ಚಿದಂಬರಂ 
ದೇಶ

ಹೈಕೋರ್ಟ್‌ ಮತ್ತು ನ್ಯಾಯಮಂಡಳಿಗಳಲ್ಲಿ ನ್ಯಾಯಾಧೀಶರ ನೇಮಕ ಮಾಡುವಲ್ಲಿ ಕೇಂದ್ರ ಸರ್ಕಾರ ವಿಫಲ: ಚಿದಂಬರಂ

ದೇಶದ ಹಲವು ಹೈಕೋರ್ಟ್‌ ಮತ್ತು ನ್ಯಾಯಮಂಡಳಿಗಳಲ್ಲಿ ನ್ಯಾಯಾಧೀಶರು, ಅಧ್ಯಕ್ಷರ ಸ್ಥಾನಗಳು ಖಾಲಿ ಇವೆ. ಆದರೆ ಕೇಂದ್ರ ಸರ್ಕಾರ ಈ ಸ್ಥಾನಗಳನ್ನು ಭರ್ತಿ ಮಾಡಲು ವಿಫಲವಾಗಿದೆ’ ಎಂದು ಹಿರಿಯ ಕಾಂಗ್ರೆಸ್‌ ನಾಯಕ ಪಿ. ಚಿದಂಬರಂ ಆರೋಪಿಸಿದ್ದಾರೆ.

ನವದೆಹಲಿ: ದೇಶದ ಹಲವು ಹೈಕೋರ್ಟ್‌ ಮತ್ತು ನ್ಯಾಯಮಂಡಳಿಗಳಲ್ಲಿ ನ್ಯಾಯಾಧೀಶರು, ಅಧ್ಯಕ್ಷರ ಸ್ಥಾನಗಳು ಖಾಲಿ ಇವೆ. ಆದರೆ ಕೇಂದ್ರ ಸರ್ಕಾರ ಈ ಸ್ಥಾನಗಳನ್ನು ಭರ್ತಿ ಮಾಡಲು ವಿಫಲವಾಗಿದೆ’ ಎಂದು ಹಿರಿಯ ಕಾಂಗ್ರೆಸ್‌ ನಾಯಕ ಪಿ. ಚಿದಂಬರಂ ಆರೋಪಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ‘ಹೈಕೋರ್ಟ್‌ಗಳಿಗೆ ಮಂಜೂರಾಗಿರುವ 1,080 ನ್ಯಾಯಮೂರ್ತಿ ಹುದ್ದೆಗಳ ಪೈಕಿ 416 ಖಾಲಿಯಿವೆ.ಡಿಆರ್‌ಟಿ, ಎನ್‌ಸಿಎಲ್‌ಎಟಿ, ಟಿಡಿಎಸ್‌ಎಟಿ ಸೇರಿದಂತೆ ಹಲವು ನ್ಯಾಯಮಂಡಳಿಗಳಲ್ಲಿ ಅಧ್ಯಕ್ಷರ ಸ್ಥಾನಗಳೂ ಖಾಲಿಯಿವೆ’ ಎಂದು  ಅವರು ಹೇಳಿದ್ದಾರೆ. ‘ಏಳು ವರ್ಷಗಳಿಂದ ಮೋದಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದೆ. ಆದರೂ ಈ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ’ ಎಂದು ದೂರಿದ್ದಾರೆ.

ನಮ್ಮ ದೇಶದಲ್ಲಿ ಈ ಸ್ಥಾನಗಳಿಗೆ ಬೇಕಾಗಿರುವ ಅರ್ಹ ವಕೀಲರು ಮತ್ತು ನ್ಯಾಯಧೀಶರ ಕೊರತೆಗಳಿಲ್ಲ. ಆದರೆ ಕೇಂದ್ರ ಸರ್ಕಾರವು ತನ್ನ ಸಿದ್ಧಾಂತಗಳ ಬಗ್ಗೆ ಸಹಾನುಭೂತಿ ಹೊಂದಿರುವ ಜನರನ್ನು ಈ ಹುದ್ದೆಗಳಿಗಾಗಿ ಹುಡುಕುತ್ತಿದೆ. ಹಾಗಾಗಿ ಈ ಸ್ಥಾನಗಳು ಖಾಲಿಯಾಗಿಯೇ ಉಳಿದಿವೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT