ರಾಹುಲ್ ಗಾಂಧಿ 
ದೇಶ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವಿಟರ್ ಖಾತೆ ಮರುಸ್ಥಾಪನೆ

ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಟ್ವಿಟರ್ ಖಾತೆಯನ್ನು ಶನಿವಾರ ಮರುಸ್ಥಾಪಿಸಲಾಗಿದೆ. 

ನವದೆಹಲಿ: ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಟ್ವಿಟರ್ ಖಾತೆಯನ್ನು ಶನಿವಾರ ಮರುಸ್ಥಾಪಿಸಲಾಗಿದೆ. 

ವಾಯುವ್ಯ ದಿಲ್ಲಿಯಲ್ಲಿ ಅತ್ಯಾಚಾರ ಹಾಗೂ ಹತ್ಯೆಗೆ ಒಳಗಾದ ಒಂಬತ್ತು ವರ್ಷದ ಬಾಲಕಿಯ ಸಂತ್ರಸ್ತ ಕುಟುಂಬದ ಚಿತ್ರಗಳನ್ನು ಟ್ವೀಟ್ ಮಾಡಿದ ನಂತರ ರಾಹುಲ್ ಗಾಂಧಿಯವರ ಟ್ವಿಟರ್  ಖಾತೆಯನ್ನು ಕಳೆದ ವಾರ ತಾತ್ಕಾಲಿಕವಾಗಿ ಸ್ಥಗಿತ ಗೊಳಿಸಲಾಗಿತ್ತು.

ಬಳಿಕ ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಟ್ವಿಟರ್, ರಾಹುಲ್ ಗಾಂಧಿ ಅವರು ಸಂಸ್ಥೆಯ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಿತ್ತು.

ಇದೀಗ ರಾಹುಲ್ ಅವರ ಟ್ವಿಟರ್ ಹ್ಯಾಂಡಲ್ ಅನ್ನು ಮರುಸ್ಥಾಪಿಸಲಾಗಿದ್ದು, ರಾಹುಲ್ ಅವರ ಚಿತ್ರಗಳನ್ನು ಹಂಚಿಕೊಂಡ ಕೆಲವು ಪಕ್ಷದ ನಾಯಕರ ಟ್ವಿಟರ್ ಖಾತೆಗಳನ್ನು ಕೂಡ ಮರುಸ್ಥಾಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ಕಾಂಗ್ರೆಸ್ ಪಕ್ಷದ ಮುಖಂಡರೊಬ್ಬರು ಹೇಳಿದ್ದು, "ರಾಹುಲ್ ಗಾಂಧಿಯವರ ಟ್ವಿಟರ್ ಖಾತೆಯನ್ನು ಅನ್‌ಲಾಕ್ ಮಾಡಲಾಗಿದೆ. ಕೆಲವು ನಾಯಕರ ಖಾತೆಗಳನ್ನು ಕೂಡ ಮರುಸ್ಥಾಪಿಸಲಾಗಿದೆ ಎಂದು ಹೇಳಿದ್ದಾರೆ. 

ನಿನ್ನೆಯಷ್ಟೇ ಟ್ವಿಟರ್ ವಿರುದ್ಧ ರಾಹುಲ್ ಗಾಂಧಿಯವರು ಹರಿಹಾಯ್ದಿದ್ದರು. ಟ್ವಿಟರ್ ರಾಷ್ಟ್ರೀಯ ರಾಜಕೀಯ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಎಂದು ಆರೋಪಿಸಿದ್ದರು. ತಮ್ಮ ಟ್ವಿಟರ್ ಹ್ಯಾಂಡಲ್ ಅನ್ನು ಮುಚ್ಚುವುದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ದಾಳಿ ಮಾಡಿದಂತೆ ಎಂದು ಹೇಳಿದ್ದರು.

"ಟ್ವಿಟರ್‌ನ ಅಪಾಯಕಾರಿ ಆಟ" ಎಂಬ ಶೀರ್ಷಿಕೆಯೊಂದಿಗೆ ಯೂಟ್ಯೂಬ್ ವೀಡಿಯೊ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿ, ಟ್ವಿಟರ್ ವಾಸ್ತವವಾಗಿ ಒಂದು ತಟಸ್ಥ, ವಸ್ತುನಿಷ್ಠ ವೇದಿಕೆಯಲ್ಲ ಎಂಬುದು ಈಗ ಸ್ಪಷ್ಟವಾಗಿದೆ. ಇದು ಪಕ್ಷಪಾತದ ವೇದಿಕೆಯಾಗಿದೆ. ಇದು ಆ ದಿನದ ಸರಕಾರ ಹೇಳುವುದನ್ನು ಕೇಳುತ್ತದೆ. ಕಂಪನಿಯು ತನ್ನ ಲಕ್ಷಾಂತರ ಅನುಯಾಯಿಗಳ ಅಭಿಪ್ರಾಯದ ಹಕ್ಕನ್ನು ನಿರಾಕರಿಸುತ್ತಿದೆ. ಇದು ಅನ್ಯಾಯವಾಗಿದೆ 'ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT