ಸಾಂದರ್ಭಿಕ ಚಿತ್ರ 
ದೇಶ

ಭೀಕರ ಅಪಘಾತ: ಟ್ರಕ್ ಗೆ ಕಾರು ಢಿಕ್ಕಿ, 5 ಸಾವು, ಮೂವರಿಗೆ ಗಂಭೀರ ಗಾಯ

ರಾಜಸ್ಥಾನದಲ್ಲಿ ಶನಿವಾರ ಮಧ್ಯರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ರಕ್ ಮತ್ತು ಕಾರಿನ ನಡುವೆ ಸಂಭವಿಸಿದ ಢಿಕ್ಕಿಯಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಜೈಪುರ: ರಾಜಸ್ಥಾನದಲ್ಲಿ ಶನಿವಾರ ಮಧ್ಯರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ರಕ್ ಮತ್ತು ಕಾರಿನ ನಡುವೆ ಸಂಭವಿಸಿದ ಢಿಕ್ಕಿಯಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಾಜಸ್ಥಾನದ ನಗೌರ್ ನ ಕುಚಮಮ್ ಸಿಟಿ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಕಾರು ಟ್ರಕ್ ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದವರ ಪೈಕಿ 5ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತೀವ್ರವಾಗಿ ಗಾಯಗೊಂಡ ಇತರೆ ಮೂವರನ್ನು ಆ್ಯಂಬುಲೆನ್ಸ್ ನಲ್ಲಿ ಜೈಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂತಾಪ ಸೂಚಿಸಿದ ಸಿಎಂ ಗೆಹ್ಲೋಟ್
ಇದೇ ವೇಳೆ ಅಪಘಾತಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ. 'ನಾಗೌರ್ ನ ಕುಚಮಾನ್ ಸಿಟಿ ಪ್ರದೇಶದಲ್ಲಿ ನಡೆದ ರಸ್ತೆ ಅಪಘಾತದಲ್ಲಿ 5 ಜನರ ಸಾವು ಅತ್ಯಂತ ದುಃಖಕರವಾಗಿದೆ. ದುಃಖಿತ ಕುಟುಂಬಕ್ಕೆ ನನ್ನ ಸಂತಾಪ ಸೂಚಿಸುತ್ತೇನೆ. ಈ ಕಷ್ಟದ ಸಮಯದಲ್ಲಿ ದೇವರು ಅವರಿಗೆ ಶಕ್ತಿಯನ್ನು ನೀಡಲಿ ಮತ್ತು ಅಗಲಿದವರ ಆತ್ಮಕ್ಕೆ ಶಾಂತಿ ಸಿಗಲಿ. ಗಾಯಾಳುಗಳು ಶೀಘ್ರ ಗುಣಮುಖರಾಗಲು ಪ್ರಾರ್ಥಿಸಿಕೊಳ್ಳುತೇನೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಎಲ್ಲರ ಹುಬ್ಬೇರಿಸಿದ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT