ಸಾಂದರ್ಭಿಕ ಚಿತ್ರ 
ದೇಶ

ಪಶ್ವಿಮ ಬಂಗಾಳ ವಿಧಾನಸಭಾ ಚುನಾವಣೆಯ ಅಂತಿಮ ಹಂತದಲ್ಲಿ ಶೇ 76ಕ್ಕೂ ಅಧಿಕ ಮತದಾನ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಅಂತಿಮಹಂತದಲ್ಲಿ ಗುರುವಾರ 35 ಕ್ಷೇತ್ರಗಳಿಗೆ ನಡೆದ ಮತದಾನದಲ್ಲಿ ಸಂಜೆ 6.30ರ ವೇಳೆಗೆ ಪ್ರಾಥಮಿಕ ವರದಿಗಳಂತೆ ಶೇ. 76ಕ್ಕೂ ಅಧಿಕ ಮತದಾನವಾಗಿದೆ.

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಅಂತಿಮಹಂತದಲ್ಲಿ ಗುರುವಾರ 35 ಕ್ಷೇತ್ರಗಳಿಗೆ ನಡೆದ ಮತದಾನದಲ್ಲಿ ಸಂಜೆ 6.30ರ ವೇಳೆಗೆ ಪ್ರಾಥಮಿಕ ವರದಿಗಳಂತೆ ಶೇ. 76ಕ್ಕೂ ಅಧಿಕ ಮತದಾನವಾಗಿದೆ.

ಇಂದು ಬಿರ್ಭಮ್, ಮುರ್ಷಿದಾಬಾದ್, ಮಾಲ್ಡಾ ಮತ್ತು ಕೋಲ್ಕತಾ ಉತ್ತರ ಜಿಲ್ಲೆಗಳಲ್ಲಿ ಕೊನೆಯ ಹಂತದಲ್ಲಿ ಮತದಾನ ನಡೆದಿದೆ. 

ವಿವಿಧ ಪ್ರದೇಶಗಳಲ್ಲಿ ಕೆಲ ಅಹಿತಕರ ಘಟನೆಗಳನ್ನು ಹೊರತು ಪಡಿಸಿ ಒಟ್ಟಾರೆ ಮತದಾನ ಶಾಂತಿಯುತವಾಗಿತ್ತು.

ಉತ್ತರ ಕೋಲ್ಕತ್ತಾದ ಮಹಾಜತಿ ಸದಾನ್ ಸಭಾಂಗಣದ ಬಳಿ ಕಚ್ಚಾ ಬಾಂಬ್ ಎಸೆಯಲಾಗಿದ್ದು, ಈ ಕುರಿತಂತೆ ವಿವರಗಳನ್ನು ಚುನಾವಣಾ ಆಯೋಗ ಕೇಳಿದೆ. ತಮ್ಮ ಕಾರನ್ನು ಗುರಿಯಾಗಿಸಿಕೊಂಡು ಬಾಂಬ್ ಎಸೆಯಲಾಗಿದೆ ಎಂದು ಜರಸಂಕೊ ಬಿಜೆಪಿ ಅಭ್ಯರ್ಥಿ ಮೀನಾ ದೇವಿ ಪುರೋಹಿತ್ ಆರೋಪಿಸಿದ್ದಾರೆ.

ಆದರೆ, ಕೇಂದ್ರ ಕೋಲ್ಕತ್ತಾದ ಮಹಾಜತಿ ಸದಾನ್ ಹೊರಗೆ ಪಟಾಕಿ ಸಿಡಿಸಲಾಗಿದೆ. ಇದು ಬಾಂಬ್ ಅಲ್ಲ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುರ್ಷಿದಾಬಾದ್ ಜಿಲ್ಲೆಯಲ್ಲಿ ಬೆಳಗ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇತರ ಇಬ್ಬರು ಗಾಯಗೊಂಡಿದ್ದರಿಂದ ಈ ಪ್ರದೇಶದಲ್ಲಿ ಕೆಲ ಕಾಲ ಉದ್ರಿಕ್ತ ವಾತಾವರಣ ನಿರ್ಮಾಣವಾಗಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಿರಿಯ ನಟ ಮತ್ತು ಬಿಜೆಪಿ ಮುಖಂಡ ಮಿಥುನ್ ಚಕ್ರವರ್ತಿ ಅವರು ಉತ್ತರ ಕೊಲ್ಕತ್ತಾದ ಕಾಶಿಪುರ-ಬೆಲ್ಗಾಚಿಯಾ ಪ್ರದೇಶದ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಿದರು. ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನ್ಕರ್ ಮತ್ತು ಅವರ ಪತ್ನಿ ಸುದೇಶ್ ಧನ್ಕರ್, ಕಾಂಗ್ರೆಸ್ ಸಂಸದ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಅಧೀರ್ ರಂಜನ್ ಚೌಧರಿ, ಮುರ್ಷಿದಾಬಾದ್ ನ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT