ಕೃಷಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆ 
ದೇಶ

ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಕೃಷಿ ಕಾನೂನುಗಳನ್ನು ಹಿಂಪಡೆಯುವ ಸಾಧ್ಯತೆ ಇದೆ: ಬಿಜೆಪಿ ನಾಯಕ 

 ಬಿಜೆಪಿ ನಾಯಕರೊಬ್ಬರು ಅಚ್ಚರಿಯ ರೀತಿಯಲ್ಲಿ ಕೇಂದ್ರ ಸರ್ಕಾರದ ಮೂರು ಪ್ರಮುಖ ಕೃಷಿ ಮಸೂದೆಗಳ ವಿರುದ್ಧದ ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. 

ನವದೆಹಲಿ: ಬಿಜೆಪಿ ನಾಯಕರೊಬ್ಬರು ಅಚ್ಚರಿಯ ರೀತಿಯಲ್ಲಿ ಕೇಂದ್ರ ಸರ್ಕಾರದ ಮೂರು ಪ್ರಮುಖ ಕೃಷಿ ಮಸೂದೆಗಳ ವಿರುದ್ಧದ ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. 

"ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಸನಿಹದಲ್ಲಿದ್ದು, ಇದಕ್ಕೂ ಮುನ್ನ ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಸಾಧ್ಯತೆ ಇದೆ" ಎಂದು ಉತ್ತರ ಪ್ರದೇಶ ಬಿಜೆಪಿ ಕಾರ್ಯಸಮಿತಿಯ ಸದಸ್ಯ ರಾಮ್ ಇಕ್ಬಾಲ್ ಸಿಂಗ್ ಹೇಳಿದ್ದಾರೆ. 

ರೈತರ ಬೇಡಿಕೆಗಳು ಸರಿಯಾಗಿವೆ. ವಿಧಾನಸಭಾ ಚುನಾವಣೆ ಹಾಗೂ ರೈತರ ಆಕ್ರೋಶಗಳನ್ನು ಗಮನದಲ್ಲಿಟ್ಟುಕೊಂಡು, ಮೋದಿ ಸರ್ಕಾರ ಹೊಸ ಕೃಷಿ ಕಾಯ್ದೆಗಳನ್ನು ಹಿಂಪಡೆಯಬಹುದು ಎಂದು ರಾಮ್ ಇಕ್ಬಾಲ್ ಸಿಂಗ್ ಹೇಳಿದ್ದಾರೆ. 

ಕೃಷಿ ಕಾಯ್ದೆಗಳ ವಿರುದ್ಧದ ಪ್ರತಿಭಟನೆಯಿಂದಾಗಿ ಇಬ್ಜೆಪಿ ನಾಯಕರು ಪಶ್ಚಿಮ ಉತ್ತರ ಪ್ರದೇಶದ ಗ್ರಾಮಗಳಿಗೆ ಭೇಟಿ ನೀಡಲು ಸಾಧ್ಯವಾಗಿರಲಿಲ್ಲ. ರೈತರು ಅವರನ್ನು ಮುಂದಿನ ದಿನಗಳಲ್ಲಿ ಘೇರಾವ್ ಹಾಕಬಹುದು ಎಂದೂ ರಾಮ್ ಇಕ್ಬಾಲ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. 

ಇದೇ ವೇಳೆ ಪೆಗಾಸಸ್ ಗೂಢಚರ್ಯೆ ವಿಷಯವಾಗಿ ಸಂಸತ್ ನಲ್ಲಿ ಚರ್ಚೆಗೆ ಆಗ್ರಹಿಸಿರುವ ಪ್ರತಿಪಕ್ಷಗಳ ಬೇಡಿಕೆಯನ್ನೂ ಸಮರ್ಥಿಸಿಕೊಂಡಿರುವ ರಾಮ್ ಇಕ್ಬಾಲ್ ಸಿಂಗ್, ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರತಿಪಕ್ಷಗಳ ಬೇಡಿಕೆಗಳನ್ನು ಪರಿಗಣಿಸಬೇಕಾಗುತ್ತದೆ ಎಂದಿದ್ದಾರೆ. 

"ಪ್ರತಿಪಕ್ಷಗಳು ತನಿಖೆಗೆ ಆಗ್ರಹಿಸಿದರೆ, ಸರ್ಕಾರ ಅದಕ್ಕೆ ಒಪ್ಪಿಕೊಳ್ಳಬೇಕಾಗುತ್ತದೆ. ಸಂಸತ್ ಸುಗಮವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ" ಎಂದೂ ರಾಮ್ ಇಕ್ಬಾಲ್ ಸಿಂಗ್ ಹೇಳಿದ್ದಾರೆ. 

ಇದೇ ವೇಳೆ ಕೋವಿಡ್-19 ನ ಮೂರನೆ ಅಲೆ ಎದುರಿಸುವುದರ ಬಗ್ಗೆಯೂ ಮಾತನಾಡಿರುವ ಅವರು, ಎರಡನೇ ಅಲೆಯಿಂದ ಸರ್ಕಾರ ಕಲಿಯಲಿಲ್ಲ, ತಿಂಗಳಾಂತ್ಯಕ್ಕೆ ಎದುರಾಗಲಿರುವ ಮೂರನೇ ಅಲೆಗೆ ಪರಿಣಾಮಕಾರಿಯಾದ ವ್ಯವಸ್ಥೆ ಮಾಡಲಾಗಿಲ್ಲ ಎಂದು ಬಿಜೆಪಿ ನಾಯಕ ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel