ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಮತ್ತು ಪ್ರಧಾನಿ ನರೇಂದ್ರ ಮೋದಿ 
ದೇಶ

ಪ್ರಧಾನಿ ಭೇಟಿಯಾದ ಅಸ್ಸಾಂ ಮುಖ್ಯಮಂತ್ರಿ: ಮಿಜೋರಾಂ ಗಡಿ ಸಮಸ್ಯೆ ಕುರಿತು ಚರ್ಚೆ

ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಅಸ್ಸಾಂ- ಮಿಜೋರಾಂ ಗಡಿ ಸಮಸ್ಯೆ ಕುರಿತಂತೆ ಚರ್ಚಿಸಿದರು.

ನವದೆಹಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಅಸ್ಸಾಂ- ಮಿಜೋರಾಂ ಗಡಿ ಸಮಸ್ಯೆ ಕುರಿತಂತೆ ಚರ್ಚಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಹಿಮಾಂತ ಬಿಸ್ವಾ ಶರ್ಮಾ ಅವರನ್ನು ನವದೆಹಲಿಗೆ ಕರೆದಿರುವುದಾಗಿ ಪ್ರಧಾನ ಮಂತ್ರಿಗಳ ಕಾರ್ಯಾಲಯ ಟ್ವೀಟ್ ಮಾಡಿತ್ತು.

ಇದಕ್ಕೂ ಮುನ್ನ, ಅಸ್ಸಾಂ ಬಿಜೆಪಿ ಸಂಸದರ ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಹಿಮಾಂತ ಬಿಸ್ವಾ ಶರ್ಮಾ ಭೇಟಿ ಮಾಡಿ, ನೆರೆಯ ರಾಜ್ಯ ಮಿಜೋರಾಂ ನಡುವಣ ಗಡಿ ವಿವಾದ ಕುರಿತಂತೆ   ಚರ್ಚೆ ನಡೆಸಿದರು.

ಜುಲೈ 26 ರಂದು ಉಭಯ ರಾಜ್ಯಗಳ ನಡುವಿನ ಗಡಿ ವಿಚಾರಕ್ಕೆ ಬಂಧಿಸಿದಂತೆ ಅಸ್ಸಾಂ ಮತ್ತು ಮಿಜೋರಾಂ ರಾಜ್ಯಗಳ ಪೊಲೀಸರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಅಸ್ಸಾಂನ ಆರು ಪೊಲೀಸರು ಹಾಗೂ ಓರ್ವ ನಾಗರಿಕ ಮೃತಪಟ್ಟಿದ್ದರು. ಈ ಘಟನೆಯಲ್ಲಿ ಕನಿಷ್ಠ  50 ಮಂದಿ ಗಾಯಗೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT