ಸಾಂದರ್ಭಿಕ ಚಿತ್ರ 
ದೇಶ

ಕಾಶ್ಮೀರದಲ್ಲಿ 370ನೇ ವಿಧಿ ರದ್ದತಿಗೆ 2 ವರ್ಷ: ತ್ರಿವರ್ಣ ಧ್ವಜ ಹಾರಿಸಿ ಬಿಜೆಪಿ ಸಂಭ್ರಮ, ಪಿಡಿಪಿಯಿಂದ 'ಶೋಕಾಚರಣೆ ದಿನ'

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ  ವಿಧಿ ರದ್ದುಗೊಳಿಸಿ ಗುರುವಾರಕ್ಕೆ ಎರಡು ವರ್ಷವಾಗಿದ್ದು, ಬಿಜೆಪಿ ಕಣಿವೆಯಲ್ಲಿ ತಿರಂಗಾ ರ್ಯಾಲಿಗಳನ್ನು ನಡೆಸುವ ಮೂಲಕ ಎರಡನೇ ವಾರ್ಷಿಕೋತ್ಸವವನ್ನು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ  ವಿಧಿ ರದ್ದುಗೊಳಿಸಿ ಗುರುವಾರಕ್ಕೆ ಎರಡು ವರ್ಷವಾಗಿದ್ದು, ಬಿಜೆಪಿ ಕಣಿವೆಯಲ್ಲಿ ತಿರಂಗಾ ರ್ಯಾಲಿಗಳನ್ನು ನಡೆಸುವ ಮೂಲಕ ಎರಡನೇ ವಾರ್ಷಿಕೋತ್ಸವವನ್ನು ಆಚರಿಸಿತು.

ಆದರೆ ಪಿಡಿಪಿ ಇದನ್ನು "ಜಮ್ಮು ಮತ್ತು ಕಾಶ್ಮೀರದ ಶೋಕ ದಿನ" ಎಂದು ಘೋಷಿಸಿತು ಮತ್ತು ಪ್ರತಿಭಟನಾ ಮೆರವಣಿಗೆಗಳನ್ನು ನಡೆಸಿತು.

ನ್ಯಾಷನಲ್ ಕಾನ್ಫರೆನ್ಸ್(ಎನ್‌ಸಿ) ಅಧ್ಯಕ್ಷ ಮತ್ತು ಸಂಸತ್ ಸದಸ್ಯ ಫಾರೂಕ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರದ ಜನರ ಸಂಕ್ಷಿಪ್ತ ಸಾಂವಿಧಾನಿಕ ಮತ್ತು ಪ್ರಜಾಪ್ರಭುತ್ವ ಹಕ್ಕುಗಳ ಮರುಸ್ಥಾಪನೆಗಾಗಿ ತಮ್ಮ ಪಕ್ಷ ತನ್ನ ಹೋರಾಟವನ್ನು ಮುಂದುವರಿಸಲಿದೆ ಎಂದು ಹೇಳಿದರು.

ಅನಂತನಾಗ್ ಜಿಲ್ಲೆಯ ಖಾನಬಾಲ್‌ನ ಬಿಜೆಪಿಯ ಮುನ್ಸಿಪಲ್ ಕೌನ್ಸಿಲರ್ ರೊಮಸಿಯಾ ರಫೀಕ್ ಅವರು ಖಾನಬಾಲ್‌ನ ಪದವಿ ಕಾಲೇಜ್ ಬಳಿ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಕಣಿವೆಯಲ್ಲಿ ಪಕ್ಷದ ಸಂಭ್ರಮಾಚರಣೆಗೆ ಚಾಲನೆ ನೀಡಿದರು.

ಇನ್ನು ಬಂಡಿಪೋರಾ ಬಿಜೆಪಿ ಜಿಲ್ಲಾ ಅಧ್ಯಕ್ಷ ಅಬ್ದುಲ್ ರೆಹಮಾನ್ ಟಿಕ್ರಿ ಅವರು, ಪಕ್ಷದ ಕಚೇರಿಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿದರು.

ಶ್ರೀನಗರದಲ್ಲಿ, ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ನೇತೃತ್ವದಲ್ಲಿ ಹಲವಾರು ಪಿಡಿಪಿ ನಾಯಕರು ಮತ್ತು ಕಾರ್ಯಕರ್ತರು ಕಪ್ಪು ಪಟ್ಟಿಗಳನ್ನು ಧರಿಸಿ ಶೇರ್-ಇ-ಕಾಶ್ಮೀರ ಪಾರ್ಕ್ ಬಳಿಯ ಪಕ್ಷದ ಮುಖ್ಯ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT