ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ 
ದೇಶ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹೆಸರಲ್ಲಿ ಐಟಿ ಪ್ರಶಸ್ತಿ: ಮಹಾರಾಷ್ಟ್ರ ಸರ್ಕಾರ ಘೋಷಣೆ 

ದೇಶದ ಅತ್ಯುನ್ನತ ಕ್ರೀಡಾ ಪುರಸ್ಕಾರ ಖೇಲ್ ರತ್ನದ ಹೆಸರಿನಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹೆಸರನ್ನು ತೆಗೆದುಹಾಕಿದ ನಂತರ ಸಮಾಜಕ್ಕೆ ಸಹಾಯ ಮಾಡುವ ಮಾಹಿತಿ ತಂತ್ರಜ್ಞಾನ(ಐಟಿ) ಸಂಘಟನೆಗಳಿಗೆ ಸನ್ಮಾನ ಮಾಡುವ ಪ್ರಶಸ್ತಿಗೆ ಮಹಾರಾಷ್ಟ್ರ ಸರ್ಕಾರ ರಾಜೀವ್ ಗಾಂಧಿಯವರ ಹೆಸರನ್ನಿಟ್ಟಿದೆ.

ಮುಂಬೈ: ದೇಶದ ಅತ್ಯುನ್ನತ ಕ್ರೀಡಾ ಪುರಸ್ಕಾರ ಖೇಲ್ ರತ್ನದ ಹೆಸರಿನಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹೆಸರನ್ನು ತೆಗೆದುಹಾಕಿದ ನಂತರ ಸಮಾಜಕ್ಕೆ ಸಹಾಯ ಮಾಡುವ ಮಾಹಿತಿ ತಂತ್ರಜ್ಞಾನ(ಐಟಿ) ಸಂಘಟನೆಗಳಿಗೆ ಸನ್ಮಾನ ಮಾಡುವ ಪ್ರಶಸ್ತಿಗೆ ಮಹಾರಾಷ್ಟ್ರ ಸರ್ಕಾರ ರಾಜೀವ್ ಗಾಂಧಿಯವರ ಹೆಸರನ್ನಿಟ್ಟಿದೆ.

ಈ ಕುರಿತು ಸರ್ಕಾರದ ಆದೇಶ ಹೊರಬಿದ್ದಿದ್ದು 1984ರಿಂದ 1989ರವರೆಗೆ ದೇಶದ ಪ್ರಧಾನಿಯಾಗಿದ್ದ ರಾಜೀವ್ ಗಾಂಧಿಯವರು ಐಟಿ ಕ್ಷೇತ್ರಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದು, ಅವರ ಅವಧಿಯಲ್ಲಿಯೇ ದೇಶದ ಐಟಿ ಕ್ಷೇತ್ರ ಬೆಳವಣಿಗೆ ಕಂಡಿತ್ತು. ಅವರ ಕೊಡುಗೆಯನ್ನು ಸ್ಮರಿಸಿ ಸರ್ಕಾರ ರಾಜೀವ್ ಗಾಂಧಿ ಹೆಸರಿನಲ್ಲಿ ಪ್ರಶಸ್ತಿ ನೀಡಲಿದೆ ಎಂದು ಹೇಳಲಾಗಿದೆ.

ಇದೇ ತಿಂಗಳ 20ರಂದು ರಾಜೀವ್ ಗಾಂಧಿಯವರ ಜಯಂತಿಯಂದು ಪ್ರತಿವರ್ಷ ಈ ಪ್ರಶಸ್ತಿ ನೀಡಲಾಗುತ್ತದೆ, ಈ ವರ್ಷ ಅಕ್ಟೋಬರ್ 30ರೊಳಗೆ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಲಾಗುವುದು ಎಂದು ಸರ್ಕಾರದ ಆದೇಶ ಹೇಳಿದೆ.

ಮಹಾರಾಷ್ಟ್ರ ಸರ್ಕಾರದಲ್ಲಿ ಶಿವಸೇನೆ ಮತ್ತು ಎನ್ ಸಿಪಿಯ ಭಾಗವಾಗಿ ಕಾಂಗ್ರೆಸ್ ಕೂಡ ಇರುವುದು ಇಲ್ಲಿ ಮಹತ್ವದ್ದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT