ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್ ಹೆಚ್ಚಿರುವ ಪ್ರದೇಶಗಳಲ್ಲಿ ಟ್ರಿಪಲ್ ಲಾಕ್‌ಡೌನ್ ಘೋಷಿಸಿದ ಕೇರಳ

1000 ಜನರಲ್ಲಿ 10ಕ್ಕಿಂತ ಹೆಚ್ಚು ಕೋವಿಡ್ -19 ಪ್ರಕರಣಗಳು ಪತ್ತೆಯಾದ ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಟ್ರಿಪಲ್ ಲಾಕ್‌ಡೌನ್ ವಿಧಿಸಲಾಗುವುದು ಎಂದು ಬುಧವಾರ ಕೇರಳ ಆರೋಗ್ಯ ಸಚಿವರು ಹೇಳಿದ್ದಾರೆ. 

ತಿರುವನಂತಪುರಂ: 1000 ಜನರಲ್ಲಿ 10ಕ್ಕಿಂತ ಹೆಚ್ಚು ಕೋವಿಡ್ -19 ಪ್ರಕರಣಗಳು ಪತ್ತೆಯಾದ ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಟ್ರಿಪಲ್ ಲಾಕ್‌ಡೌನ್ ವಿಧಿಸಲಾಗುವುದು ಎಂದು ಬುಧವಾರ ಕೇರಳ ಆರೋಗ್ಯ ಸಚಿವರು ಹೇಳಿದ್ದಾರೆ. 

ಕೋವಿಡ್ ಹೆಚ್ಚಿರುವ ಸ್ಥಳಗಳಲ್ಲಿ ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳನ್ನು ಮಾತ್ರ ತೆರೆಯಲು ಅನುಮತಿಸಲಾಗುತ್ತದೆ. ಉಳಿದ ಕಡೆ ಭಾನುವಾರ ಹೊರತುಪಡಿಸಿ ಎಲ್ಲಾ ಅಂಗಡಿಗಳು ವಾರದ ಆರು ದಿನ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗುತ್ತದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ತಿಳಿಸಿದ್ದಾರೆ. 

ಆಗಸ್ಟ್ 15 ಮತ್ತು ಆಗಸ್ಟ್ 22 ಭಾನುವಾರಗಳಾಗಿದ್ದರೂ, ಕ್ರಮವಾಗಿ ಸ್ವಾತಂತ್ರ್ಯ ದಿನ ಮತ್ತು ಓಣಂ ಕಾರಣದಿಂದ ಲಾಕ್‌ಡೌನ್‌ನಿಂದ ವಿನಾಯಿತಿ ನೀಡಲಾಗುತ್ತದೆ. ರಾಜ್ಯವು ಅತ್ಯಧಿಕ ಪಾಸಿಟಿವ್ ಪ್ರಮಾಣ, ಶೇಕಡಾ 12 ರಷ್ಟು ಮತ್ತು 1.74 ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳನ್ನು ಹೊಂದಿದೆ ಎಂದು ವೀಣಾ ಅವರು ವಿಧಾನಸಭೆಗೆ ತಿಳಿಸಿದ್ದಾರೆ.

ಇನ್ನು ಅಂಗಡಿ ತೆರೆಯುವ ಸಮಯವನ್ನು ಬೆಳಗ್ಗೆ 7 ರಿಂದ ರಾತ್ರಿ 9 ರವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ. ಅಂಗಡಿಗಳಿಗೆ ಭೇಟಿ ನೀಡುವ ಜನರಿಗೆ 25 ಚದರ ಅಡಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದರು.

ರಾಜ್ಯದಲ್ಲಿ ಕೋವಿಡ್ ಹರಡುವಿಕೆಯ ಬಗ್ಗೆ ಸಾರ್ವಜನಿಕರು ಜಾಗರೂಕರಾಗಿರಬೇಕು ಎಂದು ಸಚಿವರು ವಿನಂತಿಸಿದರು. "ಹಬ್ಬದ ಸಮಯದಲ್ಲಿ ಜನಸಂದಣಿಯನ್ನು ನಿರ್ವಹಿಸಲು ಮತ್ತು ಸಾಮಾಜಿಕ ಅಂತರವನ್ನು ಖಚಿತಪಡಿಸಿಕೊಳ್ಳಲು ಅಂಗಡಿಗಳಲ್ಲಿ ವ್ಯವಸ್ಥೆ ಇರಬೇಕು. ಈ ಕುರಿತು ಪೊಲೀಸರು ಮತ್ತು ಸ್ಥಳೀಯ ಸಂಸ್ಥೆಗಳು ಮೇಲ್ವಿಚಾರಣೆ ಮಾಡಬೇಕು ಎಂದು ವೀಣಾ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT