ನಿತೀಶ್ ಕುಮಾರ್ 
ದೇಶ

ಪೆಗಾಸಸ್‌ ವಿವಾದ: ಮೌನ ಮುರಿದ ನಿತೀಶ್ ಕುಮಾರ್; ವಿರೋಧ ಪಕ್ಷಗಳನ್ನು ಬೆಂಬಲಿಸಿದ ಬಿಹಾರ ಸಿಎಂ, ತನಿಖೆಗೆ ಆಗ್ರಹ

ರಾಜಕಾರಣಿಗಳು, ಪತ್ರಕರ್ತರು, ನ್ಯಾಯಾಧೀಶರು ಮತ್ತು ಇತರರು ಇಸ್ರೇಲಿ ಸ್ಪೈವೇರ್‌ಗಳ ದಾಳಿಗೆ ಗುರಿಯಾಗಿದ್ದರು ಎನ್ನಲಾದ ಪೆಗಾಸಸ್ ಹಗರಣದ ತನಿಖೆಗೆ ಪ್ರತಿಪಕ್ಷಗಳು ಆಗ್ರಹಿಸಿದೆ.

ಪಾಟ್ನಾ: ರಾಜಕಾರಣಿಗಳು, ಪತ್ರಕರ್ತರು, ನ್ಯಾಯಾಧೀಶರು ಮತ್ತು ಇತರರು ಇಸ್ರೇಲಿ ಸ್ಪೈವೇರ್‌ಗಳ ದಾಳಿಗೆ ಗುರಿಯಾಗಿದ್ದರು ಎನ್ನಲಾದ ಪೆಗಾಸಸ್ ಹಗರಣದ ತನಿಖೆಗೆ ಪ್ರತಿಪಕ್ಷಗಳು ಆಗ್ರಹಿಸಿದ್ದು, ಇದಕ್ಕೀಗ ಬಿಹಾರ ಮುಖ್ಯಮಂತ್ರಿ ಮತ್ತು ಬಿಜೆಪಿ ಮಿತ್ರ ನಿತೀಶ್ ಕುಮಾರ್ ಕೂಡ ಧ್ವನಿಗೂಡಿಸಿದ್ದಾರೆ.

ಪೆಗಾಸಸ್‌ ಕುತಂತ್ರಾಂಶ ಬಳಸಿ ಗೂಢಚರ್ಯೆ ನಡೆಸಿದ್ದಾರೆ ಎನ್ನಲಾದ ಪ್ರಕರಣದ ಬಗ್ಗೆ ತನಿಖೆ ನಡೆಸಬೇಕು ಎಂಬ ವಿರೋಧ ಪಕ್ಷಗಳ ಬೇಡಿಕೆಗೆ ಆಡಳಿತಾರೂಢ ಎನ್‌ಡಿಎಯ ಅಂಗವಾಗಿರುವ ಜೆಡಿಯುನ ಮುಖ್ಯಸ್ಥ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ದನಿಗೂಡಿಸಿದ್ದಾರೆ. 

ದೂರವಾಣಿ ಕದ್ದಾಲಿಕೆಯ ಬಗ್ಗೆ ಬಹಳ ದಿನಗಳಿಂದ ಮಾತುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಚರ್ಚೆ (ಸಂಸತ್ತಿನಲ್ಲಿ) ನಡೆಯಲೇಬೇಕು. ಆರಂಭದ ದಿನದಿಂದಲೇ ನಾನು ಇದನ್ನು ಹೇಳುತ್ತಿದ್ದೇನೆ. ಆದರೆ ಸಂಸತ್ತಿನಲ್ಲಿ ಹೇಳಿಕೆ ನೀಡಿರುವ ಸರಕಾರ, ಯಾವುದೇ ಅಕ್ರಮ ನಡೆಸಿಲ್ಲ ಎಂದು ಹೇಳಿದೆ. ಆದರೆ ಎರಡೂ ಸದನಗಳಲ್ಲಿ ಈ ವಿಷಯದ ಬಗ್ಗೆ ಚರ್ಚೆ ನಡೆದಿಲ್ಲ. ಈ ಬಗ್ಗೆ ತನಿಖೆ  ನಡೆಯಲೇಬೇಕು' ಎಂದು ನಿತೀಶ್‌ ಕುಮಾರ್‌ ಹೇಳಿದ್ದಾರೆ.

ಈಗಿನ ದಿನಗಳಲ್ಲಿ ಇಂತಹುದನ್ನು (ಗೂಢಚರ್ಯೆ) ಯಾರು ಬೇಕಿದ್ದರೂ ವಿವಿಧ ರೀತಿಯಲ್ಲಿ ಮಾಡಬಹುದು. ಹಾಗಾಗಿ, ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಇಡೀ ಪ್ರಕರಣದ ಎಲ್ಲ ಆಯಾಮಗಳನ್ನೂ ಪರಿಶೀಲನೆಗೆ ಒಳಪಡಿಸಬೇಕು’ ಎಂದು ನಿತೀಶ್‌ ಹೇಳಿದ್ದಾರೆ. ನಿತೀಶ್ ಹೇಳಿಕೆಯ ಬಗ್ಗೆ ಹಲವಾರು ಪ್ರತಿಕ್ರಿಯೆಗಳು ಬಂದಿವೆ. ಲಾಲು ಪ್ರಸಾದ್‌ ನೇತೃತ್ವದ ಆರ್‌ಜೆಡಿ ಈ ಹೇಳಿಕೆಯನ್ನು ಸ್ವಾಗತಿಸಿದೆ. ನಿತೀಶ್‌ ಅವರು ಈ ಹೇಳಿಕೆಯನ್ನು ಹಿಂದಕ್ಕೆ ಪಡೆಯಲಿಕ್ಕಿಲ್ಲ ಎಂಬ ವಿಶ್ವಾಸವನ್ನು ಪಕ್ಷವು ವ್ಯಕ್ತಪಡಿಸಿದೆ. ‘ಬಿಜೆಪಿಗಿಂತ ಭಿನ್ನವಾದ ಹಲವು ನಿಲುವುಗಳನ್ನು ನಿತೀಶ್‌ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT