ಪ್ರಧಾನಿ ಮೋದಿ 
ದೇಶ

ಆಗಸ್ಟ್ 14 ಇನ್ನು ಮುಂದೆ 'ವಿಭಜನೆಯ ಕರಾಳ ನೆನಪಿನ ದಿನ': ಪ್ರಧಾನಿ ಮೋದಿ ಘೋಷಣೆ

ಆಗಸ್ಟ್​ 14ನ್ನು ದೇಶ ವಿಭಜನೆಯ ಕರಾಳ ನೆನಪಿನ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಹೇಳಿದ್ದಾರೆ. 

ನವದೆಹಲಿ: ಆಗಸ್ಟ್​ 14ನ್ನು ದೇಶ ವಿಭಜನೆಯ ಕರಾಳ ನೆನಪಿನ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಹೇಳಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ‘ವಿಭಜನೆಯ ನೋವನ್ನು ಎಂದಿಗೂ ಮರೆಯಲಾಗದು. ದ್ವೇಷ ಮತ್ತು ಹಿಂಸಾಚಾರದಿಂದಾಗಿ ನಮ್ಮ ಲಕ್ಷಾಂತರ ಸಹೋದರ ಸಹೋದರಿಯರು ಸ್ಥಳಾಂತರಗೊಂಡಿದ್ದರು. ಅನೇಕರು ಪ್ರಾಣ ಕಳೆದುಕೊಂಡಿದ್ದರು. ನಮ್ಮ ಜನರು ಪಟ್ಟ ಪಾಡುಗಳು ಮತ್ತು ತ್ಯಾಗದ ನೆನಪಿಗಾಗಿ ಆಗಸ್ಟ್ 14 ಅನ್ನು ವಿಭಜನೆಯ ಕರಾಳ ನೆನಪಿನ ದಿನವನ್ನಾಗಿ ಪರಿಗಣಿಸಲಾಗುವುದು’ ಎಂದು ಹೇಳಿದ್ದಾರೆ. 

‘ವಿಭಜನೆಯ ಕರಾಳ ನೆನಪಿನ ದಿನ’ವು ಸಾಮಾಜಿಕ ವಿಭಜನೆ, ಅಸಾಮರಸ್ಯದ ವಿಷವನ್ನು ತೆಗೆದುಹಾಕುವ ಅಗತ್ಯವನ್ನು ನೆನಪಿಸುತ್ತದೆ. ಏಕತೆ, ಸಾಮಾಜಿಕ ಸಾಮರಸ್ಯ ಮತ್ತು ಮಾನವ ಸಬಲೀಕರಣದ ಮನೋಭಾವವನ್ನು ಇನ್ನಷ್ಟು ಬಲಪಡಿಸಲಿದೆ ಎಂದು ಮತ್ತೊಂದು ಟ್ವೀಟ್‌ನಲ್ಲಿ ಆಶಿಸಿದ್ದಾರೆ.

ಈ ನಡುವೆ ನೆರೆ ರಾಷ್ಟ್ರ ಪಾಕಿಸ್ತಾನದಲ್ಲಿಂದು ಸ್ವಾತಂತ್ರ್ಯ ದಿನ ಆಚರಿಸಲಾಗುತ್ತಿದೆ. ಆಗಸ್ಟ್ 14ರ ದಿನವನ್ನು ದೇಶದ ಇತಿಹಾಸದಲ್ಲಿ ಕಣ್ಣೀರಿನಿಂದ ಬರೆಯಲಾಗಿದೆ. ದೇಶ ವಿಭಜನೆಯಾದ ದಿನ ಇದು. 

ಪಾಕಿಸ್ತಾನವನ್ನು 14 ಆಗಸ್ಟ್ 1947 ರಂದು ಮತ್ತು ಭಾರತವನ್ನು 15 ಆಗಸ್ಟ್ 1947 ರಂದು ಪ್ರತ್ಯೇಕ ರಾಷ್ಟ್ರವೆಂದು ಘೋಷಿಸಲಾಯಿತು. ಈ ವಿಭಜನೆಯ ಮೂಲಕ ಭಾರತವನ್ನು ಎರಡು ಭಾಗಗಳಾಗಿ ವಿಂಗಡಿಸುವುದರ ಜೊತೆಗೆ  ಬಂಗಾಳವನ್ನು ಕೂಡ ವಿಭಜಿಸಲಾಯಿತು ಮತ್ತು ಬಂಗಾಳದ ಪೂರ್ವ ಭಾಗವನ್ನು ಭಾರತದಿಂದ ಬೇರ್ಪಡಿಸಿ ಪೂರ್ವ ಪಾಕಿಸ್ತಾನವನ್ನು ರೂಪಿಸಲಾಯಿತು, ಅದು 1971 ರ ಯುದ್ಧದ ನಂತರ ಬಾಂಗ್ಲಾದೇಶವಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT