ಆಧಾರ್ ಪೂನಾವಾಲಾ 
ದೇಶ

ಸೆರಂ ಇನ್ಸ್ಟಿಟ್ಯೂಟ್ ಸಿಇಒ ಆಧಾರ್ ಪೂನಾವಾಲಾಗೆ ಸಿಆರ್ ಪಿಎಫ್ ನಿಂದ 'ವೈ' ಕೆಟಗರಿ ಭದ್ರತೆ

"ಸಂಭಾವ್ಯ ಬೆದರಿಕೆ" ಎದುರಿಸುತ್ತಿರುವ ಉದ್ಯಮಿ, ಕೋವಿಶೀಲ್ಡ್ ಲಸಿಕೆ ಉತ್ಪಾದಕ ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆಧಾರ್ ಪೂನಾವಾಲಾ ಅವರಿಗೆ ಸಿಆರ್‌ಪಿಎಫ್ ಭಾರತದಾದ್ಯಂತ 'ವೈ' ಕೆಟಗರಿ ಭದ್ರತೆ ನೀಡಿದೆ ಕೇಂದ್ರ ಸರ್ಕಾರದ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ನವದೆಹಲಿ: "ಸಂಭಾವ್ಯ ಬೆದರಿಕೆ" ಎದುರಿಸುತ್ತಿರುವ ಉದ್ಯಮಿ, ಕೋವಿಶೀಲ್ಡ್ ಲಸಿಕೆ ಉತ್ಪಾದಕ ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆಧಾರ್ ಪೂನಾವಾಲಾ ಅವರಿಗೆ ಸಿಆರ್‌ಪಿಎಫ್ ಭಾರತದಾದ್ಯಂತ 'ವೈ' ಕೆಟಗರಿ ಭದ್ರತೆ ನೀಡಿದೆ ಕೇಂದ್ರ ಸರ್ಕಾರದ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಪೂನವಾಲಾಗೆ ಭದ್ರತೆ ಕೋರಿ ಪುಣೆ ಮೂಲದ ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ (ಎಸ್‌ಐಐ) ನಿರ್ದೇಶಕ, ಸರ್ಕಾರಿ ಮತ್ತು ನಿಯಂತ್ರಣ ವ್ಯವಹಾರಗಳ ನಿರ್ದೇಶಕ ಪ್ರಕಾಶ್ ಕುಮಾರ್ ಸಿಂಗ್ ಅವರು ಏಪ್ರಿಲ್ 16 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದ ನಂತರ ಕೇಂದ್ರ ಸರ್ಕಾರ ಭದ್ರತೆ ಒದಗಿಸಿದೆ.

ಅಧಿಕಾರಿಗಳ ಪ್ರಕಾರ, ಪೂನವಾಲಾಗೆ "ಸಂಭವನೀಯ ಬೆದರಿಕೆಗಳನ್ನು" ಗಮನದಲ್ಲಿಟ್ಟುಕೊಂಡು ರಕ್ಷಣೆ ನೀಡಲಾಗಿದೆ.
 

ಕೇಂದ್ರ ರಿಸರ್ವ್ ಪೊಲೀಸ್ ಪಡೆಯ(ಸಿಆರ್‌ಪಿಎಫ್) ಸಶಸ್ತ್ರ ಕಮಾಂಡೋಗಳು ಅವರು ದೇಶದ ಯಾವುದೇ ಭಾಗಕ್ಕೆ ಪ್ರಯಾಣಿಸುವಾಗಲೆಲ್ಲಾ ಅವರೊಂದಿಗೆ ಇರುತ್ತಾರೆ. 'ವೈ' ಕೆಟಗರಿ ಭದ್ರತೆಯೂ 4-5 ಸಶಸ್ತ್ರ ಕಮಾಂಡೋಗಳನ್ನು ಹೊಂದಿರುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT