ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ 
ದೇಶ

ಯಾವುದೇ ಸೋಶಿಯಲ್ ಮೀಡಿಯಾ ಫ್ಲಾಟ್ ಫಾರಂ ನಿರ್ಬಂಧಿಸುವ ಯೋಜನೆ ಇಲ್ಲ - ಕೇಂದ್ರ ಸರ್ಕಾರ

ಹೊಣೆಗಾರಿಕೆ ಸೇರಿದಂತೆ ಬಳಕೆದಾರರ ಸುರಕ್ಷತೆ ವಿಷಯಗಳ ಕುರಿತು ಸಾಮಾಜಿಕ ಮಾಧ್ಯಮ ಕಂಪನಿಗಳ ಜೊತೆಗೆ ನಿಯಮಿತವಾಗಿ ಸರ್ಕಾರ ಸಂವಾದ ನಡೆಸುತ್ತಿದ್ದು, ಪ್ರಸ್ತುತ ದೇಶದಲ್ಲಿ ಯಾವುದೇ ಸೋಶಿಯಲ್ ಮೀಡಿಯಾ ಫ್ಲಾಟ್ ಫಾರಂನ್ನು ನಿರ್ಬಂಧಿಸುವ ಯೋಜನೆ ಇಲ್ಲ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿಂದು ತಿಳಿಸಿತು.

ನವದೆಹಲಿ: ಹೊಣೆಗಾರಿಕೆ ಸೇರಿದಂತೆ ಬಳಕೆದಾರರ ಸುರಕ್ಷತೆ ವಿಷಯಗಳ ಕುರಿತು ಸಾಮಾಜಿಕ ಮಾಧ್ಯಮ ಕಂಪನಿಗಳ ಜೊತೆಗೆ ನಿಯಮಿತವಾಗಿ ಸರ್ಕಾರ ಸಂವಾದ ನಡೆಸುತ್ತಿದ್ದು, ಪ್ರಸ್ತುತ ದೇಶದಲ್ಲಿ ಯಾವುದೇ ಸೋಶಿಯಲ್ ಮೀಡಿಯಾ ಫ್ಲಾಟ್ ಫಾರಂನ್ನು ನಿರ್ಬಂಧಿಸುವ ಯೋಜನೆ ಇಲ್ಲ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿಂದು ತಿಳಿಸಿತು.

ದೇಶದ ಜನರಲ್ಲಿ ದ್ವೇಷಕಾರಿ, ಕೆಟ್ಟ ಮನೋಭಾವ ಬೆಳೆಸಲು ಕೆಲ ಬಳಕೆದಾರರು ಸಾಮಾಜಿಕ ಮಾಧ್ಯಮ ಫ್ಲಾಟ್ ಫಾರಂಗಳನ್ನು ದುರುಪಯೋಗಪಡಿಸಿಕೊಳ್ಳುವ ಮಧ್ಯೆ, ಯಾವುದೇ ಸಾಮಾಜಿಕ ಮಾಧ್ಯಮ ಅಥವಾ ಇತರೆ ಯಾವುದೇ ಮಧ್ಯವರ್ತಿಗಳಿಂದ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಾಶಗೊಳಿಸಲು ಸಾಧ್ಯವಿಲ್ಲ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ತಿಳಿಸಿದರು.

ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷಕಾರಿ ಅಂಶಗಳ ಬಗ್ಗೆ ಬಳಕೆದಾರರರಿಂದ ವಿವಿಧ ದೂರುಗಳನ್ನು ಸರ್ಕಾರ ಸ್ವೀಕರಿಸಿದ್ದು, ಸೂಕ್ತ ರೀತಿಯಲ್ಲಿ ಪ್ರತಿಕ್ರಿಯಿಸಿದೆ, ಸದ್ಯ ದೇಶದಲ್ಲಿ ಯಾವುದೇ ಸಾಮಾಜಿಕ ಮಾಧ್ಯ ಫ್ಲಾಟ್ ಫಾರಂಗಳನ್ನು ನಿರ್ಬಂಧಿಸುತ್ತಿಲ್ಲ ಎಂದು ಅವರು ಹೇಳಿದರು.

ಮಾಹಿತಿ ತಂತ್ರಜ್ಞಾನ ಕಾಯ್ದೆ 2000ರ ಸೆಕ್ಷನ್ 69ಎ ಅಡಿಯಲ್ಲಿ ದೇಶದ ರಕ್ಷಣೆ,  ಭದ್ರತೆ, ಏಕತೆ ಮತ್ತು ಸಾರ್ವಭೌಮತ್ವ ವಿದೇಶಗಳೊಂದಿಗೆ ಸ್ನೇಹಪೂರ್ವಕ ಸಂಬಂಧ ಅಥವಾ ಕಾನೂನು  ಹಿತದೃಷ್ಟಿಯಿಂದ ದುರುದ್ದೇಶಪೂರಿತ ಆನ್‌ಲೈನ್ ವಿಷಯಗಳನ್ನು ಸರ್ಕಾರ ನಿರ್ಬಂಧಿಸಬಹುದಾಗಿದೆ ಎಂದು ಅವರು ತಿಳಿಸಿದರು.

ಸಾಮಾಜಿಕ ಮಾಧ್ಯಮಗಳನ್ನು ನಿರ್ಬಂಧಿಸುವ ನೀತಿ ರೂಪಿಸಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರದ ನೀತಿಗಳು ನ್ಯಾಯಯುತ, ಮುಕ್ತ ಮತ್ತು ವಿಶ್ವಾಸಾರ್ಹ ಅಂತರ್ಜಾಲವನ್ನು ಖಾತ್ರಿಪಡಿಸುವ ಗುರಿಯನ್ನು ಹೊಂದಿವೆ ಮತ್ತು  2000 ಐಟಿ ಕಾಯ್ದೆ ಮತ್ತು ನಿಯಮಗಳು ಸೇರಿದಂತೆ ದೇಶದ ಕಾನೂನುಗಳನ್ನು ಪಾಲಿಸುವ ಮಧ್ಯವರ್ತಿಗಳಿಗೆ ದೇಶದಲ್ಲಿ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗುವುದು ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT