ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 
ದೇಶ

ಲೋಕಸಭೆಯಲ್ಲಿ ಆದಾಯ ತೆರಿಗೆ ಕಾಯ್ದೆಯ ತಿದ್ದುಪಡಿ ಮಸೂದೆ ಮಂಡನೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಲೋಕಸಭೆಯಲ್ಲಿ ಆದಾಯ ತೆರಿಗೆ ಕಾನೂನುಗಳ (ತಿದ್ದುಪಡಿ) ಮಸೂದೆ, 2021 ಅನ್ನು  ಮಂಡಿಸಿದರು. ಇದು ಹಿಂದಿನ ಆದಾಯ ತೆರಿಗೆ ಕಾನೂನನ್ನು ರದ್ದುಗೊಳಿಸಲು ನೆರವಾಗುತ್ತದೆ. 

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಲೋಕಸಭೆಯಲ್ಲಿ ಆದಾಯ ತೆರಿಗೆ ಕಾನೂನುಗಳ (ತಿದ್ದುಪಡಿ) ಮಸೂದೆ, 2021 ಅನ್ನು  ಮಂಡಿಸಿದರು. ಇದು ಹಿಂದಿನ ಆದಾಯ ತೆರಿಗೆ ಕಾನೂನನ್ನು ರದ್ದುಗೊಳಿಸಲು ನೆರವಾಗುತ್ತದೆ. ಇದರೊಂದಿಗೆ, ಈ ಮಸೂದೆ ಜಾಗತಿಕ ಕಾರ್ಪೊರೇಟ್ ದೈತ್ಯ ಕಂಪನಿಗಳಾದ ಕೆರ್ನ್ ಎನರ್ಜಿ ಮತ್ತು ವೊಡಾಫೋನ್ ಜೊತೆಗಿನ ವಿವಾದಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ. 

ಈ ಮಸೂದೆಯು ಆದಾಯ ತೆರಿಗೆ ಕಾಯ್ದೆ, 1961 ಕ್ಕೆ ತಿದ್ದುಪಡಿ ತರಲಿದೆ. ಇದರ ಪ್ರಕಾರ, 2021ರ ಮೇ 28ರಕ್ಕೂ ಮೊದಲು ನಡೆಸಿದ ವಹಿವಾಟುಗಳಿಗೆ ಅದರ ಮೇಲೆ ಭವಿಷ್ಯದಲ್ಲಿ ಯಾವುದೇ ತೆರಿಗೆ ಬೇಡಿಕೆಯನ್ನು ಹೆಚ್ಚಿಸಲಾಗುವುದಿಲ್ಲ. (ಅಂದರೆ, ಹಣಕಾಸು ಮಸೂದೆ, 2012 ರ ಅಧ್ಯಕ್ಷರ ಒಪ್ಪಿಗೆ ಪಡೆದ ದಿನಾಂಕ). ಆದರೆ, ಈ ಮಸೂದೆಗೆ ವಿಪಕ್ಷಗಳ ಭಾರಿ ವಿರೋಧ ವ್ಯಕ್ತವಾಯಿತು. ಕಾಂಗ್ರೆಸ್ ಪಕ್ಷದ ಅಧೀರ್ ರಂಜನ್ ಚೌಧರಿ, ಈ ಸದನವು ಪ್ರತಿ ಮಸೂದೆಯನ್ನು ಕೇವಲ ಏಳು ನಿಮಿಷಗಳ ಅವಧಿಯಲ್ಲಿ ಅಂಗೀಕರಿಸುವ ಮೂಲಕ ದಾಖಲೆ ನಿರ್ಮಿಸಿದೆ. ಇದು ಸಂಸದೀಯ ಪ್ರಜಾಪ್ರಭುತ್ವದ ಮೇಲೆ ಅತಿರೇಕದ ದಾಳಿ ಎಂದು ಆರೋಪಿಸಿದರು.

2012 ರ ಮೇ 28 ರ ಮೊದಲು ಮಾಡಿದ ಭಾರತೀಯ ಸ್ವತ್ತುಗಳನ್ನು ಪರೋಕ್ಷವಾಗಿ ವರ್ಗಾಯಿಸುವ ಬೇಡಿಕೆಯನ್ನು ಹಿಂತೆಗೆದುಕೊಳ್ಳುವುದು ಅಥವಾ ಬಾಕಿ ಇರುವ ವ್ಯಾಜ್ಯಗಳನ್ನು ಹಿಂಪಡೆಯಲು ಮತ್ತು ಒದಗಿಸುವಿಕೆಯನ್ನು ಒದಗಿಸುವುದು ಮುಂತಾದ  ಷರತ್ತುಗಳನ್ನು ಈ ಮಸೂದೆ ಒಳಗೊಂಡಿದೆ.

ವಿದೇಶಿ ಕಂಪನಿಯ ಷೇರುಗಳ ವರ್ಗಾವಣೆಯ ಮೂಲಕ ಭಾರತದಲ್ಲಿ ಇರುವ ಸ್ವತ್ತುಗಳ ವರ್ಗಾವಣೆಯಿಂದ ಉಂಟಾಗುವ ಲಾಭಗಳ ತೆರಿಗೆಯ ಸಮಸ್ಯೆಯು ಸಮಸ್ಯೆಯು ದೀರ್ಘಾವಧಿಯ ವ್ಯಾಜ್ಯದ ವಿಷಯವಾಗಿದೆ. ಅಂತಿಮವಾಗಿ, ಸುಪ್ರೀಂ ಕೋರ್ಟ್ 2012 ರಲ್ಲಿ ಒಂದು ತೀರ್ಪನ್ನು ನೀಡಿತ್ತು, ಭಾರತೀಯ ಸ್ವತ್ತುಗಳ ಪರೋಕ್ಷ ವರ್ಗಾವಣೆಯಿಂದ ಉಂಟಾಗುವ ಲಾಭಗಳು ಕಾಯಿದೆಯ ಪ್ರಸ್ತುತ ನಿಬಂಧನೆಗಳ ಅಡಿಯಲ್ಲಿ ತೆರಿಗೆಗೆ ಒಳಪಡುವುದಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT