ಮಮತಾ ಬ್ಯಾನರ್ಜಿ 
ದೇಶ

ಸೋನಿಯಾ ಗಾಂಧಿ ಕರೆದ ಪ್ರತಿಪಕ್ಷ ನಾಯಕರ ವರ್ಚುವಲ್ ಸಭೆಯಲ್ಲಿ ಟಿಎಂಸಿ ಭಾಗಿ ಸಾಧ್ಯತೆ

ಆಗಸ್ಟ್ 20ಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕರೆದಿರುವ ಪ್ರತಿಪಕ್ಷಗಳ ನಾಯಕರ ವರ್ಚುವಲ್ ಸಭೆಗೆ ತೃಣಮೂಲ ಕಾಂಗ್ರೆಸ್‌ ಆಹ್ವಾನವನ್ನು ಸ್ವೀಕರಿಸಿದ್ದಾರೆ ಎಂದು ಟಿಎಂಸಿ ಮುಖ್ಯಸ್ಥೆ, ಪಶ್ಟಿಮ ಬಂಗಾಳ ಮುಖ್ಯಮಂತ್ರಿ...

ಕೋಲ್ಕತಾ: ಆಗಸ್ಟ್ 20ಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕರೆದಿರುವ ಪ್ರತಿಪಕ್ಷಗಳ ನಾಯಕರ ವರ್ಚುವಲ್ ಸಭೆಗೆ ತೃಣಮೂಲ ಕಾಂಗ್ರೆಸ್‌ ಆಹ್ವಾನವನ್ನು ಸ್ವೀಕರಿಸಿದ್ದಾರೆ ಎಂದು ಟಿಎಂಸಿ ಮುಖ್ಯಸ್ಥೆ, ಪಶ್ಟಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ರಾಜಕೀಯ ಆಪ್ತರು ಖಚಿತಪಡಿಸಿದ್ದಾರೆ.

ಸೋನಿಯಾ ಗಾಂಧಿ ಅವರು ಕರೆದಿರುವ ಪ್ರತಿಪಕ್ಷಗಳ ನಾಯಕರ ಸಭೆಯಲ್ಲಿ ಟಿಎಂಸಿ ಭಾಗವಹಿಸುವ ಸಾಧ್ಯತೆ ಇದೆ.

ವಿರೋಧ ಪಕ್ಷದ ನಾಯಕರು, ನ್ಯಾಯಾಧೀಶರು ಮತ್ತು ಪತ್ರಕರ್ತರ ಫೋನ್ ಕದ್ದಾಲಿಕೆ ಪ್ರಕರಣ ಸಂಸತ್ತಿನಲ್ಲಿ ಕೋಲಾಹಲ ಸೃಷ್ಟಿಸಿದ್ದ ಬೆನ್ನಲ್ಲೇ ಸೋನಿಯಾ ಗಾಂಧಿ ಅವರು ಈ ಸಭೆ ಕರೆದಿದ್ದಾರೆ.

ಸಭೆಯ ಕಾರ್ಯಸೂಚಿಯ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದರೆ ವಿರೋಧ ಪಕ್ಷಗಳ ಒಗ್ಗಟ್ಟಾಗಲು ಈ ಸಭೆ ಸಹಾಯ ಮಾಡುವುದರ ಜೊತೆಗೆ ವಿರೋಧ ಪಕ್ಷಗಳನ್ನು ಕೆರಳಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸುವ ನಿರೀಕ್ಷೆಯಿದೆ.

ಮೂಲಗಳ ಪ್ರಕಾರ ಡಿಎಂಕೆ, ಎನ್‌ಸಿಪಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ ಸೇರಿದಂತೆ ಹಲವು ಪ್ರತಿಪಕ್ಷಗಳನ್ನು ಸಭೆಗೆ ಆಹ್ವಾನಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT