ಸಾಂದರ್ಭಿಕ ಚಿತ್ರ 
ದೇಶ

ಕಾಶ್ಮೀರ ಕಣಿವೆಗೆ ಉಗ್ರರನ್ನು ಸಾಗಿಸುತ್ತಿದ್ದ ಟ್ರಕ್‌ ತಡೆದಿದ್ದ ನಾಲ್ವರು ಸಿಐಎಸ್‌ಎಫ್ ಸಿಬ್ಬಂದಿಗೆ ಶೌರ್ಯ ಪದಕ

ಕಾಶ್ಮೀರ ಕಣಿವೆಯೊಳಗೆ ನುಸುಳಲು ಯತ್ನಿಸುತ್ತಿದ್ದ ಮೂವರು ಭಯೋತ್ಪಾದಕರನ್ನು ಅಡ್ಡಗಟ್ಟಿ ಹತ್ಯೆಗೈದಿದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ(ಸಿಐಎಸ್‌ಎಫ್)ಯ ನಾಲ್ವರು ಸಿಬ್ಬಂದಿಗೆ ಶೌರ್ಯ ಪದಕ ನೀಡಲಾಗಿದೆ.

ನವದೆಹಲಿ: ಕಾಶ್ಮೀರ ಕಣಿವೆಯೊಳಗೆ ನುಸುಳಲು ಯತ್ನಿಸುತ್ತಿದ್ದ ಮೂವರು ಭಯೋತ್ಪಾದಕರನ್ನು ಅಡ್ಡಗಟ್ಟಿ ಹತ್ಯೆಗೈದಿದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ(ಸಿಐಎಸ್‌ಎಫ್)ಯ ನಾಲ್ವರು ಸಿಬ್ಬಂದಿಗೆ ಶೌರ್ಯ ಪದಕ ನೀಡಲಾಗಿದೆ.

ಕಾನ್ ಸ್ಟೇಬಲ್ ಗಳಾದ ರಾಹುಲ್ ಕುಮಾರ್, ಮುತ್ತಮಾಲ ರವಿ, ಮುತುಮ್ ಬಿಕ್ರಂಜಿತ್ ಸಿಂಗ್ ಮತ್ತು ಅನಿಲ್ ಲಕ್ರಾ ಅವರು ಉಗ್ರರನ್ನು ಹತ್ಯೆ ಮಾಡಿದ್ದರು.

ಕಳೆದ ವರ್ಷ ಜನವರಿ 31 ರಂದು ಜಮ್ಮುವಿನ ನಗ್ರೋಟಾದಲ್ಲಿರುವ ಬಾನ್ ಟೋಲ್ ಪ್ಲಾಜಾದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿತ್ತು. 

ಜಮ್ಮುವಿನಿಂದ ಶ್ರೀನಗರಕ್ಕೆ ಚಲಿಸುತ್ತಿದ್ದ ಟ್ರಕ್ ಅನ್ನು ಪ್ಲಾಜಾದಲ್ಲಿ ಬೆಳಗ್ಗೆ 5.30 ರ ಸುಮಾರಿಗೆ ತಡೆದು ನಿಲ್ಲಿಸಲಾಗಿತ್ತು. ಅಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಹಾಗೂ ಸಿಐಎಸ್‌ಎಫ್ ಜಂಟಿ ತಂಡವನ್ನು ಭದ್ರತಾ ತಪಾಸಣೆಗಾಗಿ ನಿಯೋಜಿಸಲಾಗಿತ್ತು.

ಗೂಡ್ಸ್ ಕ್ಯಾರೇಜ್ ತೆರೆಯಲು ಪೊಲೀಸರು ಚಾಲಕನನ್ನು ಕೇಳಿದಾಗ, ಅದರಲ್ಲಿ ಅಡಗಿದ್ದ ಭಯೋತ್ಪಾದಕರು ಭದ್ರತಾ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ 

ಚೆಕ್ ಪೋಸ್ಟ್ ನಲ್ಲಿದ್ದ ಕಾನ್ ಸ್ಟೇಬಲ್ ಗಳಾದ ರಾಹುಲ್ ಕುಮಾರ್ ಮತ್ತು ಎಂ ರವಿ ತಕ್ಷಣ ಟ್ರಕ್ ಬಾಗಿಲನ್ನು ಲಾಕ್ ಮಾಡಿ, ಪ್ರತಿ ದಾಳಿ ನಡೆಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಹುಲ್ ಗಾಂಧಿಯ 'ವೋಟ್ ಚೋರಿ' ಆರೋಪ ಖಂಡಿಸಿ 272 ಗಣ್ಯರಿಂದ ಬಹಿರಂಗ ಪತ್ರ; ಚುನಾವಣಾ ಆಯೋಗದ ಪರವಾಗಿ ವಾದ!

'ನರಕಾಸುರ' ಮೋದಿಯನ್ನು ಕೊಲ್ಲಬೇಕು': ಜನರ ಎದುರೇ DMK ನಾಯಕನಿಂದ ಕೊಲೆ ಬೆದರಿಕೆ, ಚಪ್ಪಾಳೆ ತಟ್ಟಿದ ಮಹಿಳೆಯರು, Video

ರೈಲಿನಲ್ಲಿ ಯುವಕನೋರ್ವ ನನ್ನ ಕುತ್ತಿಗೆ, ಬೆನ್ನು, ಖಾಸಗಿ ಭಾಗ ಮುಟ್ಟಿದ್ದ, ತಿರುಗಿ ನೋಡುವಷ್ಟರಲ್ಲಿ...: ಸಾರ್ವಜನಿಕ ಸ್ಥಳದಲ್ಲಾಗಿದ್ದ ಕರಾಳ ಘಟನೆ ತೆರದಿಟ್ಟ ನಟಿ Girija Oak

'ಕೆಂಪು ಕೋಟೆಯಿಂದ ಕಾಶ್ಮೀರದ ಕಾಡುಗಳವರೆಗೂ ನುಗ್ಗಿ ಭಾರತವನ್ನು ಹೊಡೆದಿದ್ದೇವೆ: ಈವರೆಗೂ ಶವ ಎಣಿಕೆ ಮಾಡೋದಕ್ಕೆ ಆಗ್ತಿಲ್ಲ! ಪಾಕಿಸ್ತಾನದ ಉದ್ಧಟತನ

ಜೈಲಿನಲ್ಲಿ ರಾಜಾತಿಥ್ಯ ವಿಡಿಯೋ ಲೀಕ್ ಕೇಸ್: ನನಗೇನು ಗೊತ್ತಿಲ್ಲ ಅನ್ನುತ್ತಿದ್ದ ಧನ್ವೀರ್ ಈಗ ವಿಜಯಲಕ್ಷ್ಮೀ ಹೆಸರು ಬಾಯಿಬಿಟ್ಟ!

SCROLL FOR NEXT