ರಾಜನಾಥ್ ಸಿಂಗ್ 
ದೇಶ

ಕೋವಿಡ್ -19: ಆರೋಗ್ಯ ಸೌಲಭ್ಯ ಒದಗಿಸಲು ಸಶಸ್ತ್ರ ಪಡೆಗಳಿಗೆ ತುರ್ತು ಆರ್ಥಿಕ ಅಧಿಕಾರ ನೀಡಿದ ರಾಜನಾಥ್ ಸಿಂಗ್

ಕೋವಿಡ್ ಸೋಂಕಿತರಿಗೆ ಆಸ್ಪತ್ರೆ ಸ್ಥಾಪಿಸಲು ಮತ್ತು ನಿರ್ವಹಿಸಲು ಹಾಗೂ ಕ್ವಾರಂಟೈನ್ ವ್ಯವಸ್ಥೆ ಮಾಡಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮೂರು ಸೇನಾಪಡೆಗಳಿಗೆ ತುರ್ತು ಆರ್ಥಿಕ ಅಧಿಕಾರವನ್ನು ಮಂಜೂರು ಮಾಡಿದ್ದಾರೆ.

ನವದೆಹಲಿ: ಕೋವಿಡ್ ಸೋಂಕಿತರಿಗೆ ಆಸ್ಪತ್ರೆ ಸ್ಥಾಪಿಸಲು ಮತ್ತು ನಿರ್ವಹಿಸಲು ಹಾಗೂ ಕ್ವಾರಂಟೈನ್ ವ್ಯವಸ್ಥೆ ಮಾಡಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮೂರು ಸೇನಾಪಡೆಗಳಿಗೆ ತುರ್ತು ಆರ್ಥಿಕ ಅಧಿಕಾರವನ್ನು ಮಂಜೂರು ಮಾಡಿದ್ದಾರೆ.

ಈ ತುರ್ತು ಅಧಿಕಾರವನ್ನು ಮೇ 1 ರಿಂದ ಜುಲೈ 31 ರವರೆಗೆ ಮೂರು ತಿಂಗಳ ಅವಧಿಗೆ ನೀಡಲಾಗಿದೆ. ಕಳೆದ ವಾರ ಸಶಸ್ತ್ರ ಪಡೆಗಳ ವೈದ್ಯಕೀಯ ಅಧಿಕಾರಿಗಳಿಗೂ ಸಹ ಇದೇ ರೀತಿಯ ತುರ್ತು ಅಧಿಕಾರವನ್ನು ಹೆಚ್ಚುವರಿಯಾಗಿವೆ ನೀಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೂರು ಸೇನಾಪಡೆಗಳ ಉಪ ಮುಖ್ಯಸ್ಥರು ಮತ್ತು ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ಸ್ (ಜಿಒಸಿ-ಇನ್-ಸಿಎಸ್) ಮತ್ತು ಸಮಾನ ಶ್ರೇಣಿ ಅಧಿಕಾರಿಗಳಿಗೆ ಕರೋನಾ ವೈರಸ್ ಬಿಕ್ಕಟ್ಟನ್ನು ಎದುರಿಸಲು ಖರೀದಿ ಪ್ರಸ್ತಾಪಗಳನ್ನು ಮಂಜೂರು ಮಾಡಲು ಅವಕಾಶ ನೀಡಲಾಗಿದೆ ಎಂದು ಅವರು ಹೇಳಿದರು.

ಕೋವಿಡ್ ವಿರುದ್ಧದ ರಾಷ್ಟ್ರವ್ಯಾಪಿ ಹೋರಾಟದ ಪ್ರಯತ್ನಗಳನ್ನು ಮತ್ತಷ್ಟು ಚುರುಕುಗೊಳಿಸಲು ಸಶಸ್ತ್ರ ಪಡೆಗಳಿಗೆ ಅಧಿಕಾರ ನೀಡಲು  ವಿಶೇಷ ನಿಬಂಧನೆಗಳನ್ನು ಮತ್ತು ತುರ್ತು ಆರ್ಥಿಕ ಅಧಿಕಾರವನ್ನು ನೀಡಲಾಗಿದೆ ಎಂದು ರಾಜನಾಥ್ ಸಿಂಗ್ ಕಚೇರಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT