೇಶ

ಕೇಂದ್ರ ಸರ್ಕಾರ ಜನರ ಸಾವನ್ನು ಬಯಸುತ್ತಿರುವಂತಿದೆ: ದೆಹಲಿ ಕೋರ್ಟ್ ತರಾಟೆ 

ಕೇಂದ್ರ ಸರ್ಕಾರ ರೆಮ್ಡಿಸಿವಿರ್ ನ ಬಳಕೆಯಲ್ಲಿ ಪಾಲಿಸಬೇಕಾದ ಹೊಸ ಪ್ರೊಟೋಕಾಲ್ ನ್ನು ಬಿಡುಗಡೆ ಮಾಡಿದ್ದರ ಬಗ್ಗೆ ದೆಹಲಿ ಹೈಕೋರ್ಟ್ ಕೆಂಡಾಮಂಡಲಗೊಂಡಿದೆ. 

ನವದೆಹಲಿ: ಕೇಂದ್ರ ಸರ್ಕಾರ ರೆಮ್ಡಿಸಿವಿರ್ ನ ಬಳಕೆಯಲ್ಲಿ ಪಾಲಿಸಬೇಕಾದ ಹೊಸ ಪ್ರೊಟೋಕಾಲ್ ನ್ನು ಬಿಡುಗಡೆ ಮಾಡಿದ್ದರ ಬಗ್ಗೆ ದೆಹಲಿ ಹೈಕೋರ್ಟ್ ಕೆಂಡಾಮಂಡಲಗೊಂಡಿದೆ. 

"ಕೇಂದ್ರ ಸರ್ಕಾರ ಜನರ ಸಾವನ್ನು ಬಯಸುತ್ತಿರುವಂತಿದೆ" ಎಂದು ದೆಹಲಿ ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ರೆಮ್ಡಿಸಿವಿರ್ ನ್ನು ಆಕ್ಸಿಜನ್ ಸಪೋರ್ಟ್ ನಲ್ಲಿರುವ ರೋಗಿಗಳಿಗೆ ಮಾತ್ರವೇ ನೀಡಬೇಕೆಂಬ ನಿಯಮವನ್ನು ಕೇಂದ್ರ ಜಾರಿಗೊಳಿಸಿದೆ. 

ಕೋವಿಡ್-19 ನಿಂದ ಬಳಲುತ್ತಿರುವ ವಕೀಲರೊಬ್ಬರು ತಮಗೆ 6 ಡೋಸ್ ಗಳ ರೆಮ್ಡಿಸಿವಿರ್ ಬದಲಾಗಿ 3 ಡೋಸ್ ಅಷ್ಟೇ ಸಿಕ್ಕಿದ್ದು ಎಂದು ಕೇಂದ್ರದ ಹೊಸ ನಿಯಮದ ವಿರುದ್ಧ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಈ ನಿಯಮ ತಪ್ಪು,  ಬುದ್ಧಿಯನ್ನು ಉಪಯೋಗಿಸದೇ ತೆಗೆದುಕೊಂಡ ನಿರ್ಧಾರವಾಗಿದೆ. ಆಕ್ಸಿಜನ್ ಇಲ್ಲದವರಿಗೆ ಇತ್ತ ರೆಮ್ಡಿಸಿವಿರ್ ಕೂಡ ಸಿಗುವುದಿಲ್ಲ. ಕೇಂದ್ರ ಸರ್ಕಾರ ಜನರ ಸಾವನ್ನು ಬಯಸುತ್ತಿರುವಂತಿದೆ ಎಂದು ನ್ಯಾ. ಪ್ರತಿಭಾ ಎಂ ಸಿಂಗ್ ಹೇಳಿದ್ದಾರೆ. 

ಕೇಂದ್ರ ಸರ್ಕಾರ ರೆಮ್ಡಿಸಿವಿರ್ ದಾಸ್ತಾನು ಕೊರತೆಯನ್ನು ಕಡಿಮೆ ಮಾಡುವುದಕ್ಕೆ ನಿಯಮಗಳನ್ನು ಬದಲಾವಣೆ ಮಾಡಿರುವಂತೆ ಕಾಣುತ್ತಿದೆ ಎಂದು ಕೋರ್ಟ್ ಹೇಳಿದ್ದು, ಇದು ಸಂಪೂರ್ಣ ಕೆಟ್ಟ ನಿರ್ವಹಣೆ ಎಂದು ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT