ಸಾಂದರ್ಭಿಕ ಚಿತ್ರ 
ದೇಶ

ಜಾರ್ಖಂಡ್: ಲಾಕ್ ಡೌನ್ ನಿಯಮ ಉಲ್ಲಂಘನೆಗಾಗಿ ಪೊಲೀಸರಿಂದ ಥಳಿತ, ವ್ಯಕ್ತಿ ಸಾವು

ಲಾಕ್ ಡೌನ್ ನಿಯಮ ಉಲ್ಲಂಘನೆಗಾಗಿ ಪೊಲೀಸರಿಂದ ಥಳಿತಕ್ಕೊಳಗಾದ 50 ವರ್ಷದ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಹಜಾರಿಬಾಗ್ ನ ಚೌಪರನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ರಾಂಚಿ: ಲಾಕ್ ಡೌನ್ ನಿಯಮ ಉಲ್ಲಂಘನೆಗಾಗಿ ಪೊಲೀಸರಿಂದ ಥಳಿತಕ್ಕೊಳಗಾದ 50 ವರ್ಷದ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಹಜಾರಿಬಾಗ್ ನ ಚೌಪರನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಮೃತ ಚಕ್ಕನ್ ಭೂಯಾನ್ ತನ್ನ ಹೆಂಡತಿ ಹಾಗೂ ಸಹೋದರನೊಂದಿಗೆ ಹಳ್ಳಿಯೊಂದರಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗುತ್ತಿರುವಾಗ ಮಾರ್ಗ ಮಧ್ಯೆ ಪೆಟ್ರೋಲ್ ಹಾಕಿಸಲು ಬೈಕ್ ನಿಲ್ಲಿಸಲಾಗಿದೆ.

ತಕ್ಷಣ ಅಲ್ಲಿಗೆ ಬಂದ  ಗಸ್ತುವಾಹನದಲ್ಲಿದ್ದ ಪೊಲೀಸರು ಲಾಠಿಯಿಂದ ಥಳಿಸಲು ಪ್ರಾರಂಭಿಸಿದ್ದಾರೆ. ಹೇಗೂ ಆತನ ಹೆಂಡತಿ ಹಾಗೂ ಸಹೋದರ ಅಲ್ಲಿಂದ ಓಡಿಹೋಗಿದ್ದಾರೆ. ಆದರೆ, ಬೈಕ್ ಮೇಲೆಯೇ ಕುಳಿತಿದ್ದ ಚಕ್ಕನ್  ಭೂಯಾನ್ ಮೇಲೆ ಮನ ಬಂದಂತೆ ಹಲ್ಲೆ ನಡೆಸಿದ್ದಾರೆ.
 
ಸಹೋದರ ಪ್ರಜ್ಞೆ ತಪ್ಪಿದಾಗ ಸುತ್ತಮುತ್ತಲಿನ ಜನರು ದೌಡಾಯಿಸಿ, ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ, ಮಾರ್ಗ ಮಧ್ಯದಲ್ಲಿಯೇ ಆತ ಸಾವನ್ನಪ್ಪಿದ್ದಾಗಿ ಶಂಕರ್ ಭೂಯಾನ್ ತಿಳಿಸಿದ್ದಾನೆ. ತದನಂತರ ಘಟನೆ ಖಂಡಿಸಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿ, ಪೊಲೀಸರ ಅಮಾನತಿಗೆ ಆಗ್ರಹಿಸಲಾಯಿತು.ಈ ಪ್ರಕರಣದ ವಿಚಾರಣೆ ನಡೆಸುವುದಾಗಿ ಡಿಎಸ್ ಪಿ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಗಿದೆ.

ಆದಾಗ್ಯೂ, ಇಂತಹ ಯಾವುದೇ ಘಟನೆ ಆಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಮರಣೋತ್ತರ ಪರೀಕ್ಷೆ ಬಂದ ನಂತರ ಎಲ್ಲವೂ ಗೊತ್ತಾಗಲಿದೆ ಎಂದು ಚೌಪರನ್ ಪೊಲೀಸ್ ಠಾಣಾಧಿಕಾರಿ ವಿನೋದ್ ಟಿರ್ಕಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT