ಸಂಗ್ರಹ ಚಿತ್ರ 
ದೇಶ

ಕೋವಿಡ್ ವಿರುದ್ಧ ಹೋರಾಡಲು ಭಾರತಕ್ಕೆ ಮತ್ತಷ್ಟು ಬಲ: ಜಾನ್ಸನ್​ ಆ್ಯಂಡ್​ ಜಾನ್ಸನ್​ ಸಿಂಗಲ್ ಡೋಸ್ ಲಸಿಕೆ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ

ಕೋವಿಡ್ ವಿರುದ್ಧ ಹೋರಾಡಲು ಅಮೆರಿಕಾ ಮೂಲದ ಜಾನ್ಸನ್​ ಆ್ಯಂಡ್​ ಜಾನ್ಸನ್ ಕಂಪನಿ ಅಭಿವೃದ್ಧಿಪಡಿಸಿರುವ ಸಿಂಗಲ್ ಡೋಸ್ ಕೋವಿಡ್ ಲಸಿಕೆ ತುರ್ತು ಬಳಕೆಗೆ ಭಾರತ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಶನಿವಾರ ತಿಳಿದುಬಂದಿದೆ. 

ನವದೆಹಲಿ: ಕೋವಿಡ್ ವಿರುದ್ಧ ಹೋರಾಡಲು ಅಮೆರಿಕಾ ಮೂಲದ ಜಾನ್ಸನ್ ಅಂಡ್ ಜಾನ್ಸನ್ ಕಂಪನಿ ಅಭಿವೃದ್ಧಿಪಡಿಸಿರುವ ಸಿಂಗಲ್ ಡೋಸ್ ಕೋವಿಡ್ ಲಸಿಕೆ ತುರ್ತು ಬಳಕೆಗೆ ಭಾರತ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಶನಿವಾರ ತಿಳಿದುಬಂದಿದೆ. 

ಈ ಕುರಿತು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, 'ಭಾರತದಲ್ಲಿ ಜಾನ್ಸನ್​ ಆ್ಯಂಡ್​ ಜಾನ್ಸನ್ ಸಿಂಗಲ್ ಡೋಸ್ ಕೋವಿಡ್ 19 ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡಲಾಗಿದೆ. ಇದರೊಂದಿಗೆ ಭಾರತ ಈಗ ಐದು ಇಯುಎ ಲಸಿಕೆಗಳನ್ನು ಹೊಂದಿದಂತಾಗಿದೆ. ಇದು ಕೋವಿಡ್ ವಿರುದ್ಧದ ಭಾರತದ ಸಮಗ್ರ ಹೋರಾಟಕ್ಕೆ ಮತ್ತಷ್ಟು ಶಕ್ತಿ ತುಂಬಲಿದೆ' ಎಂದು ಹೇಳಿದ್ದಾರೆ.

ಜಾನ್ಸನ್​ ಆ್ಯಂಡ್​ ಜಾನ್ಸನ್ ಸಂಸ್ಥೆಯು ತನ್ನ ಕೊರೊನಾ ವೈರಸ್ ಲಸಿಕೆಯ ತುರ್ತು ಬಳಕೆ ಅನುಮೋದನೆ (ಇಯುಎ) ಕೋರಿ ಮನವಿ ಮಾಡಿತ್ತು. ಅದಕ್ಕೆ ಶನಿವಾರ ಒಪ್ಪಿಗೆ ದೊರಕಿದೆ.

ಆಗಸ್ಟ್ 5ರಂದು ಜಾನ್ಸನ್​ ಆ್ಯಂಡ್​ ಜಾನ್ಸನ್ ಇಯುಎಗೆ ಅರ್ಜಿ ಸಲ್ಲಿಸಿತ್ತು. ಭಾರತದಲ್ಲಿ ಬಯಾಲಾಜಿಕಲ್ ಇ ಕಂಪನಿಯೊಂದಿಗೆ ಸೇರಿ ಲಸಿಕೆಗಳನ್ನು ಕಂಪನಿ ಉತ್ಪಾದಿಸಲಿದೆ. ಈ ಲಸಿಕೆಯು ಒಂದೇ ಡೋಸ್ ಹೊಂದಿದ್ದು, ಶೇ 85ರಷ್ಟು ಪರಿಣಾಮಕಾರಿ ಎಂಬ ಫಲಿತಾಂಶ ನೀಡಿದೆ ಎಂದು ಕಂಪನಿ ತಿಳಿಸಿತ್ತು.

ಭಾರತವು ಈವರೆಗೂ ಕೋವಿಶೀಲ್ಡ್, ಕೋವ್ಯಾಕ್ಸಿನ್, ಸ್ಪುಟ್ನಿಕ್ ಹಾಗೂ ಮಾಡೆರ್ನಾ ಲಸಿಕೆಗಳ ತುರ್ತು ಬಳಕೆಗೆ ಅನುಮೋದನೆ ನೀಡಿದೆ. ಈ ಪಟ್ಟಿಗೆ ಇದೀಗ ಜಾನ್ಸನ್​ ಆ್ಯಂಡ್​ ಜಾನ್ಸನ್ ಲಸಿಕೆ ಕೂಡ ಹೊಸದಾಗಿ ಸೇರ್ಪಡೆಗೊಂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT