ಪಶ್ಚಿಮ ಬಂಗಾಳದ 35 ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ ಆರಂಭಗೊಂಡ ಮತದಾನಕ್ಕೆ ಮತಗಟ್ಟೆ ಮುಂದೆ ಸಾಲಿನಲ್ಲಿ ನಿಂತ ಜನರು 
ದೇಶ

ಪಶ್ಚಿಮ ಬಂಗಾಳ ಚುನಾವಣೆ: ಅಂತಿಮ ಹಂತದ ಮತದಾನ ಇಂದು, 35 ಕ್ಷೇತ್ರಗಳ 283 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಪಶ್ಚಿಮ ಬಂಗಾಳ ವಿಧಾನಸಭೆಯ ಅಂತಿಮ ಮತ್ತು 8ನೇ ಹಂತದ ಮತದಾನ ಗುರುವಾರ ಬೆಳಗ್ಗೆ 7 ಗಂಟೆಗೆ ಆರಂಭವಾಗಿದೆ. 35 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದ್ದು ಮತದಾರರು ಬೆಳಗ್ಗೆಯೇ ಹಕ್ಕು ಚಲಾಯಿಸಲು ಮತಗಟ್ಟೆಗಳ ಮುಂದೆ ಸಾಲಿನಲ್ಲಿ ನಿಂತಿರುವುದು ಕಂಡುಬಂತು.

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಯ ಅಂತಿಮ ಮತ್ತು 8ನೇ ಹಂತದ ಮತದಾನ ಗುರುವಾರ ಬೆಳಗ್ಗೆ 7 ಗಂಟೆಗೆ ಆರಂಭವಾಗಿದೆ. 35 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದ್ದು ಮತದಾರರು ಬೆಳಗ್ಗೆಯೇ ಹಕ್ಕು ಚಲಾಯಿಸಲು ಮತಗಟ್ಟೆಗಳ ಮುಂದೆ ಸಾಲಿನಲ್ಲಿ ನಿಂತಿರುವುದು ಕಂಡುಬಂತು.

84 ಲಕ್ಷಕ್ಕೂ ಅಧಿಕ ಮತದಾರರು ಇಂದು 283 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. ಮುರ್ಶಿದಾಬಾದ್ ಮತ್ತು ಬಿರ್ಬುಮ್ ಜಿಲ್ಲೆಗಳಲ್ಲಿ ತಲಾ 11 ಕ್ಷೇತ್ರಗಳು, ಮಾಲ್ಡಾದಲ್ಲಿ 6 ಮತ್ತು ಕೋಲ್ಕತ್ತಾದ 7 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಲಿದ್ದು ಸಾಯಂಕಾಲ 6.30ರವರೆಗೆ ಮುಂದುವರಿಯಲಿದೆ.

ಒಟ್ಟು 84 ಲಕ್ಷದ 77 ಸಾವಿರದ 728 ಮತದಾರರಿದ್ದು, ಅವರಲ್ಲಿ 43 ಲಕ್ಷದ 55 ಸಾವಿರದ 835 ಪುರುಷರು, 41 ಲಕ್ಷದ 21 ಸಾವಿರಗ 735 ಮಹಿಳೆಯರು ಮತ್ತು ತೃತೀಯ ಲಿಂಗದ 158 ಮಂದಿ ಎಂಟನೇ ಹಂತದ ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದಾರೆ. ಟಿಎಂಸಿ, ಬಿಎಸ್ಪಿ ಮತ್ತು ಬಿಜೆಪಿ ತಲಾ 11 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಸಿಪಿಐ (ಎಂ) ನಾಲ್ಕು ಸ್ಥಾನಗಳಲ್ಲಿ, ಕಾಂಗ್ರೆಸ್ ಮೂರರಲ್ಲಿ, ಎಐಎಫ್‌ಬಿ 2 ಮತ್ತು ಆರ್‌ಎಸ್‌ಪಿ (1) ಸ್ಪರ್ಧಿಸುತ್ತಿದೆ. ನಾಲ್ಕು ಸ್ವತಂತ್ರ ಅಭ್ಯರ್ಥಿಗಳೂ ಕಣದಲ್ಲಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ 2021ರ ಅಂತಿಮ ಹಂತದ ಮತದಾನ ಇಂದು ನಡೆಯುತ್ತಿದೆ. ಕೋವಿಡ್-19 ಶಿಷ್ಟಾಚಾರಗಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಮತಗಟ್ಟೆಗಳಿಗೆ ಬಂದು ತಮ್ಮ ಹಕ್ಕು ಚಲಾಯಿಸಿ ಪ್ರಜಾಪ್ರಭುತ್ವದ ಉತ್ಸವದಲ್ಲಿ ಭಾಗಿಯಾಗಿ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT