ರೋಹಿತ್ ಸರ್ದಾನಾ 
ದೇಶ

ಹಿರಿಯ ಟಿವಿ ಪತ್ರಕರ್ತ 41 ವರ್ಷದ ರೋಹಿತ್‌ ಸರ್ದಾನ ಕೋವಿಡ್‌ಗೆ ಬಲಿ, ಪ್ರಧಾನಿ ಮೋದಿ ಸಂತಾಪ!

ಹಿರಿಯ ಪತ್ರಕರ್ತ ರೋಹಿತ್ ಸರ್ದಾನಾ ಅವರಿಗೆ ಕೋವಿಡ್‌ ಸೋಂಕು ದೃಢಪಟ್ಟ ಒಂದು ವಾರದ ನಂತರ ಶುಕ್ರವಾರ ಬೆಳಿಗ್ಗೆ ಹಠಾತ್ ಹೃದಯಾಘಾತದಿಂದ ನಿಧನರಾದರು.

ನವದೆಹಲಿ: ಹಿರಿಯ ಪತ್ರಕರ್ತ ರೋಹಿತ್ ಸರ್ದಾನಾ ಅವರಿಗೆ ಕೋವಿಡ್‌ ಸೋಂಕು ದೃಢಪಟ್ಟ ಒಂದು ವಾರದ ನಂತರ ಶುಕ್ರವಾರ ಬೆಳಿಗ್ಗೆ ಹಠಾತ್ ಹೃದಯಾಘಾತದಿಂದ ನಿಧನರಾದರು.

ಹಿಂದಿ ಸುದ್ದಿ ಚಾನೆಲ್ ಆಜ್ ತಕ್ ನಲ್ಲಿ ಕೆಲಸ ಮಾಡುತ್ತಿದ್ದ 41 ವರ್ಷದ ರೋಹಿತ್ ಸರ್ದಾನಾ ಜನಪ್ರಿಯ ಚರ್ಚಾ ಕಾರ್ಯಕ್ರಮ 'ದಂಗಲ್' ಅನ್ನು ಆಯೋಜಿಸಿದ್ದರು. ಅವರಿಗೆ ಏ. 24 ರಂದು ಮಾರಣಾಂತಿಕ ಸೋಂಕು ದೃಢಪಟ್ಟಿತ್ತು.

ಆಜ್ ತಕ್ ಅವರ ಸಹೋದರ ಸಂಸ್ಥೆ ಇಂಗ್ಲಿಷ್ ನ್ಯೂಸ್ ಚಾನೆಲ್ ಇಂಡಿಯಾ ಟುಡೆ ಈ ಸುದ್ದಿಯನ್ನು ದೃಢಪಡಿಸಿದ್ದು, 'ನಮ್ಮ ಆತ್ಮೀಯ ಸಹೋದ್ಯೋಗಿ ಮತ್ತು ಸ್ನೇಹಿತ ರೋಹಿತ್ ಸರ್ದಾನ ಅವರ ಅಕಾಲಿಕ ನಷ್ಟವು ನಮಗೆ ಆಘಾತವನ್ನುಂಟು ಮಾಡಿದೆ. ಇದು ತುಂಬಲಾರದ ನಷ್ಟ ಅದನ್ನು ಯಾವುದೇ ಪದಗಳಿಂದ ವಿವರಿಸಲು ಸಾಧ್ಯವಿಲ್ಲ. ಕುಟುಂಬಕ್ಕೆ ಶಕ್ತಿ ತುಂಬಲು ಪ್ರಾರ್ಥಿಸೋಣ' ಎಂದಿದೆ. 

ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ರೋಹಿತ್ ಸರ್ದಾನಾ ನಮ್ಮನ್ನು ಬೇಗನೆ ಅಗಲಿದ್ದಾರೆ. ಭಾರತದ ಪ್ರಗತಿಯ ಬಗ್ಗೆ ಉತ್ಸಾಹ ಮತ್ತು ಕರುಣಾಳು ಆತ್ಮ, ರೋಹಿತ್ ಅವರನ್ನು ಅನೇಕ ಜನರು ಕಳೆದುಕೊಂಡಿದ್ದಾರೆ. ಅವರ ಅಕಾಲಿಕ ನಿಧನವು ಮಾಧ್ಯಮ ಜಗತ್ತಿನಲ್ಲಿ ಭಾರಿ ಅನೂರ್ಜಿತತೆಯನ್ನುಂಟು ಮಾಡಿದೆ. ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ಸಂತಾಪ ಸೂಚಿಸಿದ್ದಾರೆ. ಓಂ ಶಾಂತಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು