ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 
ದೇಶ

ಯೋಗಿ ಆದಿತ್ಯನಾಥ್ ವಿರುದ್ಧ ಸ್ಪರ್ಧಿಸಲಿದ್ದಾರೆ ಈ ಮಾಜಿ ಐಪಿಎಸ್ ಅಧಿಕಾರಿ 

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನೊಂದೇ ವರ್ಷ ಬಾಕಿದೆ ಇದ್ದು ಚುನಾವಣೆ ತಯಾರಿ ಪ್ರಾರಂಭವಾಗಿದೆ. 

ಲಖನೌ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನೊಂದೇ ವರ್ಷ ಬಾಕಿದೆ ಇದ್ದು ಚುನಾವಣೆ ತಯಾರಿ ಪ್ರಾರಂಭವಾಗಿದೆ. 

ಚುನಾವಣೆ ಸನಿಹವಾಗುತ್ತಿರುವಂತೆಯೇ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಸ್ಪರ್ಧಿಸಲು ಮಾಜಿ ಐಪಿಎಸ್ ಅಧಿಕಾರಿಯೊಬ್ಬರು ಉತ್ಸುಕರಾಗಿದ್ದಾರೆ. 

2020 ರ ಮಾರ್ಚ್ ನಲ್ಲಿ ಅವಧಿಗೂ ಮುನ್ನವೇ ಸೇವೆಗೆ ರಾಜೀನಾಮೆ ನೀಡಿದ್ದ ಅಮಿತಾಬ್ ಠಾಕೂರ್ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಸ್ಪರ್ಧಿಸಲಿದ್ದಾರೆ. ಈ ಬಗ್ಗೆ ಮಾಜಿ ಐಪಿಎಸ್ ಅಧಿಕಾರಿಯ ಪತ್ನಿ ನೂತನ್ ಠಾಕೂರ್ ಈ ಸ್ಪರ್ಧೆ ತನ್ನ ಪತಿಯ ತತ್ವ-ಸಿದ್ಧಾಂತಗಳಿಗಾಗಿ ಎಂದು ಹೇಳಿದ್ದಾರೆ. 

"ಯೋಗಿ ಆದಿತ್ಯನಾಥ್ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಪ್ರಜಾಪ್ರಭುತ್ವಕ್ಕೆ ವಿರುದ್ಧವಾದ, ಅನುಚಿತ, ದಮನಕಾರಿ, ಕಿರುಕುಳ ಮತ್ತು ತಾರತಮ್ಯದಿಂದ ಕೂಡಿದ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಆದ್ದರಿಂದ ಅಮಿತಾಬ್ ಅವರು ಆದಿತ್ಯನಾಥ್ ಸ್ಪರ್ಧಿಸುವ ವಿಧಾನಸಭಾ ಕ್ಷೇತ್ರದಿಂದಲೇ ಸ್ಪರ್ಧಿಸಲಿದ್ದಾರೆ ಎಂದು ನೂತನ್ ಠಾಕೂರ್ ಹೇಳಿದ್ದಾರೆ. 

"ಇದು ತತ್ವ-ಸಿದ್ಧಾಂತಗಳಿಗಾಗಿನ ಸ್ಪರ್ಧೆಯಾಗಿದ್ದು ಯೋಗಿ ಆದಿತ್ಯನಾಥ್ ಅವರ ತಪ್ಪು ನಿರ್ಣಯಗಳನ್ನು ಪ್ರತಿಭಟನೆ ನಡೆಸಲಿದ್ದೇವೆ" ಎಂದು ಹೇಳಿದ್ದಾರೆ. 2028 ರಲ್ಲಿ ನಿವೃತ್ತರಾಗಬೇಕಿದ್ದ ಅಮಿತಾಬ್ ಠಾಕೂರ್ ಗೆ 2021 ರ  ಮಾರ್ಚ್ 23 ನಲ್ಲಿ ಕಡ್ಡಾಯ ನಿವೃತ್ತಿ ನೀಡಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್; ನದಿ ಪಾತ್ರದಲ್ಲಿ ಕಟ್ಟೆಚ್ಚರ

ನಿನ್ನ ತಲೆ ಕಡಿತೀವಿ: ಈದ್ ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆ; ಹಿಂದೂ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ!