ಯುವಕನಿಂದ ಆಕ್ಸಿಜನ್ ಕಸಿದುಕೊಂಡಿದ್ದ ಆರೋಪ: ಆರಕ್ಷಕನ ವಿರುದ್ಧ ತನಿಖೆಗೆ ಆದೇಶ 
ದೇಶ

ಯುವಕನಿಂದ ಆಕ್ಸಿಜನ್ ಕಸಿದುಕೊಂಡಿದ್ದ ಆರೋಪ: ಆರಕ್ಷಕನ ವಿರುದ್ಧ ತನಿಖೆಗೆ ಆದೇಶ

ಕೋವಿಡ್-19 ನಿಂದ ಬಳಲುತ್ತಿದ್ದ ತನ್ನ ತಾಯಿಗೆ ಆಕ್ಸಿಜನ್ ಸಿಲೆಂಡರ್ ಕೊಂಡೊಯ್ಯುತ್ತಿದ್ದ ಯುವಕನಿಂದ ಸಿಲೆಂಡರ್ ಕಸಿದುಕೊಂಡ ಆರೋಪದಲ್ಲಿ ಆರಕ್ಷಕನ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ.

ಆಗ್ರಾ: ಕೋವಿಡ್-19 ನಿಂದ ಬಳಲುತ್ತಿದ್ದ ತನ್ನ ತಾಯಿಗೆ ಆಕ್ಸಿಜನ್ ಸಿಲೆಂಡರ್ ಕೊಂಡೊಯ್ಯುತ್ತಿದ್ದ ಯುವಕನಿಂದ ಸಿಲೆಂಡರ್ ಕಸಿದುಕೊಂಡ ಆರೋಪದಲ್ಲಿ ಆರಕ್ಷಕನ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ.

ಯುವಕನಿಂದ ಒತ್ತಾಯಪೂರ್ವಕವಾಗಿ ಆಕ್ಸಿಜನ್ ಸಿಲೆಂಡರ್ ನ್ನು ಆರಕ್ಷಕ ಕಸಿದುಕೊಂಡು ಹೋಗಿದ್ದ. ಪೊಲೀಸ್ ಅಧಿಕಾರಿಗೆ ಆಕ್ಸಿಜನ್ ಸಿಲೆಂಡರ್ ನೀಡುವಂತೆ ಪಿಪಿಇ ಕಿಟ್ ಧರಿಸಿದ್ದ ಯುವಕ ಪರಿಪರಿಯಾಗಿ ಬೇಡಿಕೊಳ್ಳುತ್ತಿರುವ ವಿಡಿಯೋ ವೈರಲ್ ಆಗತೊಡಗಿದೆ. 

ಆಕ್ಸಿಜನ್ ಸಿಗದೇ ಇದ್ದರೆ ನನ್ನ ತಾಯಿ ಸಾವನ್ನಪ್ಪುತ್ತಾರೆ ಎಂದು ಯುವಕ ಮನವಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗತೊಡಗಿದ್ದು ಆರಕ್ಷಕನ ಕಿರಾತಕ ನಡೆಗೆ ತೀವ್ರ ಟೀಕೆ ವ್ಯಕ್ತವಾಗಿದೆ. 

ಕೊನೆಗೂ ಆಕ್ಸಿಜನ್ ಸಿಗದೇ ಯುವಕನ ತಾಯಿ ಮೃತಪಟ್ಟಿದ್ದಾರೆ. ಯುವಕ ಅಂಶ್ ಗೋಯಲ್ ಮಾಧ್ಯಮಗಳೊಂದಿಗೆ ಮಾತನಾಡಿದ್ದು, "ವಿಐಪಿ ರೋಗಿಗಾಗಿ ಪೊಲೀಸರು ಕಸಿದುಕೊಂಡು ಹೋದರು. ನಮ್ಮ ತಾಯಿಗೆ ಆಕ್ಸಿಜನ್ ಲಭ್ಯವಾಗದೇ ಸಾವನ್ನಪ್ಪಿದ್ದಾರೆ" ಎಂದು ಹೇಳಿದ್ದಾರೆ. 

ಈ ಘಟನೆ ಬಗ್ಗೆ ಎಡಿಜಿ ರಾಜೀವ್ ಕೃಷ್ಣ ಮಾತನಾಡಿದ್ದು, "ತಪ್ಪಿತಸ್ಥ ಪೊಲೀಸ್ ಅಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು" ಎಂದು ಭರವಸೆ ನೀಡಿದ್ದಾರೆ. 

ಆರೋಪ ಕೇಳಿಬಂದ ಪ್ರಾರಂಭದಲ್ಲಿ ಸ್ಥಳೀಯ ಪೊಲೀಸರು ಆರೋಪವನ್ನು ನಿರಾಕರಿಸಿ, ಅದು ಖಾಲಿ ಆಕ್ಸಿಜನ್ ಸಿಲೆಂಡರ್ ಗಳಾಗಿತ್ತು ಎಂದು ಸಮರ್ಥನೆ ನೀಡಿದ್ದಾರೆ. ಎಸ್ ಪಿ ಆರೋಪವನ್ನು ನಿರಾಕರಿಸಿದ್ದು, "ಆಕ್ಸಿಜನ್ ಸಿಲೆಂಡರ್ ನೀಡುವಂತೆ ಯುವಕ ಪೊಲೀಸ್ ಅಧಿಕಾರಿಗೆ ಮನವಿ ಮಾಡಿದರು. ಯಾರೂ ಸಿಲೆಂಡರ್ ನ್ನು ಕಸಿದಿಲ್ಲ, ವಿಡಿಯೋ ದಾರಿತಪ್ಪಿಸುವಂತಿದೆ ಎಂದು ಹೇಳಿದ್ದಾರೆ, ಆದರೆ ಖಾಲಿ ಸಿಲೆಂಡರ್ ನ್ನು ಪೊಲೀಸ್ ನವರು ಏಕೆ ಕಸಿದುಕೊಂಡರು ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT