ಸಂಸತ್ 
ದೇಶ

ರಾಜ್ಯಸಭೆಯ ಉತ್ಪಾದಕತೆ ಮೂರನೇ ವಾರದಲ್ಲಿ ಏರಿಕೆ

ಸಂಸತ್ ಮುಂಗಾರು ಅಧಿವೇಶನದ ರಾಜ್ಯಸಭೆಯ ಕಲಾಪ ಪ್ರತಿಪಕ್ಷಗಳ ನಿರಂತರ ಪ್ರತಿಭಟನೆಯ ಪರಿಣಾಮ ಮೊದಲ ಎರಡು ವಾರಗಳಲ್ಲಿ ಪೋಲಾಗಿತ್ತು. 

ನವದೆಹಲಿ: ಸಂಸತ್ ಮುಂಗಾರು ಅಧಿವೇಶನದ ರಾಜ್ಯಸಭೆಯ ಕಲಾಪ ಪ್ರತಿಪಕ್ಷಗಳ ನಿರಂತರ ಪ್ರತಿಭಟನೆಯ ಪರಿಣಾಮ ಮೊದಲ ಎರಡು ವಾರಗಳಲ್ಲಿ ಪೋಲಾಗಿತ್ತು. ಆದರೆ ಮೂರನೇ ವಾರದಲ್ಲಿ ಉತ್ಪಾದಕತೆ ಹೆಚ್ಚಿದೆ. ರಾಜ್ಯಸಭೆ ಕಲಾಪದ ಉತ್ಪಾದಕತೆ ಮೂರನೇ ವಾರದಲ್ಲಿ ಶೇ.24.2 ರಷ್ಟು ಏರಿಕೆ ಕಂಡಿದೆ. 

ರಾಜ್ಯಸಭೆ ಕಾರ್ಯದರ್ಶಿಗಳು ತಿಳಿಸಿರುವ ಮಾಹಿತಿಯ ಪ್ರಕಾರ ಮೂರನೇ ವಾರದಲ್ಲಿ 8 ಮಸೂದೆಗಳು ಅಂಗೀಕಾರಗೊಂಡಿದ್ದು. 17 ರಾಜಕೀಯ ಪಕ್ಷಗಳ 68 ರಾಜ್ಯಸಭೆ ಸದಸ್ಯರು ಈ 8 ಮಸೂದೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ

ಜು.19 ರಿಂದ ಈ ವರೆಗೂ, ಪ್ರತಿಭಟನೆಯ ಪರಿಣಾಮ 60 ಗಂಟೆಗಳ ಅವಧಿಯಲ್ಲಿ 78 ಗಂಟೆಗಳ ಅವಧಿ ಪೋಲಾಗಿದೆ. 197 ಶೂನ್ಯವೇಳೆ ಅವಧಿ ಹಾಗೂ 153 ವಿಶೇಷ ಅವಧಿಗಳು ಪೋಲಾಗಿವೆ. 

ಪೆಗಾಸಸ್ ಗೂಢಚರ್ಯೆ ಹಗರಣ ಹಾಗೂ ಕೃಷಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚೆಗೆ ಆಗ್ರಹಿಸಿ ಪ್ರತಿಪಕ್ಷಗಳು ನಿರಂತರ ಪ್ರತಿಭಟನೆ ನಡೆಸುತ್ತಿದ್ದರ ಪರಿಣಾಮ ಅಧಿವೇಶನದ ಪ್ರಾರಂಭದಿಂದಲೂ ಸಂಸತ್ ನ ಉಭಯ ಸದನಗಳ ಕಲಾಪಗಳೂ ವ್ಯರ್ಥವಾಗುತ್ತಿದೆ. 

ಪ್ರತಿಪಕ್ಷಗಳ ನಡೆಯನ್ನು ತೀವ್ರವಾಗಿ ಟೀಕಿಸಿದ್ದ ಪ್ರಧಾನಿ ಮೋದಿ, ಪ್ರತಿಪಕ್ಷಗಳ ನಡೆ ಪ್ರಜಾಪ್ರಭುತ್ವ, ಸಂವಿಧಾನಕ್ಕೆ ಅವಮಾನ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

12 ಸಾವಿರ ವರ್ಷಗಳಲ್ಲೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

SCROLL FOR NEXT