ಕಾಲ್ಪನಿಕ ಚಿತ್ರ 
ದೇಶ

ಚಂದ್ರನ ನೆಲದಲ್ಲಿ ನೀರಿನಂಶ ಪತ್ತೆ ಹಚ್ಚಿದ ಇಸ್ರೊ ನೌಕೆ

ಚಂದ್ರಯಾನ-2 ಗಗನನೌಕೆಯ ಲ್ಯಾಂಡರ್ (ಚಂದ್ರವಾಹನ) ಚಂದ್ರನ ಮೇಲೆ ಅಪ್ಪಳಿಸಿ ಪತನಗೊಂಡಿದ್ದರೂ, ಚಂದ್ರನ ಸುತ್ತಲೇ ಸುತ್ತುತ್ತಿರುವ ನೌಕೆ ತನ್ನಲ್ಲಿನ ವೈಜ್ಞಾನಿಕ ಉಪಕರಣಗಳ ಸಹಾಯದಿಂದ ಚಂದ್ರನ ನೆಲದ ಮೇಲೆ ನೀರಿನಂಶ ಇರುವುದನ್ನು ಪತ್ತೆ ಹಚ್ಚಿದೆ.

ನವದೆಹಲಿ: ಚಂದ್ರಯಾನ-2 ಗಗನನೌಕೆಯ ಲ್ಯಾಂಡರ್ (ಚಂದ್ರವಾಹನ) ಚಂದ್ರನ ಮೇಲೆ ಅಪ್ಪಳಿಸಿ ಪತನಗೊಂಡಿದ್ದರೂ, ಚಂದ್ರನ ಸುತ್ತಲೇ ಸುತ್ತುತ್ತಿರುವ ನೌಕೆ ತನ್ನಲ್ಲಿನ ವೈಜ್ಞಾನಿಕ ಉಪಕರಣಗಳ ಸಹಾಯದಿಂದ ಚಂದ್ರನ ನೆಲದ ಮೇಲೆ ನೀರಿನಂಶ ಇರುವುದನ್ನು ಪತ್ತೆ ಹಚ್ಚಿದೆ. 

ಇದರಿಂದಾಗಿ ಇಸ್ರೋ ವಿಜ್ಞಾನಿಗಳು ಮುಂಬರುವ ಚಂದ್ರಯಾನ-3 ಯೋಜನೆಯತ್ತ ಆಶಾಭಾವದ ನೋಟ ಬೀರಿದ್ದಾರೆ. ಚಂದ್ರನ ಸುತ್ತ ಸುತ್ತುತ್ತಿರುವ ಗಗನನೌಕೆಯಲ್ಲಿನ ಇನ್ ಫ್ರಾರೆಡ್ ಸ್ಪೆಕ್ಟ್ರೊಮೀಟರ್ ಉಪಕರಣ ಚಂದ್ರನ ಮೇಲಿನ ಖನಿಜಗಳ ಅಧ್ಯಯನಕ್ಕೆಂದೇ ಅಭಿವೃದ್ಧಿಗೊಳಿಸಲಾಗಿತ್ತು. ಇದೇ ಉಪಕರಣ ಈಗ ಹೈಡ್ರಾಕ್ಸಿಲ್ ಮತ್ತು ನೀರಿನ ಕಣಗಳನ್ನು ಚಂದಿರನ ನೆಲದಲ್ಲಿ ಪತ್ತೆ ಹಚ್ಚಿದೆ. 

ಚಂದ್ರಯಾನ-೩ ಯೋಜನೆ 2022ರಲ್ಲಿ ಕಾರ್ಯಗತಗೊಳ್ಳಲಿದೆ. ಮುಂದಿನ ವರ್ಷಗಳಲ್ಲಿ ಹಲವು ದೇಶಗಳೂ ಚಂದ್ರನಲ್ಲಿಗೆ ಮಾನವ ಸಹಿತ ಮತ್ತು ಮಾನವ ರಹಿತ ಬಾಹ್ಯಾಕಾಶ ಯೋಜನೆಯನ್ನು ಕಾರ್ಯಗತಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಭಾರತದ ಬಾಹ್ಯಾಕಾಶ ಸಂಸ್ಥೆಯ ನೂತನ ಸಂಶೋಧನೆ ಮಹತ್ವಪೂರ್ಣವಾದುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT