ಆದಾರ್ ಪೂನಾವಾಲ-ಮನ್ಸುಖ್ ಮಾಂಡವಿಯಾ ಭೇಟಿ 
ದೇಶ

ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾರ ಭೇಟಿ ಮಾಡಿದ ಆದಾರ್ ಪೂನಾವಾಲ

ಕೋವಿಶೀಲ್ಡ್ ತಯಾರಿಕಾ ಸಂಸ್ಥೆ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯ ಮುಖ್ಯಸ್ಥ ಆದಾರ್ ಪೂನಾವಾಲ ಅವರು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

ನವದೆಹಲಿ: ಕೋವಿಶೀಲ್ಡ್ ತಯಾರಿಕಾ ಸಂಸ್ಥೆ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯ ಮುಖ್ಯಸ್ಥ ಆದಾರ್ ಪೂನಾವಾಲ ಅವರು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದ ವಿರುದ್ಧ ಹೋರಾಟದಲ್ಲಿ ನಿರ್ಣಾಯಕ ಪಾತ್ರವಹಿಸಿರುವ ಲಸಿಕೆಗಳಲ್ಲಿ ಕೋವಿಶೀಲ್ಜ್ ಕೂಡ ಒಂದಾಗಿದ್ದು, ಈ ಲಸಿಕೆಯನ್ನು ಆದಾರ್ ಪೂನಾವಾಲ ಅವರ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆ ತಯಾರಿಸುತ್ತಿದೆ. 

ಈಗಾಗಲೇ ದೇಶಾದ್ಯಂತ ಕೋಟ್ಯಂತರ ಡೋಸ್ ಲಸಿಕೆ ವಿತರಣೆಯಾಗಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಪ್ರಮಾಣದ ಲಸಿಕೆ ಸರಬರಾಜು ಕುರಿತಂತೆ ಆದಾರ್ ಪೂನಾವಾಲರೊಂದಿಗೆ ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಈ ಕುರಿತಂತೆ ಮಾಹಿತಿ ನೀಡಿರುವ ಆದಾರ್ ಪೂನಾವಾಲ ಅವರು, 'ಲಸಿಕೆ ಉತ್ಪಾದನೆಯನ್ನು ಹೆಚ್ಚಿಸುವ ಕುರಿತು ನಾವು ಚರ್ಚಿಸಿದ್ದೇವೆ. ಯುರೋಪಿನ 17 ಕ್ಕೂ ಹೆಚ್ಚು ದೇಶಗಳು ಈಗಾಗಲೇ ಕೋವಿಡ್‌ಶೀಲ್ಡ್ ಲಸಿಕೆಯನ್ನು ಅನುಮೋದಿಸಿವೆ ಮತ್ತು ಇನ್ನೂ ಅನೇಕ ದೇಶಗಳು ಅನುಮೋದನೆ ನೀಡಲು ಸರದಿಯಲ್ಲಿವೆ. ಹೀಗಾಗಿ ಮುಂದಿನ ದಿನಗಳಲ್ಲಿ ಉತ್ಪಾದನಾ ಪ್ರಮಾಣ ಹೆಚ್ಚಿಸುವ ಕುರಿತು ಚರ್ಚೆ ನಡೆಸಲಾಯಿತು ಎಂದು ಹೇಳಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

SCROLL FOR NEXT