ಪ್ರಧಾನಿ ನರೇಂದ್ರ ಮೋದಿ ಅವರ ಸಾಂದರ್ಭಿಕ ಚಿತ್ರ 
ದೇಶ

ಖೇಲ್ ರತ್ನ ಪ್ರಶಸ್ತಿ: ಕ್ರೀಡಾಂಗಣದ ಹೆಸರು ಬದಲಾಯಿಸಿ- ಕಾಂಗ್ರೆಸ್ 

ಕ್ರೀಡೆಯಲ್ಲಿ ಅತ್ಯತ್ತಮ ಸಾಧನೆ ಮಾಡಿದವರಿಗೆ ನೀಡಲಾಗುವ ರಾಜೀವ್‍ಗಾಂಧಿ ಖೇಲ್‍ರತ್ನ ಪ್ರಶಸ್ತಿಯ ಹೆಸರನ್ನು ಬದಲಾವಣೆ ಮಾಡಲಾಗಿದ್ದು, ಮೇಜರ್ ದ್ಯಾನ್‍ಚಂದ್ ಅವರ ಹೆಸರನ್ನು ಮರುನಾಮಕರಣ ಮಾಡಿದ  ನಂತರ ಕ್ರೀಡಾಂಗಣಕ್ಕೆ ಇಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ  ಅರುಣ್ ಜೇಟ್ಲಿ ಅವರ ಹೆಸರನ್ನು ಬದಲಾಯಿಸುವಂತೆ ಕಾಂಗ್ರೆಸ್ ಒತ್ತಾಯಿಸಿದೆ.

ನವದೆಹಲಿ: ಕ್ರೀಡೆಯಲ್ಲಿ ಅತ್ಯತ್ತಮ ಸಾಧನೆ ಮಾಡಿದವರಿಗೆ ನೀಡಲಾಗುವ ರಾಜೀವ್‍ಗಾಂಧಿ ಖೇಲ್‍ರತ್ನ ಪ್ರಶಸ್ತಿಯ ಹೆಸರನ್ನು ಬದಲಾವಣೆ ಮಾಡಲಾಗಿದ್ದು, ಮೇಜರ್ ದ್ಯಾನ್‍ಚಂದ್ ಅವರ ಹೆಸರನ್ನು ಮರುನಾಮಕರಣ ಮಾಡಿದ  ನಂತರ ಕ್ರೀಡಾಂಗಣಕ್ಕೆ ಇಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ  ಅರುಣ್ ಜೇಟ್ಲಿ ಅವರ ಹೆಸರನ್ನು ಬದಲಾಯಿಸುವಂತೆ ಕಾಂಗ್ರೆಸ್ ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ, ಅತ್ಯಂತ ಪ್ರಸಿದ್ಧ ಕ್ರೀಡಾಪಟು ಮತ್ತು ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಅವರ ಹೆಸರನ್ನು ಮರು ನಾಮಕರಣ ಮಾಡಿರುವುದನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸುತ್ತದೆ ಎಂದರು. ನಂತರ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಸುರ್ಜೇವಾಲಾ, ಈ ನಿರ್ಧಾರ ತೆಗೆದುಕೊಳ್ಳುವುದರಲ್ಲಿ ರಾಜಕೀಯ ಉದ್ದೇಶವಿರುವುದಾಗಿ ಆರೋಪಿಸಿದರು.

ಮೇಜರ್ ಧ್ಯಾನ್ ಚಂದ್ ಅವರಂತಹ ಹೆಸರನ್ನು ರಾಜಕೀಯ ಉದ್ದೇಶಕ್ಕೆ ಪ್ರಧಾನಿ ಮೋದಿ ಎಳೆದು ತರುವುದಿಲ್ಲ ಎಂದು ಅಪಾರ ನಂಬಿಕೆಯಿದೆ. ರಾಜೀವ್ ಗಾಂಧಿ ಯಾವುದೇ ಪ್ರಶಸಿಗೆ ಹೆಸರಾಗಿಲ್ಲ, ಅವರು ತ್ಯಾಗ ಮತ್ತು ದೇಶಕ್ಕೆ ಬದ್ಧತೆ, ಆಲೋಚನೆಗಳಿಂದ ಮತ್ತು 21 ನೇ ಶತಮಾನದಲ್ಲಿ ಅವರು ಭಾರತವನ್ನು ಪರಿವರ್ತಿಸಿದ ರೀತಿಗಾಗಿ ಹೆಸರಾಗಿದ್ದಾರೆ ಎಂದು ಹೇಳಿದರು.

ಮಿಲ್ಕಾ ಸಿಂಗ್, ಸುನೀಲ್ ಗವಾಸ್ಕರ್, ಸಚಿನ್ ತೆಂಡೊಲ್ಕರ್, ಕಪಿಲ್ ದೇವ್, ಪಿ. ಟಿ ಉಷಾ, ಮೇರಿ ಕೋಮ್, ಅಭಿನವ್ ಬಿಂದ್ರಾ ಮತ್ತಿತರ ಅನೇಕ ದಿಗ್ಗಜ ಆಟಗಾರರು ಇರುವಾಗ ಇದೀಗ ಮೋದಿ ಅವರು ನರೇಂದ್ರ ಮೋದಿ ಸ್ಟೇಡಿಯಂ ಮತ್ತು ಅರುಣ್ ಜೇಟ್ಲಿ ಕ್ರೀಡಾಂಗಣದ ಹೆಸರನ್ನು ಬದಲಾಯಿಸಿ ಘೋಷಿಸಲಿದ್ದಾರೆ ಎಂಬ ಅಪಾರ ನಂಬಿಕೆ ಹೊಂದಿರುವುದಾಗಿ ಸುರ್ಜೇವಾಲಾ ಹೇಳಿದರು. 

ಒಲಂಪಿಕ್ ವರ್ಷದಲ್ಲಿ 230 ಕೋಟಿ ಕ್ರೀಡಾ ಬಜೆಟ್ ಕಡಿತ ಮಾಡಿದ ಪ್ರಧಾನಿ ಇದೀಗ ರೈತರು, ಅವರ ಪ್ರತಿಭಟನೆ, ಹಣದುಬ್ಬರದಿಂದ ಪಲಾಯನ ಮತ್ತು ಪೆಗಾಸಸ್ ನಂತಹ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ತಿರುಗಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT