ದೇಶ

ಸೋಲಿ ಸೊರಾಬ್ಜಿ ನಿಧನ: ರಾಷ್ಟ್ರಪತಿ, ಪ್ರಧಾನಿ ಮೋದಿ, ಸಂತಾಪ; ಮಾಜಿ ಅಟಾರ್ನಿ ಜನರಲ್ ನೆನೆದ ಸುಪ್ರೀಂ ಕೋರ್ಟ್

ಖ್ಯಾತ ನ್ಯಾಯವಾದಿ ಸೋಲಿ ಸೊರಾಬ್ಜಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಂತಾಪ ಸೂಚಿಸಿದ್ದಾರೆ.

ನವದೆಹಲಿ: ಖ್ಯಾತ ನ್ಯಾಯವಾದಿ ಸೋಲಿ ಸೊರಾಬ್ಜಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಂತಾಪ ಸೂಚಿಸಿದ್ದಾರೆ.

ಶುಕ್ರವಾರ ನಿಧನರಾದ ಮಾಜಿ ಅಟಾರ್ನಿ ಜನರಲ್ ಅವರು ಕೋವಿಡ್ -19 ಸೋಂಕಿಗೆ ಒಳಗಾಗಿ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. . ಅವರು 1989-90ರವರೆಗೆ ಮತ್ತು 1998-2004ರವರೆಗೆ ಭಾರತದ ಅಟಾರ್ನಿ ಜನರಲ್ ಆಗಿ ಸೇವೆ ಸಲ್ಲಿಸಿದ್ದರು.

"ಅತ್ಯುತ್ತಮ ವಕೀಲ, ಬಡವರಿಗೆ ಮತ್ತು ದೀನ ದಲಿತರಿಗೆ ಕಾನೂನಿನ ಮೂಲಕ ಸಹಾಯ ಮಾಡುವಲ್ಲಿ ಮುಂಚೂಣಿಯಲ್ಲಿದ್ದ ಸೋಲಿ ಸೊರಾಬ್ಜಿ ಒಬ್ಬ ಬುದ್ದಿಜೀವಿ. ಅವರು ಭಾರತದ  ಅಟಾರ್ನಿ ಜನರಲ್ ಆಗಿದ್ದಾಗಿನ ಅವರ ಸೇವೆ ಸ್ಮರಣೀಯ. ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ನಾನು ಸಂತಾಪ ಸೂಚಿಸುತ್ತೇನೆ." ಪ್ರಧಾನಿ ನರೇಂದ್ತ ಮೋದಿ ಹೇಳಿದ್ದಾರೆ.

"ಸೋಲಿ ಸೊರಾಬ್ಜಿ ನಿಧನದಿಂದ ನಾವು ಭಾರತದ ಕಾನೂನು ವ್ಯವಸ್ಥೆಯ ಐಕಾನ್ ಅನ್ನು ಕಳೆದುಕೊಂಡಿದ್ದೇವೆ. ಸಾಂವಿಧಾನಿಕ ಕಾನೂನು ಮತ್ತು ನ್ಯಾಯ ವ್ಯವಸ್ಥೆಯ ವಿಕಾಸವನ್ನು ಆಳವಾಗಿ ಪ್ರಭಾವಿಸಿದ ಆಯ್ದ ಕೆಲವರಲ್ಲಿ ಅವರೂ ಒಬ್ಬರಾಗಿದ್ದಾರೆ. ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರಾಗಿದ್ದ ಸೊರಾಬ್ಜಿ ಅತ್ಯಂತ ಶ್ರೇಷ್ಠ ನ್ಯಾಯಶಾಸ್ತ್ರಜ್ಞರಲ್ಲಿ ಒಬ್ಬರಾಗಿದ್ದರು. ಅವರನ್ನು ಕಳೆದುಕೊಂಡ ಅವರ ಕುಟುಂಬಕ್ಕೆ. ಸಹವರ್ತಿಗಳಿಗೆ ನನ್ನ ಸಂತಾಪವಿದೆ." ರಾಷ್ಟ್ರಪತಿ ರಾಮನಾಥ್ ಕೋವಿಂದ್ ಟ್ವೀಟ್ ನಲ್ಲಿ ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ಸಂತಾಪ

ಮಾಜಿ ಅಟಾರ್ನಿ ಜನರಲ್ ಮತ್ತು ಖ್ಯಾತ ನ್ಯಾಯವಾದಿ ಸೋಲಿ ಸೊರಾಬ್ಜಿ ಅವರ ನಿಧನಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ಸಂತಾಪ ಸೂಚಿಸಿ ಗೌರವ ಸಲ್ಲಿಸಿದೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ದಿನದ ನ್ಯಾಯಾಲಯದ ವಿಚಾರಣೆಯನ್ನು ಪ್ರಾರಂಭಿಸುವ ಮುನ್ನ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಮತ್ತು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎ.ಎಸ್.ಬೋಪಣ್ಣ ಅವರ ನ್ಯಾಯಪೀಠ, "ಮಾನವ ಹಕ್ಕುಗಳ ಹೋರಾಟಗಾರ ಸೋಲಿ ಸೊರಾಬ್ಜಿ ಅವರು ಇಂದು ಬೆಳಿಗ್ಗೆ ನಿಧನ ಹೊಂದಿದ್ದಾರೆ ಎಂಬುದು ಬಹಳ ದುಃಖದ ಸುದ್ದಿ. ನಾವು ಅವರ ಆತ್ಮಕ್ಕೆ ಶಾಂತಿ ಲಭಿಸಲೆಂದು ಪ್ರಾರ್ಥಿಸುತ್ತೇವೆ." ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT