ತಮ್ಮ ಜಾಗವನ್ನು ವಾಪಸ್ ಪಡೆದ ಪ್ರದೇಶದಲ್ಲಿ ಭೂಮಿಪೂಜೆ ನಡೆಸುತ್ತಿರುವ ಕಾಶ್ಮೀರಿ ಪಂಡಿತರು 
ದೇಶ

ಕಾಶ್ಮೀರಿ ಪಂಡಿತರಿಗೆ ಸೇರಿದ್ದ 9 ಆಸ್ತಿಗಳು ಮಾಲಿಕರಿಗೆ ಹಸ್ತಾಂತರ

ಭಯೋತ್ಪಾದಕರ ದಾಳಿಯಿಂದ ಬೇರೆಡೆಗೆ ವಲಸೆ ಹೋಗಿದ್ದ ಕಾಶ್ಮೀರ  ಪಂಡಿತರಿಗೆ ಸೇರಿದ್ದ 9 ಆಸ್ತಿಗಳನ್ನು ಮೂಲ ಮಾಲಿಕರಿಗೆ ಹಸ್ತಾಂತರ ಮಾಡಲಾಗಿದೆ. 

ಶ್ರೀನಗರ: ಭಯೋತ್ಪಾದಕರ ದಾಳಿಯಿಂದ ಬೇರೆಡೆಗೆ ವಲಸೆ ಹೋಗಿದ್ದ ಕಾಶ್ಮೀರ ಪಂಡಿತರಿಗೆ ಸೇರಿದ್ದ 9 ಆಸ್ತಿಗಳನ್ನು ಮೂಲ ಮಾಲಿಕರಿಗೆ ಹಸ್ತಾಂತರ ಮಾಡಲಾಗಿದೆ. 
 
ಕಾಶ್ಮೀರದಿಂದ ವಲಸೆ ತೆರಳಿದ್ದ ಹಿಂದೂಗಳನ್ನು ಮರಳಿ ಅವರ ತವರು ಪ್ರದೇಶಕ್ಕೆ ಕರೆತರಲು ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ರಾಜ್ಯಸಭೆಗೆ ಮಾಹಿತಿ ನೀಡಲಾಗಿದೆ. 

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್ ಈ ಮಾಹಿತಿ ನೀಡಿದ್ದು, ಜಮ್ಮು-ಕಾಶ್ಮೀರ ವಲಸೆ ಸ್ಥಿರ ಆಸ್ತಿ (ಸಂರಕ್ಷಣೆ, ಸಂಕಷ್ಟದ ಮಾರಾಟದಿಂದ ರಕ್ಷಣೆ ಹಾಗೂ ನಿರ್ಬಂಧ) ಕಾಯ್ದೆ 1997, ಅಡಿಯಲ್ಲಿ ಜಮ್ಮು-ಕಾಶ್ಮೀರದ ಜಿಲ್ಲೆಗಳಲ್ಲಿನ ಜಿಲ್ಲಾ ಮ್ಯಾಜಿಸ್ಟ್ರೇಟ್ ಗಳು ವಲಸಿಗರ ಸ್ಥಿರಾಸ್ತಿಗೆ ಕಾನೂನಾತ್ಮಕವಾಗಿ ಪಾಲಕರಾಗಿದ್ದು, ಒತ್ತುವರಿ, ತೆರವು ಕಾರ್ಯಾಚರಣೆಯಲ್ಲಿ ಸ್ವಯಂ ಪ್ರೇರಿತರಾಗಿ ಕ್ರಮ ಕೈಗೊಳ್ಳಲಿದ್ದಾರೆ. ಇಂತಹ ಪ್ರಕರನಗಳಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಗಳನ್ನು ವಲಸೆ ಹೋದಿದ್ದವರು ಸಂಪರ್ಕಿಸಬಹುದಾಗಿದೆ. 

ಮೂಲ ಮಾಲಿಕರಿಗೆ ಇಂತಹ 9 ಆಸ್ತಿಗಳನ್ನು ವಾಪಸ್ ನೀಡಲಾಗಿದೆ ಎಂದು ಜಮ್ಮು-ಕಾಶ್ಮೀರ ಸರ್ಕಾರದ ಮಾಹಿತಿಯನ್ನು ಆಧರಿಸಿ ಕೇಂದ್ರ ಸರ್ಕಾರ ರಾಜ್ಯಸಭೆಗೆ ತಿಳಿಸಿದೆ. ಆರ್ಟಿಕಲ್ 370 ರದ್ದು ನಂತರ ಈ ವರೆಗೂ 520 ವಲಸಿಗರು ತಮ್ಮ ತವರಿಗೆ ವಾಪಸ್ಸಾಗಿದ್ದು ಪ್ರಧಾನ ಮಂತ್ರಿ ಅಭಿವೃದ್ಧಿ ಪ್ಯಾಕೇಜ್-2015 ರ ಅಡಿಯಲ್ಲಿ ನೌಕರಿ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT