ತಮ್ಮ ಜಾಗವನ್ನು ವಾಪಸ್ ಪಡೆದ ಪ್ರದೇಶದಲ್ಲಿ ಭೂಮಿಪೂಜೆ ನಡೆಸುತ್ತಿರುವ ಕಾಶ್ಮೀರಿ ಪಂಡಿತರು 
ದೇಶ

ಕಾಶ್ಮೀರಿ ಪಂಡಿತರಿಗೆ ಸೇರಿದ್ದ 9 ಆಸ್ತಿಗಳು ಮಾಲಿಕರಿಗೆ ಹಸ್ತಾಂತರ

ಭಯೋತ್ಪಾದಕರ ದಾಳಿಯಿಂದ ಬೇರೆಡೆಗೆ ವಲಸೆ ಹೋಗಿದ್ದ ಕಾಶ್ಮೀರ  ಪಂಡಿತರಿಗೆ ಸೇರಿದ್ದ 9 ಆಸ್ತಿಗಳನ್ನು ಮೂಲ ಮಾಲಿಕರಿಗೆ ಹಸ್ತಾಂತರ ಮಾಡಲಾಗಿದೆ. 

ಶ್ರೀನಗರ: ಭಯೋತ್ಪಾದಕರ ದಾಳಿಯಿಂದ ಬೇರೆಡೆಗೆ ವಲಸೆ ಹೋಗಿದ್ದ ಕಾಶ್ಮೀರ ಪಂಡಿತರಿಗೆ ಸೇರಿದ್ದ 9 ಆಸ್ತಿಗಳನ್ನು ಮೂಲ ಮಾಲಿಕರಿಗೆ ಹಸ್ತಾಂತರ ಮಾಡಲಾಗಿದೆ. 
 
ಕಾಶ್ಮೀರದಿಂದ ವಲಸೆ ತೆರಳಿದ್ದ ಹಿಂದೂಗಳನ್ನು ಮರಳಿ ಅವರ ತವರು ಪ್ರದೇಶಕ್ಕೆ ಕರೆತರಲು ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ರಾಜ್ಯಸಭೆಗೆ ಮಾಹಿತಿ ನೀಡಲಾಗಿದೆ. 

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಈ ಮಾಹಿತಿ ನೀಡಿದ್ದು, ಜಮ್ಮು-ಕಾಶ್ಮೀರ ವಲಸೆ ಸ್ಥಿರ ಆಸ್ತಿ (ಸಂರಕ್ಷಣೆ, ಸಂಕಷ್ಟದ ಮಾರಾಟದಿಂದ ರಕ್ಷಣೆ ಹಾಗೂ ನಿರ್ಬಂಧ) ಕಾಯ್ದೆ 1997, ಅಡಿಯಲ್ಲಿ ಜಮ್ಮು-ಕಾಶ್ಮೀರದ ಜಿಲ್ಲೆಗಳಲ್ಲಿನ ಜಿಲ್ಲಾ ಮ್ಯಾಜಿಸ್ಟ್ರೇಟ್ ಗಳು ವಲಸಿಗರ ಸ್ಥಿರಾಸ್ತಿಗೆ ಕಾನೂನಾತ್ಮಕವಾಗಿ ಪಾಲಕರಾಗಿದ್ದು, ಒತ್ತುವರಿ, ತೆರವು ಕಾರ್ಯಾಚರಣೆಯಲ್ಲಿ ಸ್ವಯಂ ಪ್ರೇರಿತರಾಗಿ ಕ್ರಮ ಕೈಗೊಳ್ಳಲಿದ್ದಾರೆ. ಇಂತಹ ಪ್ರಕರನಗಳಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಗಳನ್ನು ವಲಸೆ ಹೋದಿದ್ದವರು ಸಂಪರ್ಕಿಸಬಹುದಾಗಿದೆ. 

ಮೂಲ ಮಾಲಿಕರಿಗೆ ಇಂತಹ 9 ಆಸ್ತಿಗಳನ್ನು ವಾಪಸ್ ನೀಡಲಾಗಿದೆ ಎಂದು ಜಮ್ಮು-ಕಾಶ್ಮೀರ ಸರ್ಕಾರದ ಮಾಹಿತಿಯನ್ನು ಆಧರಿಸಿ ಕೇಂದ್ರ ಸರ್ಕಾರ ರಾಜ್ಯಸಭೆಗೆ ತಿಳಿಸಿದೆ. ಆರ್ಟಿಕಲ್ 370 ರದ್ದು ನಂತರ ಈ ವರೆಗೂ 520 ವಲಸಿಗರು ತಮ್ಮ ತವರಿಗೆ ವಾಪಸ್ಸಾಗಿದ್ದು ಪ್ರಧಾನ ಮಂತ್ರಿ ಅಭಿವೃದ್ಧಿ ಪ್ಯಾಕೇಜ್-2015 ರ ಅಡಿಯಲ್ಲಿ ನೌಕರಿ ಪಡೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT