ಸಂಗ್ರಹ ಚಿತ್ರ 
ದೇಶ

ಪೆಗಾಸಸ್ ವಿವಾದ: ಆಗಸ್ಟ್ 5 ರಂದು ಸುಪ್ರೀಂಕೋರ್ಟ್ ವಿಚಾರಣೆ

ಪೆಗಾಸಸ್ ಗೂಢಚರ್ಯೆಯನ್ನು ಸುಪ್ರೀಂ ಕೋರ್ಟ್‌ನ ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸ್ವತಂತ್ರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಹಿರಿಯ ಪತ್ರಕರ್ತರಾದ ಎನ್‌.ರಾಮ್ ಮತ್ತು ಶಶಿ ಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಆಗಸ್ಟ್ 5 ರಂದು ವಿಚಾರಣೆ ನಡೆಸಲಿದೆ ಎಂದು ತಿಳಿದುಬಂದಿದೆ. 

ನವದೆಹಲಿ: ಪೆಗಾಸಸ್ ಗೂಢಚರ್ಯೆಯನ್ನು ಸುಪ್ರೀಂ ಕೋರ್ಟ್‌ನ ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸ್ವತಂತ್ರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಹಿರಿಯ ಪತ್ರಕರ್ತರಾದ ಎನ್‌.ರಾಮ್ ಮತ್ತು ಶಶಿ ಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಆಗಸ್ಟ್ 5 ರಂದು ವಿಚಾರಣೆ ನಡೆಸಲಿದೆ ಎಂದು ತಿಳಿದುಬಂದಿದೆ. 

ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಮತ್ತು ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠ ಗುರುವಾರ (ಆ.5) ವಿಚಾರಣೆ ನಡೆಸಲಿದೆ ಎಂದು ತಿಳಿದುಬಂದಿದೆ. 

ಪೆಗಾಸಸ್ ಗೂಢಚರ್ಯೆಯನ್ನು ಸುಪ್ರೀಂ ಕೋರ್ಟ್‌ನ ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸ್ವತಂತ್ರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಹಿರಿಯ ಪತ್ರಕರ್ತರಾದ ಎನ್ ರಾಮ್ ಮತ್ತು ಶಶಿಕುಮಾರ್, ಕಮ್ಯುನಿಸ್ಟ್ ಮಾರ್ಕ್ಸಿಸ್ಟ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಸಭಾ ಸಂಸದ ಜಾನ್ ಬ್ರಿಟಾಸ್ ಮತ್ತು ವಕೀಲ ಎಂಎಲ್ ಶರ್ಮಾ ಅವರು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. 

ಈ ಅರ್ಜಿಯ ವಿಚಾರವನ್ನು ನಿನ್ನೆ ಹಿರಿಯ ವಕೀಲ ಕಪಿಲ್ ಸಿಬಲ್ ಅವರು. ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಮತ್ತು ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ಪೀಠದ ಮುಂದೆ ಮಂಡಿಸಿದ್ದರು.

ನಾಗರಿಕರು, ರಾಜಕಾರಣಿಗಳು, ವಿರೋಧ ಪಕ್ಷಗಳ ನಾಯಕರು, ಪತ್ರಕರ್ತರು ಮತ್ತು ನ್ಯಾಯಾಲಯದ ಸಿಬ್ಬಂದಿಯನ್ನು ಗೂಢಚರ್ಯೆಗೆ ಗುರಿ ಮಾಡಲಾಗಿದೆ. ಈ ವಿಚಾರ ದೇಶ ದಾದ್ಯಂತ, ವಿಶ್ವದಾದ್ಯಂತ ಭಾರಿ ಸದ್ದು ಮಾಡುತ್ತಿದೆ. ಹೀಗಾಗಿ ಈ ಅರ್ಜಿಯನ್ನು ತಕ್ಷಣವೇ ವಿಚಾರಣೆಗೆ ಎತ್ತಿಕೊಳ್ಳಬೇಕು’ ಎಂದು ಪ್ರತಿಪಾದಿಸಿದ್ದರು.

ಈ ಅರ್ಜಿಯನ್ನು ತುರ್ತು ವಿಚಾರಣೆ ಕೋರಿಕೆ ಪಟ್ಟಿಗೆ ಸೇರಿಸಲು ನ್ಯಾಯಾಲಯದ ಸಿಬ್ಬಂದಿ ಸಿದ್ಧರಿರಲಿಲ್ಲ’ ಎಂದು ಮತ್ತೊಬ್ಬ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಪೀಠದ ಮುಂದೆ ಹೇಳಿದರು. ಅರ್ಜಿದಾರರ ಪರ ವಕೀಲರ ಪ್ರತಿಪಾದನೆಯನ್ನು ಆಲಿಸಿದ ಪೀಠವು ಆಗಸ್ಟ್ 5 ರಂದು ವಿಚಾರಣೆ ನಡೆಸುವುದಾಗಿ ತಿಳಿಸಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT