ಆಪ್ ಶಾಸಕ ಶೋಯೆಬ್ ಇಕ್ಬಾಲ್ 
ದೇಶ

ಯಾರೊಬ್ಬರಿಗೂ ಸಹಾಯ ಮಾಡಲಾಗುತ್ತಿಲ್ಲ, ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ ಹೇರಿ: ನ್ಯಾಯಾಲಯಕ್ಕೆ ಆಪ್ ಶಾಸಕ ಮನವಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಾಮಾರಿ ಕೊರೋನಾ ಪರಿಸ್ಥಿತಿ ಬಿಗಡಾಯಿಸಿದ್ದು, ಈ ನಡುವೆ ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಮತಿಯಾ ಮಹಲ್ ಕ್ಷೇತ್ರದ ಶಾಸಕ ಶೋಯೆಬ್ ಇಕ್ಬಾಲ್ ಅವರು ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕೆಂದು ಶುಕ್ರವಾರ ಆಗ್ರಹಿಸಿದ್ದಾರೆ.

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಾಮಾರಿ ಕೊರೋನಾ ಪರಿಸ್ಥಿತಿ ಬಿಗಡಾಯಿಸಿದ್ದು, ಈ ನಡುವೆ ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಮತಿಯಾ ಮಹಲ್ ಕ್ಷೇತ್ರದ ಶಾಸಕ ಶೋಯೆಬ್ ಇಕ್ಬಾಲ್ ಅವರು ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕೆಂದು ಶುಕ್ರವಾರ ಆಗ್ರಹಿಸಿದ್ದಾರೆ.

ಕಳೆದ ವರ್ಷ  ವಿಧಾನಸಭಾ ಚುನಾವಣೆಗೆ ಒಂದು ತಿಂಗಳಿರುವಾಗ ಕಾಂಗ್ರೆಸ್ ಪಕ್ಷದಿಂದ ಇಕ್ಬಾಲ್ ಆಪ್‍ಗೆ ವಲಸೆ ಬಂದಿದ್ದರು. ಈಗ ವೀಡಿಯೋ ಸಂದೇಶವೊಂದನ್ನು ಬಿಡುಗಡೆಗೊಳಿಸಿ ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ ಅಗತ್ಯವೆಂದು ಅವರು ಹೇಳಿದ್ದಾರೆ. 

"ದೆಹಲಿಯ ಪರಿಸ್ಥಿತಿಯಿಂದ ನನಗೆ ಸಾಕಷ್ಟು ನೋವಾಗಿದೆ. ಪರಿಸ್ಥಿತಿಯಿಂದ ಬಹಳ ಚಿಂತೆಗೀಡಾಗಿದ್ದೇನೆ, ನಿದ್ದೆ ಮಾಡಲು ಆಗುತ್ತಿಲ್ಲ. ಜನರಿಗೆ ಆಕ್ಸಿಜನ್ ಮತ್ತು ಔಷಧಿಗಳು ದೊರಕುತ್ತಿಲ್ಲ, ನನ್ನ ಸ್ನೇಹಿತ ಕಷ್ಟದಲ್ಲಿದ್ದಾನೆ, ಆತ ಆಸ್ಪತ್ರೆಯಲ್ಲಿದ್ದಾನೆ. ಆದರೆ, ಆಕ್ಸಿಜನ್ ಅಥವಾ ವೆಂಟಿಲೇಟರ್ ಸಿಗುತ್ತಿಲ್ಲ. ವೈದ್ಯರು ನೀಡಿದ ರೆಮ್ಡಿಸಿವಿರ್ ಪ್ರಿಸ್ಕ್ರಿಪ್ಶನ್ ನನ್ನ ಬಳಿ ಇದೆ ಆದರೆ ಅದನ್ನು ಎಲ್ಲಿಂದ ತರಲಿ? ಅವರ ಮಕ್ಕಳು ಅದಕ್ಕಾಗಿ ಅಲೆದಾಡುತ್ತಿದ್ದಾರೆ. ಇಂದು ಒಬ್ಬ ಶಾಸಕನೆಂದು ಕರೆಸಿಕೊಳ್ಳುವುದಕ್ಕೆ ನನಗೆ ನಾಚಿಕೆಯಾಗುತ್ತಿದೆ, ಏಕೆಂದರೆ ನನಗೆ ಸಹಾಯ ಮಾಡಲು ಸಾಧ್ಯವಾಗುತ್ತಿಲ್ಲ. 

ಸರಕಾರ ಕೂಡ ಸಹಾಯ ಮಾಡುವ ಸ್ಥಿತಿಯಲ್ಲಿಲ್ಲ. ನಾನು ಆರು ಬಾರಿ ಶಾಸಕನಾಗಿ ಆಯ್ಕೆಯಾದವನು. ಅತ್ಯಂತ ಹಿರಿಯ ಶಾಸಕ. ಆದರೂ ಯಾರೂ ಸ್ಪಂದಿಸುತ್ತಿಲ್ಲ, ಯಾವುದೇ ನೋಡಲ್ ಅಧಿಕಾರಿಯನ್ನು ಸಂಪರ್ಕಿಸಲು ಕೂಡ ಸಾಧ್ಯವಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ನಾನು ದೆಹಲಿ ಹೈಕೋರ್ಟಿಗೆ ಮನವಿ ಮಾಡಲು ಬಯಸುತ್ತೇನೆ. ಇಲ್ಲದೇ ಇದ್ದಲ್ಲಿ ರಸ್ತೆಯಲ್ಲಿ ಹೆಣಗಳೇ ಇರಲಿವೆ" ಎಂದು  ಅವರು ಹೇಳಿದ್ದಾರೆ.

ಈ ನಡುವೆ ಇಕ್ಬಾಲ್ ಅವರ ವೀಡಿಯೋ ಸಂದೇಶಕ್ಕೆ ಆಮ್ ಆದ್ಮಿ ಪಕ್ಷ ಯಾವುದೇ ರೀತಿಯ ಅಧಿಕೃತ ಪ್ರತಿಕ್ರಿಯೆಗಳನ್ನೂ ನೀಡಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT