ಪ್ರಧಾನಿ ಮೋದಿ 
ದೇಶ

ರಾಜ್ಯಸಭೆಯಲ್ಲಿ ಮತದಾನದ ವೇಳೆ ಗೈರಾಗಿದ್ದ ಬಿಜೆಪಿ ಸಂಸದರ ಪಟ್ಟಿ ಕೇಳಿದ ಪ್ರಧಾನಿ ಮೋದಿ!

ರಾಜ್ಯಸಭೆಯ ಆ.09 ರ ಕಲಾಪದಲ್ಲಿ ವಿಪಕ್ಷಗಳು ಮಂಡಿಸಿದ ನಿರ್ಣಯದ ಮೇಲಿನ ಮತದಾನದ ವೇಳೆ ಗೈರಾಗಿದ್ದ ಬಿಜೆಪಿ ಸಂಸದರ ಹೆಸರಿನ ಪಟ್ಟಿ ನೀಡುವಂತೆ  ಪ್ರಧಾನಿ ಮೋದಿ ಸೂಚಿಸಿದ್ದಾರೆ. 

ನವದೆಹಲಿ: ರಾಜ್ಯಸಭೆಯ ಆ.09 ರ ಕಲಾಪದಲ್ಲಿ ವಿಪಕ್ಷಗಳು ಮಂಡಿಸಿದ ನಿರ್ಣಯದ ಮೇಲಿನ ಮತದಾನದ ವೇಳೆ ಗೈರಾಗಿದ್ದ ಬಿಜೆಪಿ ಸಂಸದರ ಹೆಸರಿನ ಪಟ್ಟಿ ನೀಡುವಂತೆ  ಪ್ರಧಾನಿ ಮೋದಿ ಸೂಚಿಸಿದ್ದಾರೆ. 

ಆ.09 ರ ಕಲಾಪದಲ್ಲಿ ವಿಪಕ್ಷಗಳ ಸದಸ್ಯರು statutory resolution ನಿರ್ಣಯ ಮಂಡಿಸಿದ್ದವು. ಈ ನಿರ್ಣಯದ ಪ್ರಕಾರ ನ್ಯಾಯಮಂಡಳಿ ಸುಧಾರಣಾ ವಿಧೇಯಕವನ್ನು ಆಯ್ಕೆ ಸಮಿತಿಗೆ ಕಳಿಸುವುದಕ್ಕೆ ಆಗ್ರಹಿಸಲಾಗಿತ್ತು. ಆದರೆ ವಿಪಕ್ಷಗಳ ನಿರ್ಣಯ ವಿಫಲವಾಯಿತು. 

ಆ.10 ರಂದು ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಅವರಿಗೆ ಆ.09 ರ ಕಲಾಪದಲ್ಲಿ ವಿಪಕ್ಷಗಳು ಮಂಡಿಸಿದ ನಿರ್ಣಯದ ಮೇಲಿನ ಮತದಾನದ ವೇಳೆ ಗೈರಾಗಿದ್ದ ಬಿಜೆಪಿ ಸಂಸದರ ಹೆಸರಿನ ಪಟ್ಟಿ ನೀಡುವಂತೆ ಸೂಚಿಸಿದ್ದಾರೆ. ಸಂಸದೀಯ ಮಂಡಳಿ ಸಭೆಯಲ್ಲಿ ಒಲಂಪಿಕ್ ಪದಕ ವಿಜೇತರಿಗೆ ಎದ್ದು ನಿಂತು ಕರತಾಡನ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು.

ಇದೇ ವೇಳೆ ಕ್ರೀಡೆಯನ್ನು ಉತ್ತೇಜಿಸಲು ಸಂಸತ್ ಸದಸ್ಯರಿಗೆ ಸೂಚನೆ ನೀಡಿರುವ ಪ್ರಧಾನಿ ಮೋದಿ, ತಮ್ಮ ಕ್ಷೇತ್ರಗಳಲ್ಲಿನ ಜನತೆಯಲ್ಲಿ ಕ್ರೀಡೆಯನ್ನು ಉತ್ತೇಜಿಸಲು ಹಾಗೂ ಪೋಷಣ ಅಭಿಯಾನ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಉತ್ತೇಜಿಸುವುದಕ್ಕೆ ಸಂಸದರಿಗೆ ಸೂಚನೆ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT