ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ 
ದೇಶ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹೆಸರಲ್ಲಿ ಐಟಿ ಪ್ರಶಸ್ತಿ: ಮಹಾರಾಷ್ಟ್ರ ಸರ್ಕಾರ ಘೋಷಣೆ 

ದೇಶದ ಅತ್ಯುನ್ನತ ಕ್ರೀಡಾ ಪುರಸ್ಕಾರ ಖೇಲ್ ರತ್ನದ ಹೆಸರಿನಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹೆಸರನ್ನು ತೆಗೆದುಹಾಕಿದ ನಂತರ ಸಮಾಜಕ್ಕೆ ಸಹಾಯ ಮಾಡುವ ಮಾಹಿತಿ ತಂತ್ರಜ್ಞಾನ(ಐಟಿ) ಸಂಘಟನೆಗಳಿಗೆ ಸನ್ಮಾನ ಮಾಡುವ ಪ್ರಶಸ್ತಿಗೆ ಮಹಾರಾಷ್ಟ್ರ ಸರ್ಕಾರ ರಾಜೀವ್ ಗಾಂಧಿಯವರ ಹೆಸರನ್ನಿಟ್ಟಿದೆ.

ಮುಂಬೈ: ದೇಶದ ಅತ್ಯುನ್ನತ ಕ್ರೀಡಾ ಪುರಸ್ಕಾರ ಖೇಲ್ ರತ್ನದ ಹೆಸರಿನಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹೆಸರನ್ನು ತೆಗೆದುಹಾಕಿದ ನಂತರ ಸಮಾಜಕ್ಕೆ ಸಹಾಯ ಮಾಡುವ ಮಾಹಿತಿ ತಂತ್ರಜ್ಞಾನ(ಐಟಿ) ಸಂಘಟನೆಗಳಿಗೆ ಸನ್ಮಾನ ಮಾಡುವ ಪ್ರಶಸ್ತಿಗೆ ಮಹಾರಾಷ್ಟ್ರ ಸರ್ಕಾರ ರಾಜೀವ್ ಗಾಂಧಿಯವರ ಹೆಸರನ್ನಿಟ್ಟಿದೆ.

ಈ ಕುರಿತು ಸರ್ಕಾರದ ಆದೇಶ ಹೊರಬಿದ್ದಿದ್ದು 1984ರಿಂದ 1989ರವರೆಗೆ ದೇಶದ ಪ್ರಧಾನಿಯಾಗಿದ್ದ ರಾಜೀವ್ ಗಾಂಧಿಯವರು ಐಟಿ ಕ್ಷೇತ್ರಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದು, ಅವರ ಅವಧಿಯಲ್ಲಿಯೇ ದೇಶದ ಐಟಿ ಕ್ಷೇತ್ರ ಬೆಳವಣಿಗೆ ಕಂಡಿತ್ತು. ಅವರ ಕೊಡುಗೆಯನ್ನು ಸ್ಮರಿಸಿ ಸರ್ಕಾರ ರಾಜೀವ್ ಗಾಂಧಿ ಹೆಸರಿನಲ್ಲಿ ಪ್ರಶಸ್ತಿ ನೀಡಲಿದೆ ಎಂದು ಹೇಳಲಾಗಿದೆ.

ಇದೇ ತಿಂಗಳ 20ರಂದು ರಾಜೀವ್ ಗಾಂಧಿಯವರ ಜಯಂತಿಯಂದು ಪ್ರತಿವರ್ಷ ಈ ಪ್ರಶಸ್ತಿ ನೀಡಲಾಗುತ್ತದೆ, ಈ ವರ್ಷ ಅಕ್ಟೋಬರ್ 30ರೊಳಗೆ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಲಾಗುವುದು ಎಂದು ಸರ್ಕಾರದ ಆದೇಶ ಹೇಳಿದೆ.

ಮಹಾರಾಷ್ಟ್ರ ಸರ್ಕಾರದಲ್ಲಿ ಶಿವಸೇನೆ ಮತ್ತು ಎನ್ ಸಿಪಿಯ ಭಾಗವಾಗಿ ಕಾಂಗ್ರೆಸ್ ಕೂಡ ಇರುವುದು ಇಲ್ಲಿ ಮಹತ್ವದ್ದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Pakistan-Taliban Conflicts: ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕ್ ವಾಯುದಾಳಿ; ಬೆಚ್ಚಿದ ಕಾಬುಲ್, 400 ಜನರು ಸಾವು, 250 ಗಾಯ

ಗ್ಯಾಸ್ ಟ್ರಬಲ್ ಮಧ್ಯೆ ಕೊಂಚ ನಿರಾಳ: ಭಾರತಕ್ಕೆ ಬಂದಿಳಿದ ಎರಡು ತೈಲ ಹಡಗು, ಇಂದು ಮಂಗಳೂರು ತಲುಪಲಿದೆ 26 ಸಾವಿರ ಮೆಟ್ರಿಕ್ ಟನ್

ಉಪಚುನಾವಣೆ ಟಿಕೆಟ್ ಗಾಗಿ ಬಣ ಬಡಿದಾಟ: ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಕುರುಬ ನಾಯಕನಿಗೆ ಟಿಕೆಟ್: ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಚೆಕ್ ಮೇಟ್?

Kerala: ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಬಿಜೆಪಿ ಸೇರ್ಪಡೆ

West Asia conflict: ಬಾಗ್ದಾದ್​ನಲ್ಲಿನ ಅಮೆರಿಕ ರಾಯಭಾರ ಕಚೇರಿ ಮೇಲೆ ಡ್ರೋನ್-ಕ್ಷಿಪಣಿ ದಾಳಿ, ಪರಿಸ್ಥಿತಿ ಮತ್ತಷ್ಟು ಉದ್ವಿಗ್ನ

SCROLL FOR NEXT