ಅಮಾನತು (ಸಾಂಕೇತಿಕ ಚಿತ್ರ) 
ದೇಶ

ಧನ್ಬಾದ್ ನ್ಯಾಯಾಧೀಶರ ಸಾವು ಪ್ರಕರಣ: ಪಠಾರ್ಡಿಹ್ ಪೊಲೀಸ್ ಠಾಣೆಯ ಇನ್-ಚಾರ್ಜ್ ಅಮಾನತು

ಧನ್ಬಾದ್ ಹಿಟ್& ರನ್ ಘಟನೆಯಲ್ಲಿ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶ ಉತ್ತಮ್ ಆನಂದ್ ಸಾವಿಗೀಡಾಗಿದ್ದ ಪ್ರಕರಣದಲ್ಲಿ ಪಠಾರ್ಡಿಹ್ ಪೊಲೀಸ್ ಠಾಣೆಯ ಇನ್ ಚಾರ್ಜ್ ಪೊಲೀಸ್ ಅಧಿಕಾರಿ ಉಮೇಶ್ ಮಾಂಝಿ ಅವರನ್ನು ಅಮಾನತುಗೊಳಿಸಲಾಗಿದೆ. 

ರಾಂಚಿ: ಧನ್ಬಾದ್ ಹಿಟ್& ರನ್ ಘಟನೆಯಲ್ಲಿ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶ ಉತ್ತಮ್ ಆನಂದ್ ಸಾವಿಗೀಡಾಗಿದ್ದ ಪ್ರಕರಣದಲ್ಲಿ ಪಠಾರ್ಡಿಹ್ ಪೊಲೀಸ್ ಠಾಣೆಯ ಇನ್ ಚಾರ್ಜ್ ಪೊಲೀಸ್ ಅಧಿಕಾರಿ ಉಮೇಶ್ ಮಾಂಝಿ ಅವರನ್ನು ಅಮಾನತುಗೊಳಿಸಲಾಗಿದೆ. 

ಸೆಷನ್ಸ್ ನ್ಯಾಯಾಧೀಶರಾಗಿದ್ದ ಉತ್ತಮ್ ಆನಂದ್  ಅವರು ಕಳೆದ ವಾರ ಬೆಳಿಗ್ಗೆ ವಾಕಿಂಗ್ ಮಾಡುತ್ತಿರಬೇಕಾದರೆ ಕಳುವಾಗಿದ್ದ ಆಟೋ ರಭಸದಿಂದ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದರು. 

ಶುಕ್ರವಾರದಂದು ಬೆಳಿಗ್ಗೆ ಆಟೋ ಕಳುವಾಗಿರುವ ಸಂಬಂಧ ದೂರು ನೀಡಲಾಗಿದ್ದರೂ ತಕ್ಷಣ ಕ್ರಮ ಜರುಗಿಸದೇ ಕರ್ತವ್ಯಲೋಪ ಎಸಗಿದ ಅಧಿಕಾರಿ ಮಾಂಝಿ ಅವರನ್ನು ಎಸ್ಎಸ್ ಪಿ ಸಂಜೀವ್ ಕುಮಾರ್ ಅಮಾನತುಗೊಳಿಸಿದ್ದಾರೆ. 

ಪ್ರಕರಣದಲ್ಲಿ ಬಂಧಿತರಾಗಿರುವ ಇಬ್ಬರೂ ಆರೋಪಿಗಳು ಪಠಾರ್ಡಿಹ್ ಪೊಲೀಸ್ ಠಾಣೆಯ ವ್ಯಾಪ್ತಿಯವರೇ ಆಗಿದ್ದಾರೆ. ನ್ಯಾಯಾಧೀಶರಿಗೆ ಡಿಕ್ಕಿ ಹೊಡೆದ ಆಟೋವನ್ನೂ ಇದೇ ಪ್ರದೇಶದಿಂದ ವಶಕ್ಕೆ ಪಡೆಯಲಾಗಿದೆ. 

ಆಟೋ ಕಳುವು ಪ್ರಕರಣವನ್ನು ವಾಹನದ ಮಾಲಿಕರಾಗಿದ್ದ ಸುಂಗಿ ದೇವಿ ದಾಖಲಿಸಿದ್ದರು. ಆದರೆ ಈಕೆಯ ಪತಿ-ಈಗಾಗಲೇ ಅಪರಾಧ ಹಾಗೂ ಪೊಲೀಸ್ ವಿಚಾರಣೆಯ ಹಿನ್ನೆಲೆ ಇರುವ ರಾಮ್ ದೇವ್ ಲೋಹ್ರಾ ಅವರನ್ನು ಬಂಧಿಸಲಾಗಿದೆ. 

ಸಿಸಿಟಿವಿ ಫುಟೇಜ್ ನಲ್ಲಿ ಉತ್ತಮ್ ಆನಂದ್ ಅವರಿಗೆ ಉದ್ದೇಶಪೂರ್ವಕವಾಗಿ ಅಪಘಾತ ಮಾಡಿಸಲಾಗಿರುವುದು ಸ್ಪಷ್ಟವಾಗಿದ್ದು, ಹಲವು ಅನುಮಾನಗಳನ್ನು ಮೂಡಿಸಿತ್ತು. ಗಾಲ್ಫ್ ಗ್ರೌಂಡ್ಸ್ ನಲ್ಲಿರುವ ಉತ್ತಮ್ ಆನಂದ್ ಅವರ ನಿವಾಸಕ್ಕೆ 500 ಮೀಟರ್ ಗಳ ದೂರದಲ್ಲಿ ಈ ಘಟನೆ ಸಂಭವಿಸಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT