ಸಾಂದರ್ಭಿಕ ಚಿತ್ರ 
ದೇಶ

ಕೇರಳದಿಂದ ತಮಿಳುನಾಡಿಗೆ ಬರುವವರಿಗೆ ಆಗಸ್ಟ್ 5 ರಿಂದ ಆರ್ ಟಿ-ಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ

ಕೇರಳದಿಂದ ಬರುವವರಿಗೆ ಆರ್ ಟಿ- ಪಿಸಿಆರ್ ನೆಗೆಟಿವ್ ವರದಿಯನ್ನು ತಮಿಳುನಾಡು ಸರ್ಕಾರ ಭಾನುವಾರ ಕಡ್ಡಾಯ ಮಾಡಿದೆ. ಅಲ್ಲದೇ, ತಮಿಳುನಾಡಿಗೆ ಬರುವ ಪ್ರಯಾಣಿಕರು ಸಂಪೂರ್ಣ ಲಸಿಕೆ ಪ್ರಮಾಣ ಪತ್ರವನ್ನು ಹಾಜರುಪಡಿಸಬಹುದಾಗಿದೆ.

ಚೆನ್ನೈ: ಕೇರಳದಿಂದ ಬರುವವರಿಗೆ ಆರ್ ಟಿ- ಪಿಸಿಆರ್ ನೆಗೆಟಿವ್ ವರದಿಯನ್ನು ತಮಿಳುನಾಡು ಸರ್ಕಾರ ಭಾನುವಾರ ಕಡ್ಡಾಯ ಮಾಡಿದೆ. ಅಲ್ಲದೇ, ತಮಿಳುನಾಡಿಗೆ ಬರುವ ಪ್ರಯಾಣಿಕರು ಸಂಪೂರ್ಣ ಲಸಿಕೆ ಪ್ರಮಾಣ ಪತ್ರವನ್ನು ಹಾಜರುಪಡಿಸಬಹುದಾಗಿದೆ.

ಕೇರಳದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಕಳೆದ ಮೂರು ದಿನಗಳಲ್ಲಿ ತಮಿಳುನಾಡಿನಲ್ಲೂ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವುದನ್ನು ನೋಡಬಹುದಾಗಿದೆ ಎಂದು ತಮಿಳುನಾಡು ಆರೋಗ್ಯ ಸಚಿವ ಮಾ ಸುಬ್ರಮಣಿಯನ್ ಹೇಳಿದರು.

ಆರೋಗ್ಯ ಕಾರ್ಯದರ್ಶಿ ಜೆ ರಾಧಾಕೃಷ್ಣನ್ ಜೊತೆಯಲ್ಲಿ ಭಾನುವಾರ ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಬ್ರಮಣಿಯನ್, ಕೇರಳದಿಂದ ರೈಲು, ವಿಮಾನ ಅಥವಾ ರಸ್ತೆ ಮೂಲಕ ಬರುವವರು ಕಡ್ಡಾಯವಾಗಿ ಆರ್ ಟಿ- ಪಿಸಿಆರ್ ನೆಗೆಟಿವ್ ವರದಿ ಕಡ್ಡಾಯಪಡಿಸಬೇಕು.ಇದು ಆಗಸ್ಟ್ 5 ರಿಂದ ಜಾರಿಗೆ ಬರಲಿದೆ ಎಂದು ಅವರು ತಿಳಿಸಿದರು.

ಲಸಿಕೆ ಪ್ರಮಾಣ ಪತ್ರ ಹಾಜರುಪಡಿಸುವವರಿಗೆ ರಾಜ್ಯಕ್ಕೆ ಬರಲು ಅನುಮತಿ ನೀಡಲಾಗಿದೆ. ಆದರೆ, ಎರಡನೇ ಡೋಸ್ ಲಸಿಕೆ ಪಡೆದು 14 ದಿನ ಪೂರ್ಣಗೊಳಿಸಿರಬೇಕು ಅಂತವರಿಗೆ ರಾಜ್ಯ ಪ್ರವೇಶಕ್ಕೆ ಅವಕಾಶ ನೀಡಲಾಗುವುದು ಎಂದು ಅವರು ಹೇಳಿದರು.

ಕೋವಿಡ್-19 ಸಾಂಕ್ರಾಮಿಕ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸುಬ್ರಮಣಿಯನ್ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT