ರೋಹಿತ್ ಸರ್ದಾನಾ 
ದೇಶ

ಹಿರಿಯ ಟಿವಿ ಪತ್ರಕರ್ತ 41 ವರ್ಷದ ರೋಹಿತ್‌ ಸರ್ದಾನ ಕೋವಿಡ್‌ಗೆ ಬಲಿ, ಪ್ರಧಾನಿ ಮೋದಿ ಸಂತಾಪ!

ಹಿರಿಯ ಪತ್ರಕರ್ತ ರೋಹಿತ್ ಸರ್ದಾನಾ ಅವರಿಗೆ ಕೋವಿಡ್‌ ಸೋಂಕು ದೃಢಪಟ್ಟ ಒಂದು ವಾರದ ನಂತರ ಶುಕ್ರವಾರ ಬೆಳಿಗ್ಗೆ ಹಠಾತ್ ಹೃದಯಾಘಾತದಿಂದ ನಿಧನರಾದರು.

ನವದೆಹಲಿ: ಹಿರಿಯ ಪತ್ರಕರ್ತ ರೋಹಿತ್ ಸರ್ದಾನಾ ಅವರಿಗೆ ಕೋವಿಡ್‌ ಸೋಂಕು ದೃಢಪಟ್ಟ ಒಂದು ವಾರದ ನಂತರ ಶುಕ್ರವಾರ ಬೆಳಿಗ್ಗೆ ಹಠಾತ್ ಹೃದಯಾಘಾತದಿಂದ ನಿಧನರಾದರು.

ಹಿಂದಿ ಸುದ್ದಿ ಚಾನೆಲ್ ಆಜ್ ತಕ್ ನಲ್ಲಿ ಕೆಲಸ ಮಾಡುತ್ತಿದ್ದ 41 ವರ್ಷದ ರೋಹಿತ್ ಸರ್ದಾನಾ ಜನಪ್ರಿಯ ಚರ್ಚಾ ಕಾರ್ಯಕ್ರಮ 'ದಂಗಲ್' ಅನ್ನು ಆಯೋಜಿಸಿದ್ದರು. ಅವರಿಗೆ ಏ. 24 ರಂದು ಮಾರಣಾಂತಿಕ ಸೋಂಕು ದೃಢಪಟ್ಟಿತ್ತು.

ಆಜ್ ತಕ್ ಅವರ ಸಹೋದರ ಸಂಸ್ಥೆ ಇಂಗ್ಲಿಷ್ ನ್ಯೂಸ್ ಚಾನೆಲ್ ಇಂಡಿಯಾ ಟುಡೆ ಈ ಸುದ್ದಿಯನ್ನು ದೃಢಪಡಿಸಿದ್ದು, 'ನಮ್ಮ ಆತ್ಮೀಯ ಸಹೋದ್ಯೋಗಿ ಮತ್ತು ಸ್ನೇಹಿತ ರೋಹಿತ್ ಸರ್ದಾನ ಅವರ ಅಕಾಲಿಕ ನಷ್ಟವು ನಮಗೆ ಆಘಾತವನ್ನುಂಟು ಮಾಡಿದೆ. ಇದು ತುಂಬಲಾರದ ನಷ್ಟ ಅದನ್ನು ಯಾವುದೇ ಪದಗಳಿಂದ ವಿವರಿಸಲು ಸಾಧ್ಯವಿಲ್ಲ. ಕುಟುಂಬಕ್ಕೆ ಶಕ್ತಿ ತುಂಬಲು ಪ್ರಾರ್ಥಿಸೋಣ' ಎಂದಿದೆ. 

ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ರೋಹಿತ್ ಸರ್ದಾನಾ ನಮ್ಮನ್ನು ಬೇಗನೆ ಅಗಲಿದ್ದಾರೆ. ಭಾರತದ ಪ್ರಗತಿಯ ಬಗ್ಗೆ ಉತ್ಸಾಹ ಮತ್ತು ಕರುಣಾಳು ಆತ್ಮ, ರೋಹಿತ್ ಅವರನ್ನು ಅನೇಕ ಜನರು ಕಳೆದುಕೊಂಡಿದ್ದಾರೆ. ಅವರ ಅಕಾಲಿಕ ನಿಧನವು ಮಾಧ್ಯಮ ಜಗತ್ತಿನಲ್ಲಿ ಭಾರಿ ಅನೂರ್ಜಿತತೆಯನ್ನುಂಟು ಮಾಡಿದೆ. ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ಸಂತಾಪ ಸೂಚಿಸಿದ್ದಾರೆ. ಓಂ ಶಾಂತಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT