ಪ್ರಧಾನಿ ಮೋದಿ 
ದೇಶ

ರಾಜ್ಯಸಭೆಯಲ್ಲಿ ಮತದಾನದ ವೇಳೆ ಗೈರಾಗಿದ್ದ ಬಿಜೆಪಿ ಸಂಸದರ ಪಟ್ಟಿ ಕೇಳಿದ ಪ್ರಧಾನಿ ಮೋದಿ!

ರಾಜ್ಯಸಭೆಯ ಆ.09 ರ ಕಲಾಪದಲ್ಲಿ ವಿಪಕ್ಷಗಳು ಮಂಡಿಸಿದ ನಿರ್ಣಯದ ಮೇಲಿನ ಮತದಾನದ ವೇಳೆ ಗೈರಾಗಿದ್ದ ಬಿಜೆಪಿ ಸಂಸದರ ಹೆಸರಿನ ಪಟ್ಟಿ ನೀಡುವಂತೆ  ಪ್ರಧಾನಿ ಮೋದಿ ಸೂಚಿಸಿದ್ದಾರೆ. 

ನವದೆಹಲಿ: ರಾಜ್ಯಸಭೆಯ ಆ.09 ರ ಕಲಾಪದಲ್ಲಿ ವಿಪಕ್ಷಗಳು ಮಂಡಿಸಿದ ನಿರ್ಣಯದ ಮೇಲಿನ ಮತದಾನದ ವೇಳೆ ಗೈರಾಗಿದ್ದ ಬಿಜೆಪಿ ಸಂಸದರ ಹೆಸರಿನ ಪಟ್ಟಿ ನೀಡುವಂತೆ  ಪ್ರಧಾನಿ ಮೋದಿ ಸೂಚಿಸಿದ್ದಾರೆ. 

ಆ.09 ರ ಕಲಾಪದಲ್ಲಿ ವಿಪಕ್ಷಗಳ ಸದಸ್ಯರು statutory resolution ನಿರ್ಣಯ ಮಂಡಿಸಿದ್ದವು. ಈ ನಿರ್ಣಯದ ಪ್ರಕಾರ ನ್ಯಾಯಮಂಡಳಿ ಸುಧಾರಣಾ ವಿಧೇಯಕವನ್ನು ಆಯ್ಕೆ ಸಮಿತಿಗೆ ಕಳಿಸುವುದಕ್ಕೆ ಆಗ್ರಹಿಸಲಾಗಿತ್ತು. ಆದರೆ ವಿಪಕ್ಷಗಳ ನಿರ್ಣಯ ವಿಫಲವಾಯಿತು. 

ಆ.10 ರಂದು ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಅವರಿಗೆ ಆ.09 ರ ಕಲಾಪದಲ್ಲಿ ವಿಪಕ್ಷಗಳು ಮಂಡಿಸಿದ ನಿರ್ಣಯದ ಮೇಲಿನ ಮತದಾನದ ವೇಳೆ ಗೈರಾಗಿದ್ದ ಬಿಜೆಪಿ ಸಂಸದರ ಹೆಸರಿನ ಪಟ್ಟಿ ನೀಡುವಂತೆ ಸೂಚಿಸಿದ್ದಾರೆ. ಸಂಸದೀಯ ಮಂಡಳಿ ಸಭೆಯಲ್ಲಿ ಒಲಂಪಿಕ್ ಪದಕ ವಿಜೇತರಿಗೆ ಎದ್ದು ನಿಂತು ಕರತಾಡನ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು.

ಇದೇ ವೇಳೆ ಕ್ರೀಡೆಯನ್ನು ಉತ್ತೇಜಿಸಲು ಸಂಸತ್ ಸದಸ್ಯರಿಗೆ ಸೂಚನೆ ನೀಡಿರುವ ಪ್ರಧಾನಿ ಮೋದಿ, ತಮ್ಮ ಕ್ಷೇತ್ರಗಳಲ್ಲಿನ ಜನತೆಯಲ್ಲಿ ಕ್ರೀಡೆಯನ್ನು ಉತ್ತೇಜಿಸಲು ಹಾಗೂ ಪೋಷಣ ಅಭಿಯಾನ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಉತ್ತೇಜಿಸುವುದಕ್ಕೆ ಸಂಸದರಿಗೆ ಸೂಚನೆ ನೀಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT